ಎಚ್ ಡಿ ಕುಮಾರಸ್ವಾಮಿ 
ರಾಜ್ಯ

ಸಿಎಂ ಕುಮಾರಸ್ವಾಮಿ ರಾಜೀನಾಮೆ ವರದಿ: ಟಿವಿ5 ವಿರುದ್ಧ ಎಫ್ಐಆರ್ ದಾಖಲು

ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ವರದಿ ಮಾಡಿದ್ದ ಕನ್ನಡ ಸುದ್ದಿ ವಾಹಿನಿ ಟಿವಿ5 ವಿರುದ್ಧ....

ಬೆಂಗಳೂರು: ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು  ಅನಾರೋಗ್ಯದ ಹಿನ್ನೆಲೆಯಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ವರದಿ ಮಾಡಿದ್ದ ಕನ್ನಡ ಸುದ್ದಿ ವಾಹಿನಿ ಟಿವಿ5 ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ವರದಿ ಖಂಡಿಸಿ ಜೆಡಿಎಸ್ ಕಾರ್ಯಕರ್ತರು ಇಂದು ಬೆಂಗಳೂರಿನ ಟಿವಿ5 ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಅಲ್ಲದೆ ಸುಳ್ಳು ಸುದ್ದಿ ಪ್ರಸಾರ ಮಾಡಿದ ಸುದ್ದಿ ವಾಹಿನಿ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಜೆಡಿಎಸ್ ಬೆಂಗಳೂರು ನಗರ ಘಟಕದ ಅಧ್ಯಕ್ಷ ಆರ್ ಪ್ರಕಾಶ್ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.
ಪ್ರಕಾಶ್ ಅವರು ಟಿವಿ5 ವರದಿಗಾರ ಹಾಗೂ ಪ್ರಧಾನ ಸಂಪಾದಕರ ವಿರುದ್ಧ ಹೈಗ್ರೌಂಡ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಟಿವಿ5 ಕಚೇರಿ ಶೇಷಾದ್ರಿಪುರಂ ಪೊಲೀಸ್ ಠಾಣೆ ವ್ಯಾಪ್ತಿಗೆ ಬರುವುದರಿಂದ ಪ್ರಕರಣವನ್ನು ಅಲ್ಲಿಗೆ ವರ್ಗಾಯಿಸಲಾಗಿದೆ.
ಶೇಷಾದ್ರಿಪುರಂ ಪೊಲೀಸರು ಜೆಡಿಎಸ್ ಮುಖಂಡನ ದೂರಿನ ಆಧಾರದ ಟಿವಿ5 ವಿರುದ್ಧ ಸೆಕ್ಷನ್ 120ಬಿ, 153 ಹಾಗೂ 505ರಡಿ ಎಫ್ಐಆರ್ ದಾಖಲಿಸಿದ್ದಾರೆ.
ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ ಕುಮಾರಸ್ವಾಮಿ ಅವರು ಬೆಳಗಾವಿ ಅಧಿವೇಶನದ ನಂತರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ, ಚಿಕಿತ್ಸೆಗಾಗಿ ಲಂಡನ್ ಗೆ ತೆರಳಲಿದ್ದಾರೆ ಎಂದು ಟಿವಿ5 ವರದಿ ಮಾಡಿತ್ತು. ಆದರೆ ವರದಿಯನ್ನು ಸ್ಪಷ್ಟವಾಗಿ ತಳ್ಳಿಹಾಕಿದ್ದ ಸಿಎಂ, ಅನಾರೋಗ್ಯದ ಕಾರಣಗಳಿಂದ ನಾನು ರಾಜೀನಾಮೆ ನೀಡಲಿದ್ದೇನೆ ಎಂದು ಕೆಲ ಟಿವಿ ಸುದ್ದಿ ವಾಹಿನಿಗಳಲ್ಲಿ ಪ್ರಸಾರವಾಗುತ್ತಿರುವ ಸುದ್ದಿಯು ಸತ್ಯಕ್ಕೆ ದೂರವಾಗಿದ್ದು, ಪ್ರಸಾರವಾಗುತ್ತಿರುವ ಎಲ್ಲ ಅಂಶಗಳು ಆಧಾರ ರಹಿತವಾಗಿವೆ ಎಂದು ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT