ಬೆಂಗಳೂರು: ಮಾನವ ಕಳ್ಳಸಾಗಣೆಯಲ್ಲಿ ತೊಡಗಿದ್ದ ಖದೀಮ ಅಂದರ್, 32 ಯುವತಿಯರ ರಕ್ಷಣೆ 
ರಾಜ್ಯ

ಬೆಂಗಳೂರು: ಮಾನವ ಕಳ್ಳಸಾಗಣೆಯಲ್ಲಿ ತೊಡಗಿದ್ದ ಖದೀಮ ಅಂದರ್, 32 ಯುವತಿಯರ ರಕ್ಷಣೆ

ವಿದೇಶದಲ್ಲಿ ವಿದ್ಯಾಭ್ಯಾಸ ಕಲ್ಪಿಸುವ ನೆಪ ಹೇಳಿ ಯುವತಿಯರನ್ನು ಅಕ್ರಮವಾಗಿ ವಿದೇಶಕ್ಕೆ ಸಾಗಿಸುತಿದ್ದ ಖದೀಮನೊಬ್ಬನನ್ನು ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ.

ಬೆಂಗಳೂರು: ವಿದೇಶದಲ್ಲಿ ವಿದ್ಯಾಭ್ಯಾಸ ಕಲ್ಪಿಸುವ ನೆಪ ಹೇಳಿ ಯುವತಿಯರನ್ನು ಅಕ್ರಮವಾಗಿ ವಿದೇಶಕ್ಕೆ ಸಾಗಿಸುತಿದ್ದ ಖದೀಮನೊಬ್ಬನನ್ನು ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ.
ಟೊಮಿ ಟಾಮ್ (36) ಎಂಬ ಆರೋಪಿ ಪೋಲೀಸರ ಬಲೆಗೆ ಬಿದ್ದಿದ್ದು ಈ ವೇಳೆ ಅವನ ಸಂಪರ್ಕದಲ್ಲಿದ್ದ 32 ಯುವತಿಯರನ್ನು ರಕ್ಷಿಸಲಾಗಿದೆ.
ಟೊಮಿ ತಾನು ಯುವತಿಯರಿಗೆ ವಿದೇಶದಲ್ಲಿ ವಿದ್ಯಾಭ್ಯಾಸ ಕಲ್ಪಿಸುವುದಾಗಿ ನಂಬಿಸಿದ್ದಾನೆ. ರಕ್ಷಿಸಲಾದ 32 ಯುವತಿಯರೂ ಕೇರಳ ಮೂಲದವರಾಗಿದ್ದು ಇವರೆಲ್ಲಾ ಬೆಂಗಳೂರಿನಲ್ಲಿ ನರ್ಸಿಂಗ್ ವಿದ್ಯಾಭ್ಯಾಸ ಪಡೆದಿದ್ದರು ಎನ್ನಲಾಗಿದೆ. ಟೊಮಿ  ಅವರಿಗೆ ಜರ್ಮನಿಯಲ್ಲಿ ಅಲ್ಪಾವಧಿ ಕೋರ್ಸ್ ಗೆ ಸೇರಿಸುವ ಆಮಿಷವೊಡ್ಡಿ ವಿದೇಶಕ್ಕೆ ಕರೆದೊಯ್ಯುತ್ತಿದ್ದ.
ಆದರೆ ವಿಮಾನ ಸಿಬ್ಬಂದಿಗೆ ಯುವತಿಯರನ್ನು ಕಂಡು ಸಂದೇಹ ಮೂಡಿದ್ದು ತಕ್ಷಣ ಇಮಿಗ್ರೇಷನ್ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಆಗ ಸತ್ಯ ಬಯಲಾಗಿದೆ. ತಕ್ಷಣ ವಿಮಾನ ನಿಲ್ದಾಣದ ಅಧಿಕಾರಿಗಳು ಪೋಲೀಸರಿಗೆ ಮಾಹಿತಿ ನೀಡಿದ್ದು ಮಾನವ ಕಳ್ಳಸಆಗಣೆ ಜಾಲದ ನಂಟು ಹೊಂದಿದ್ದ ಆರೋಪಿ ಟೊಮಿಯನ್ನು ಬಂಧಿಸಲಾಗಿದೆ.
ಆರೋಪಿಯು ಮಂಗಳೂರಿನಲ್ಲಿ ಶಿಕ್ಷಣ ಸಲಹಾ ಸಂಸ್ಥೆಯನ್ನು ನಡೆಸುತ್ತಿದ್ದ.32 ನರ್ಸ್ ಗಳೂ ಈತನ ಮಾತು ನಂಬಿ ಬೆಂಗಳೂರಿಗೆ ಬಂದಿದ್ದರು. ಆರೋಪಿ ಟೊಮಿ ಬೆಂಗಳೂರಿನಿಂದ ಅಮೆರಿಕಕ್ಕೆ ಅವರನ್ನು ಸಾಗಾಟ ಮಾಡಲು ಸಂಚು ರೂಪಿಸಿದ್ದ. ಆದರೆ ಅಷ್ಟೂ ಯುವತಿಯರು ಒಂದೇ ವಿಶ್ವವಿದ್ಯಾನಿಲಯದಲ್ಲಿ ವಿದ್ಯಾಭ್ಯಾಸಕ್ಕಾಗಿ ತೆರಳುವುದು ತಿಳಿದ ವಿಮಾನ ಸಿಬ್ಬಂದಿಗೆ ಅನುಮಾನ ಬಂದು ಇಮಿಗ್ರೇಷನ್ ಸಿಬ್ಬಂದಿಗೆ ವಿಚಾರ ಮುಟ್ಟಿಸಿದ್ದರು. ಘಟನೆ ಕುರಿತು ಏರ್ ಪೋರ್ಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT