ಜಿ.ಎಸ್ ಮೌನಿಷಾ ಹಾಗೂ ಹಿಮಚಂದ್ರ 
ರಾಜ್ಯ

ಕೋಲಾರ: ಮನೆಯವ್ರು ನಮ್ಮ ಪ್ರೀತಿನ ಒಪ್ಪಿಕೊಳ್ಳಲಿಲ್ಲ ಎಂದು ರೈಲಿಗೆ ತಲೆಕೊಟ್ಟ ಪ್ರೇಮಿಗಳು!

ಮನೆಯವರು ತಮ್ಮ ಪ್ರೀತಿಯನ್ನು ಒಪ್ಪಿಕೊಳ್ಳಲಿಲ್ಲ ಎಂದು ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರದ ಬಂಗಾರಪೇಟೆ ಗಡಿ ಭಾಗದಲ್ಲಿ ನಡೆದಿದೆ.

ಕೋಲಾರ: ಮನೆಯವರು ತಮ್ಮ ಪ್ರೀತಿಯನ್ನು ಒಪ್ಪಿಕೊಳ್ಳಲಿಲ್ಲ ಎಂದು ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರದ ಬಂಗಾರಪೇಟೆ ಗಡಿ ಭಾಗದಲ್ಲಿ ನಡೆದಿದೆ.
ಬಂಗಾರಪೇಟೆ ಕರ್ನಾಟಕ-ಆಂಧ್ರ ಗಡಿ ಭಾಗದ ಕುಪ್ಪಂ ರೈಲ್ವೆ ನಿಲ್ದಾಣದಲ್ಲಿ ಬುಧವಾರ ಬೆಳಿಗ್ಗೆ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆತ್ಮಹತ್ಯೆಗೆ ಶರಣಾದವರನ್ನು ಜಿ.ಎಸ್ ಮೌನಿಷಾ ಹಾಗೂ ಹಿಮಚಂದ್ರ ಎಂದು ಗುರುತಿಸಲಾಗಿದ್ದು ಇಬ್ಬರೂ ಮಿಳುನಾಡಿನ ತಿರುವೆಲ್ಲೂರು ನಿವಾಸಿಗಳು ಎನ್ನಲಾಗಿದೆ. ಈ ಇಬ್ಬರೂ ಕುಪ್ಪಂನ ಅಣ್ಣಾಮಲೈ ವಿಶ್ವವಿದ್ಯಾಲಯದಲ್ಲಿ ಅಂತಿಮ ವರ್ಷದ ಬಿಎಸ್‍ಸಿ ಓದುತ್ತಿದ್ದರು.
ಕೆಲ ವರ್ಷಗಳಿಂದಲೂ ಮೌನಿಷಾ ಹಾಗೂ ಹಿಮಚಂದ್ರ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಇಬ್ಬರ ಮನೆಯಲ್ಲಿಯೂ ಈ ಪ್ರೀತಿಗೆ ವಿರೋಧವಿತ್ತು.ಇದರಿಂದ ಬೇಸತ್ತ ಪ್ರೇಮಿಗಳು ಇಂದು ಬೆಳಿಗ್ಗೆ ಕುಪ್ಪಂ ರೈಲ್ವೆ ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಘಟನೆ ಸಂಬಂಧ ಕುಪ್ಪಂ ರೈಲ್ವೆ ಪೋಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

2nd Test, Day 3: ಮೊದಲ ಇನ್ನಿಂಗ್ಸ್ ನಲ್ಲಿ 248 ರನ್ ಗೆ ವಿಂಡೀಸ್ ಆಲೌಟ್, ಫಾಲೋಆನ್ ಹೇರಿದ ಭಾರತ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

SCROLL FOR NEXT