ಮಂಗಳೂರು: ನಗರದ ಹೊರವಲಯದ ತೋಟ ಬೆಂಗ್ರೆಯಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಂತ್ರಸ್ತೆ ನೀಡಿದ ದೂರನ್ನು ಸ್ವೀಕರಿಸದ ಬಂಟ್ವಾಳ ಠಾಣೆಯ ಎಎಸ್ ಐ ರಘುರಾಮ್ ಹೆಗ್ಡೆ ಅವರನ್ನು ಅಮಾನತುಗೊಳಿಸಲಾಗಿದೆ.
ಮಂಗಳೂರು ನಗರ ಮಹಿಳಾ ಪೊಲೀಸ್ ಠಾಣೆಯಲ್ಲಿ ನವೆಂಬರ್ 26 ರಂದು ದಾಖಲಾದ ಪ್ರಕರಣದ ಸಂತ್ರಸ್ತೆಯು ತನ್ನ ಮೇಲೆ ನವೆಂಬರ್ 18ರಂದು ತಣ್ಣೀರುಬಾವಿ ಪರಿಸರದಲ್ಲಿ 7 ಮಂದಿಯುವಕರ ತಂಡದಿಂದ ನಡೆದ ಲೈಂಗಿಕ ದೌರ್ಜನ್ಯದ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ನವೆಂಬರ್ 20 ರಂದು ದೂರು ನೀಡಲು ತೆರಳಿದ್ದರು.ಆದರೆ ಈ ವೇಳೆ ಅವರು ದೂರು ದಾಖಲಿಸಿಕೊಳ್ಳಲು ನಿರಾಕರಿಸಿದ್ದರು.
ಹೀಗಾಗಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ಲಕ್ಷ್ಯ ಆರೋಪದಲ್ಲಿ ರಘುರಾಮ ಹೆಗ್ಡೆ ಅವರನ್ನು ಅಮಾನತುಗೊಳಿಸಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿಕಾಂತೇಗೌಡ ಆದೇಶ ಹೊರಡಿಸಿದ್ದಾರೆ.