ಕೆಸರಿನಲ್ಲಿ ಬಿದ್ದಿದ್ದ ತಾಯಿ ಆನೆ 
ರಾಜ್ಯ

ಹಾಸನ: ಕೆಸರಿನಲ್ಲಿ ಸಿಲುಕಿ ರಕ್ಷಿಸಲ್ಪಟ್ಟಿದ್ದ ಆನೆ ಚಿಕಿತ್ಸೆ ಫಲಿಸದೇ ಸಾವು

ಹಾಸನದಲ್ಲಿ ಕೆಸರಿನಲ್ಲಿ ಸಿಲುಕಿ ಕಾಲು ಮುರಿದುಕೊಂಡು ಬಳಿಕ ರಕ್ಷಿಸಲ್ಪಟ್ಟಿದ್ದ ಕಾಡಾನೆ ಗುರುವಾರ ಮೃತಪಟ್ಟಿದೆ ಎಂದು ತಿಳಿದುಬಂದಿದೆ.

ಹಾಸನ: ಹಾಸನದಲ್ಲಿ ಕೆಸರಿನಲ್ಲಿ ಸಿಲುಕಿ ಕಾಲು ಮುರಿದುಕೊಂಡು ಬಳಿಕ ರಕ್ಷಿಸಲ್ಪಟ್ಟಿದ್ದ ಕಾಡಾನೆ ಗುರುವಾರ ಮೃತಪಟ್ಟಿದೆ ಎಂದು ತಿಳಿದುಬಂದಿದೆ.
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಕಡಗರಹಳ್ಳಿ ಗ್ರಾಮದ ಸಮೀಪ ಕೆಸರಿನಲ್ಲಿ ಸಿಲುಕಿ ನಿತ್ರಾಣಗೊಂಡಿದ್ದ ಕಾಡಾನೆ ಗುರುವಾರ ಮೃತಪಟ್ಟಿದೆ. ಆನೆಯೊಂದಿಗೆ ಇದ್ದ ಅದರ ಮರಿ ಆನೆ ಇದೀಗ ಅನಾಥವಾಗಿದೆ. 
ಕೆಸರಿನಲ್ಲಿ ಸಿಲುಕಿ ಒದ್ದಾಡುತ್ತಿದ್ದ ಕಾಡಾನೆಯನ್ನು 2 ದಿನಗಳ ಹಿಂದೆಯಷ್ಟೇ ರಕ್ಷಣೆ ಮಾಡಲಾಗಿತ್ತು. ಕೆಸರಿನಲ್ಲಿ ಸಿಲುಕಿದ ಪರಿಣಾಮ ಆನೆಯ ಕಾಲು ಮುರಿದಿತ್ತು. ಹೀಗಾಗಿ ಆನೆಗೆ ನಡೆಯಲು ಸಾಧ್ಯವಾಗುತ್ತಿರಲಿಲ್ಲ. ಅದಕ್ಕೆ ಸೂಕ್ತ ಚಿಕಿತ್ಸೆ ನೀಡಲು ವನ್ಯಜೀವಿ ವೈದ್ಯರು ಪರದಾಡಿದ್ದರು. ಅದೇ ಸ್ಥಳದಲ್ಲೇ ಆನೆಗೆ ಚಿಕಿತ್ಸೆ ನೀಡಲಾಗುತ್ತಿತ್ತಾದರೂ, ವೈದ್ಯರು ಆನೆಯನ್ನು ಶಿಬಿರಕ್ಕೆ ರವಾನೆ ಮಾಡಿ ಚಿಕಿತ್ಸೆ ಮುಂದುವರಿಸಲು ನಿರ್ಧರಿಸಿದ್ದರು. ಆದರೆ ಸಾಕಾನೆ ಶಿಬಿರಕ್ಕೆ ಸ್ಥಳಾಂತರ ಮಾಡಿ ಚಿಕಿತ್ಸೆ ನೀಡಲು ಅನುಮತಿ ಸಿಗದಿದ್ದರಿಂದ ಅಗತ್ಯ ಚಿಕಿತ್ಸೆ ದೊರಕದೆ ಆನೆ ಮೃತಪಟ್ಟಿದೆ ಎನ್ನಲಾಗಿದೆ.
ಈ ಮೂಲಕ ಸತತ ಆರು ದಿನಗಳ ನರಳಾಟದ ಬಳಿಕ ಮೂಕಪ್ರಾಣಿ ಪ್ರಾಣಬಿಟ್ಟಿದೆ.  6 ತಿಂಗಳ ಮರಿಯ ರೋದನ ಮುಗಿಲು ಮುಟ್ಟಿದ್ದು, ನೆರೆದವರ ಮನಕಲಕುವಂತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮು- ಕಾಶ್ಮೀರದಲ್ಲಿ ಭಾರೀ ಮಳೆಗೆ ಪ್ರವಾಹ ಭೀತಿ: ಚೆನಾಬ್, ಝೇಲಂನಲ್ಲಿ ಅಪಾಯದ ಮಟ್ಟ ಮೀರಿದ ನೀರು; ಶಾಲೆಗಳಿಗೆ ರಜೆ, ಹೆದ್ದಾರಿ ಬಂದ್

ಅಮೆರಿಕಾ ಮೇಲೆ ಭಾರತ ನಂಬಲಸಾಧ್ಯ ತೆರಿಗೆಯನ್ನು ವಿಧಿಸಿದ್ದು, ಇದು ವಿಶ್ವದಲ್ಲೇ ಅತ್ಯಧಿಕ: ಸುಂಕಾಸ್ತ್ರ ಕ್ರಮಕ್ಕೆ ಟ್ರಂಪ್ ಸಮರ್ಥನೆ

ನಿಮ್ಮ-ಭಾರತ ಸಂಬಂಧಕ್ಕೆ ನಮ್ಮ ತಕರಾರಿಲ್ಲ ಆದರೆ, ನಮ್ಮ ಬಾಂಧವ್ಯ ಗಟ್ಟಿಗೊಳಿಸೋಣ: ರಷ್ಯಾಗೆ ಪಾಕ್ ಮನವಿ

ಎರಡು ಗಂಟೆ ಮಳೆ - 20 ಕಿ.ಮೀ. ಟ್ರಾಫಿಕ್ ಜಾಮ್: ಮಿಲೇನಿಯಮ್ ಸಿಟಿ ನಗರಾಭಿವೃದ್ಧಿ ಟ್ರಿಪಲ್ ಎಂಜಿನ್ ಮಾದರಿ: BJP ಕಾಲೆಳೆದ ಕಾಂಗ್ರೆಸ್!

'ಸ್ವಾತಂತ್ರ್ಯ ಹೋರಾಟದಲ್ಲಿ ಯಾರ ಮನೆ ನಾಯಿ ಭಾಗವಹಿಸಿತ್ತೆಂದು ಬಹಿರಂಗ ಪಡಿಸಲಿ: ರಾಜ್ಯ ಸರ್ಕಾರದಲ್ಲಿ ಬಚ್ಚಲುಬಾಯಿ ಮಂತ್ರಿಗಳು!'

SCROLL FOR NEXT