ಸಾಂದರ್ಭಿಕ ಚಿತ್ರ 
ರಾಜ್ಯ

ಆಗುಂಬೆ ಬಳಿ ರೇವ್ ಪಾರ್ಟಿ, ಹೋಮ್ ಸ್ಟೇ ಮಾಲೀಕರ ವಿರುದ್ಧ ಪ್ರಕರಣ ದಾಖಲು

ಆಗುಂಬೆ ದಟ್ಟಕಾನನದಲ್ಲಿ ಹೋಮ್ ಸ್ಟೇಯೊಂದರ ಬಳಿ ಇದೇ ತಿಂಗಳ 17ರಂದು ಮಧ್ಯರಾತ್ರಿಯಲ್ಲಿ ಕಾನೂನುಬಾಹಿರವಾಗಿ ರೇವ್ ಪಾರ್ಟಿ ಆಯೋಜಿಸಿದ್ದ ಮಾಲೀಕರ ವಿರುದ್ಧ ವರದಿ ಸಲ್ಲಿಸುವಂತೆ ಗೃಹ ಸಚಿವರ ಕಾರ್ಯಾಲಯ ಪೊಲೀಸರಿಗೆ ಸೂಚನೆ ನೀಡಿದೆ.

ಶಿವಮೊಗ್ಗ: ಆಗುಂಬೆ ದಟ್ಟಕಾನನದಲ್ಲಿ  ಹೋಮ್ ಸ್ಟೇಯೊಂದರ ಬಳಿ ಇದೇ ತಿಂಗಳ 17ರಂದು ಮಧ್ಯರಾತ್ರಿಯಲ್ಲಿ  ಕಾನೂನುಬಾಹಿರವಾಗಿ  ರೇವ್ ಪಾರ್ಟಿ ಆಯೋಜಿಸಿದ್ದ ಮಾಲೀಕರ ವಿರುದ್ಧ ವರದಿ ಸಲ್ಲಿಸುವಂತೆ ಗೃಹ ಸಚಿವರ ಕಾರ್ಯಾಲಯ ಪೊಲೀಸರಿಗೆ ಸೂಚನೆ ನೀಡಿದೆ.

ಯೂನೆಸ್ಕೂ ವಿಶ್ವ ಪಾರಂಪರಿಕ ಪ್ರದೇಶವೆಂದು  ಗುರುತಿಸಿರುವ ಪಶ್ಚಿಮ ಘಟ್ಟ ಪ್ರದೇಶದಲ್ಲಿ ರಾತ್ರಿ ವೇಳೆಯಲ್ಲಿ ಅಬ್ಬರದ ಸಂಗೀತ, ಲೇಸರ್ ಬೆಳಕು ಪ್ರದರ್ಶನಕ್ಕೆ ಸರ್ಕಾರ ಅನುಮತಿ ನೀಡಬಾರದೆಂದು ವನ್ಯಜೀವಿ ಹೋರಾಟಗಾರರು ಆಗ್ರಹಿಸಿದ್ದಾರೆ.

ನವೆಂಬರ್ 17 ಮತ್ತು 18 ರಂದು ಗುಡ್ಡೇಕೆರೆಯಲ್ಲಿ ಡಿಜೆ ಸೌಂಡಿನೊಂದಿಗೆ ಸುಮಾರು 200 ಮಂದಿ ತಡರಾತ್ರಿಯವರೆಗೂ ಪಾರ್ಟಿ ಮಾಡಿದ್ದಾರೆ ಎಂದು ಆರೋಪಿಸಿ ವಿಧಾನಸಭಾ ಸಚಿವಾಲಯ ಅಧೀನ ಕಾರ್ಯದರ್ಶಿ ಜಿ. ಆರ್. ಸತ್ಯಮೂರ್ತಿ  ನೀಡಿದ ದೂರಿನ ವಿರುದ್ಧ ಗೃಹ ಸಚಿವರು ಕ್ರಮ ಕೈಗೊಂಡಿದ್ದಾರೆ.

ಹೆಚ್ಚಿನ ಮಂದಿ ದಂಪತಿಗಳು ಆ ಪಾರ್ಟಿಯಲ್ಲಿ ಪಾಲ್ಗೊಂಡಿದ್ದು, ಸುಮಾರು 150 ಟೆಂಟ್  ಗಳನ್ನು ತೆರವುಗೊಳಿಸಲಾಗಿದೆ. ಇದಕ್ಕೆ ಆಕ್ಷೇಪಿಸಿದಾಗ ಹೋಮ್ ಸ್ಟೇ ಮಾಲೀಕ ಜಯರಾಮ್ ಹೆಗಡೆ ತಮಗೆ ಬೆದರಿಕೆ ಹಾಕಿದ್ದರು ಎಂದು ಸತ್ಯಮೂರ್ತಿ ಹೇಳಿದ್ದಾರೆ.

ಆದಾಗ್ಯೂ, ಇದು ಸಾಂಸ್ಕೃತಿಕ ಹಬ್ಬವಾಗಿತ್ತು. ಅಲ್ಲಿ ಯಾವುದೇ ರೇವ್ ಪಾರ್ಟಿ ಆಯೋಜಿಸಿರಲಿಲ್ಲ ಎಂದು ಹೆಗಡೆ ಮಗ ಶಶಾಂಕ್ ಹೇಳಿದ್ದಾರೆ.  ಈ ಘಟನೆ ಸಂಬಂಧ ಪೊಲೀಸರು ಹೆಗಡೆ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.  ಕಾನೂನು ಉಲ್ಲಂಘನೆಯಾಗಿದ್ದಲಿ ಕ್ರಮ ಕೈಗೊಳ್ಳುವುದಾಗಿ ಉಪ ಆಯುಕ್ತ ಕೆ.ಎ. ದಯಾನಂದ್ ಹೇಳಿದ್ದಾರೆ.

ಸತ್ಯಮೂರ್ತಿ ಗುಡ್ಡೆಕೇರಿಗೆ ಪ್ರವಾಸ ಕೈಗೊಂಡಿದ್ದಾಗ ನವೆಂಬರ್ 17 ರಂದು ಈ ಪಾರ್ಟಿ ಆಯೋಜಿಸಲಾಗಿತ್ತು. ಮಧ್ಯರಾತ್ರಿಯಲ್ಲಿ ಸುಮಾರು 200 ಹೆಚ್ಚು ಮಂದಿ ಮೋಜು ಮಸ್ತಿ ಮಾಡುತ್ತಿರುವುದನ್ನು ಅವರು ಪತ್ತೆ ಆಗಿತ್ತು. ನಂತರ ಹೋಮ್ ಸ್ಟೇ ಮಾಲೀಕರಿಗೆ ಪೋನ್  ಮಾಡಿ  ಶಬ್ದ ಕಡಿಮೆ ಮಾಡುವಂತೆ ಕೇಳಿದ್ದಾಗ ಅವರಿಗೆ ಬೆದರಿಕೆವೊಡ್ಡಲಾಗಿತ್ತು . ಇದಕ್ಕೆ ಪೊಲೀಸರು ಅನುಮತಿ ನೀಡದಂತೆ ಮನವಿ ಮಾಡಿಕೊಂಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT