ನಿರ್ಮಲಾ ಸೀತಾರಾಮನ್ 
ರಾಜ್ಯ

ಸಾಮಾಜಿಕ ಮಾಧ್ಯಮಗಳು ದ್ವೇಷ, ಅಸೂಯೆ ಬಿತ್ತಬಾರದು: ನಿರ್ಮಲಾ ಸೀತಾರಾಮನ್

ಸಾಮಾಜಿಕ ಮಾಧ್ಯಮಗಳಲ್ಲಿ ನಿಂದನೆಯ, ಅವಹೇಳನಕಾರಿ ಟ್ರೋಲಿಂಗ್ ಗಳು ಮತ್ತು ಸೈಬರ್ ಬೆದರಿಕೆಗಳು...

ಬೆಂಗಳೂರು: ಸಾಮಾಜಿಕ ಮಾಧ್ಯಮಗಳಲ್ಲಿ ನಿಂದನೆಯ, ಅವಹೇಳನಕಾರಿ ಟ್ರೋಲಿಂಗ್ ಗಳು ಮತ್ತು ಸೈಬರ್ ಬೆದರಿಕೆಗಳು ಬರುತ್ತಿರುವ ಸಂದರ್ಭದಲ್ಲಿ, ಸಾಮಾಜಿಕ ಮಾಧ್ಯಮಗಳು ದ್ವೇಷ, ಕಹಿ, ನಕಾರಾತ್ಮಕತೆಯಿಂದ ಮುಕ್ತವಾಗಿರಬೇಕು. ಉತ್ತಮ ವಿಷಯಗಳ ಚರ್ಚೆ, ಹಂಚಿಕೆಗಳ ವೇದಿಕೆಯಾಗಬೇಕು ಎಂದು ಕೇಂದ್ರ ರಕ್ಷಣಾ ಇಲಾಖೆ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಅವರು ನಿನ್ನೆ ಬೆಂಗಳೂರಿನಲ್ಲಿ ನಮಸ್ತೆ ಇಂಡಿಯಾ ಸಂಸ್ಥೆ ಆಯೋಜಿಸಿದ್ದ ಸಾಮಾಜಿಕ ಮಾಧ್ಯಮ ಸಭೆ-2018ರ ಕಾರ್ಯಕ್ರಮದಲ್ಲಿ ಮಾತನಾಡಿದರು. ಭಾರತದಲ್ಲಿ ಬೆಳವಣಿದೆ ಒಂದು ಹಂತಕ್ಕೆ ತಲುಪಿದೆ. ಎಷ್ಟರ ಮಟ್ಟಿಗೆ ಎಂದರೆ ಇನ್ನು ಮುಂದೆ ಯಾವುದೇ ರೋಗ ರುಜಿನಗಳು ಮತ್ತು ಅನಾರೋಗ್ಯಕರ ಪರಿಸ್ಥಿತಿ ಉಂಟಾಗುವುದಿಲ್ಲ ಎಂಬ ಹಂತಕ್ಕೆ ಭಾರತ ಇಂದು ಬಂದು ನಿಂತಿದೆ ಎಂದರು.

ಸಂಸದರ ಆದರ್ಶ ಗ್ರಾಮ ಯೋಜನೆ ಮೂಲಕ ಗ್ರಾಮೀಣಾಭಿವೃದ್ಧಿ ನಡೆಯುತ್ತಿದೆ ಎಂದರು. ಸಾಮಾಜಿಕ ಮಾಧ್ಯಮಗಳನ್ನು ಇಂದು ದ್ವೇಷಮುಕ್ತಗೊಳಿಸಬೇಕಿದೆ ಎಂದರು.
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಕಾರ್ಯಕ್ರಮದಲ್ಲಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿಯವರು ದೇಶದಿಂದ ಭ್ರಷ್ಟಾಚಾರವನ್ನು ಬುಡಸಮೇತ ಕಿತ್ತೊಗೆಯಲು ಪ್ರಯತ್ನಿಸುತ್ತಿದ್ದಾರೆ.ಬ್ಯಾಂಕುಗಳಿಗೆ ಶೇಕಡಾ 98ರಷ್ಟು ಕಪ್ಪು ಹಣ ವಾಪಸ್ಸಾಗಿದೆ. ಭ್ರಷ್ಟರಾದ ನೀರವ್ ಮೋದಿ, ವಿಜಯ್ ಮಲ್ಯ ದೇಶ ಬಿಟ್ಟು ಓಡಿಹೋಗಿದ್ದಾರೆ ಎಂದು ಪ್ರತಿಪಕ್ಷ ಕಾಂಗ್ರೆಸ್ ಆರೋಪಿಸುತ್ತಿದೆ, ಆದರೆ ಪ್ರಾಮಾಣಿಕ, ಭ್ರಷ್ಟಾಚಾರರಹಿತ ವ್ಯಕ್ತಿ ದೇಶದ ಪ್ರಧಾನಿಯಾಗಿ ಆಳ್ವಿಕೆ ನಡೆಸುತ್ತಿದ್ದಾರೆ ಎಂದು ಶ್ಲಾಘಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

SCROLL FOR NEXT