ಬೆಂಗಳೂರು: ಮಾನವ ಕಳ್ಳಸಾಗಣೆಯಲ್ಲಿ ತೊಡಗಿದ್ದ ಖದೀಮ ಅಂದರ್, 32 ಯುವತಿಯರ ರಕ್ಷಣೆ 
ರಾಜ್ಯ

ಬೆಂಗಳೂರು: ಮಾನವ ಕಳ್ಳಸಾಗಣೆಯಲ್ಲಿ ತೊಡಗಿದ್ದ ಖದೀಮ ಅಂದರ್, 32 ಯುವತಿಯರ ರಕ್ಷಣೆ

ವಿದೇಶದಲ್ಲಿ ವಿದ್ಯಾಭ್ಯಾಸ ಕಲ್ಪಿಸುವ ನೆಪ ಹೇಳಿ ಯುವತಿಯರನ್ನು ಅಕ್ರಮವಾಗಿ ವಿದೇಶಕ್ಕೆ ಸಾಗಿಸುತಿದ್ದ ಖದೀಮನೊಬ್ಬನನ್ನು ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ.

ಬೆಂಗಳೂರು: ವಿದೇಶದಲ್ಲಿ ವಿದ್ಯಾಭ್ಯಾಸ ಕಲ್ಪಿಸುವ ನೆಪ ಹೇಳಿ ಯುವತಿಯರನ್ನು ಅಕ್ರಮವಾಗಿ ವಿದೇಶಕ್ಕೆ ಸಾಗಿಸುತಿದ್ದ ಖದೀಮನೊಬ್ಬನನ್ನು ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ.
ಟೊಮಿ ಟಾಮ್ (36) ಎಂಬ ಆರೋಪಿ ಪೋಲೀಸರ ಬಲೆಗೆ ಬಿದ್ದಿದ್ದು ಈ ವೇಳೆ ಅವನ ಸಂಪರ್ಕದಲ್ಲಿದ್ದ 32 ಯುವತಿಯರನ್ನು ರಕ್ಷಿಸಲಾಗಿದೆ.
ಟೊಮಿ ತಾನು ಯುವತಿಯರಿಗೆ ವಿದೇಶದಲ್ಲಿ ವಿದ್ಯಾಭ್ಯಾಸ ಕಲ್ಪಿಸುವುದಾಗಿ ನಂಬಿಸಿದ್ದಾನೆ. ರಕ್ಷಿಸಲಾದ 32 ಯುವತಿಯರೂ ಕೇರಳ ಮೂಲದವರಾಗಿದ್ದು ಇವರೆಲ್ಲಾ ಬೆಂಗಳೂರಿನಲ್ಲಿ ನರ್ಸಿಂಗ್ ವಿದ್ಯಾಭ್ಯಾಸ ಪಡೆದಿದ್ದರು ಎನ್ನಲಾಗಿದೆ. ಟೊಮಿ  ಅವರಿಗೆ ಜರ್ಮನಿಯಲ್ಲಿ ಅಲ್ಪಾವಧಿ ಕೋರ್ಸ್ ಗೆ ಸೇರಿಸುವ ಆಮಿಷವೊಡ್ಡಿ ವಿದೇಶಕ್ಕೆ ಕರೆದೊಯ್ಯುತ್ತಿದ್ದ.
ಆದರೆ ವಿಮಾನ ಸಿಬ್ಬಂದಿಗೆ ಯುವತಿಯರನ್ನು ಕಂಡು ಸಂದೇಹ ಮೂಡಿದ್ದು ತಕ್ಷಣ ಇಮಿಗ್ರೇಷನ್ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಆಗ ಸತ್ಯ ಬಯಲಾಗಿದೆ. ತಕ್ಷಣ ವಿಮಾನ ನಿಲ್ದಾಣದ ಅಧಿಕಾರಿಗಳು ಪೋಲೀಸರಿಗೆ ಮಾಹಿತಿ ನೀಡಿದ್ದು ಮಾನವ ಕಳ್ಳಸಆಗಣೆ ಜಾಲದ ನಂಟು ಹೊಂದಿದ್ದ ಆರೋಪಿ ಟೊಮಿಯನ್ನು ಬಂಧಿಸಲಾಗಿದೆ.
ಆರೋಪಿಯು ಮಂಗಳೂರಿನಲ್ಲಿ ಶಿಕ್ಷಣ ಸಲಹಾ ಸಂಸ್ಥೆಯನ್ನು ನಡೆಸುತ್ತಿದ್ದ.32 ನರ್ಸ್ ಗಳೂ ಈತನ ಮಾತು ನಂಬಿ ಬೆಂಗಳೂರಿಗೆ ಬಂದಿದ್ದರು. ಆರೋಪಿ ಟೊಮಿ ಬೆಂಗಳೂರಿನಿಂದ ಅಮೆರಿಕಕ್ಕೆ ಅವರನ್ನು ಸಾಗಾಟ ಮಾಡಲು ಸಂಚು ರೂಪಿಸಿದ್ದ. ಆದರೆ ಅಷ್ಟೂ ಯುವತಿಯರು ಒಂದೇ ವಿಶ್ವವಿದ್ಯಾನಿಲಯದಲ್ಲಿ ವಿದ್ಯಾಭ್ಯಾಸಕ್ಕಾಗಿ ತೆರಳುವುದು ತಿಳಿದ ವಿಮಾನ ಸಿಬ್ಬಂದಿಗೆ ಅನುಮಾನ ಬಂದು ಇಮಿಗ್ರೇಷನ್ ಸಿಬ್ಬಂದಿಗೆ ವಿಚಾರ ಮುಟ್ಟಿಸಿದ್ದರು. ಘಟನೆ ಕುರಿತು ಏರ್ ಪೋರ್ಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ಸಿಎಂ ಸ್ಥಾನಕ್ಕೆ ರಾಜೀನಾಮೆ?, ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

SCROLL FOR NEXT