ತಿರುಪತಿ ಬಾಲಾಜಿ ದೇವಾಲಯ 
ರಾಜ್ಯ

ಚಿತ್ರದುರ್ಗ: ಪೂರ್ಣಗೊಂಡ ಸುರಂಗಮಾರ್ಗ; ತಿರುಪತಿ ತಿಮ್ಮಪ್ಪನಿಗೆ 'ಹರಕೆ' ತೀರಿಸಿದ ಜನನಾಯಕರು!

ತಮ್ಮ ವಯಕ್ತಿಕ ಆಸೆ, ಆಕಾಂಕ್ಷೆ ಈಡೇರಿಸುವಂತೆ ದೇವರಲ್ಲಿ ಹರಕೆ ಮಾಡಿಕೊಂಡು, ನಂತರ ತೀರಿಸುವುದು ಜನ ಸಾಮಾನ್ಯರಲ್ಲಿ ಕಾಮನ್, ಆದರೆ ...

ಚಿತ್ರದುರ್ಗ: ತಮ್ಮ ವಯಕ್ತಿಕ ಆಸೆ, ಆಕಾಂಕ್ಷೆ ಈಡೇರಿಸುವಂತೆ ದೇವರಲ್ಲಿ ಹರಕೆ ಮಾಡಿಕೊಂಡು, ನಂತರ ತೀರಿಸುವುದು ಜನ ಸಾಮಾನ್ಯರಲ್ಲಿ ಕಾಮನ್, ಆದರೆ ಚಿತ್ರದುರ್ಗದ ಜನ ಪ್ರತಿನಿಧಿಗಳು ಸ್ವಲ್ಪ ಡಿಫರೆಂಟ್ ಆಗಿದ್ದಾರೆ, ಏಕೆಂದರೇ ಚಿತ್ರದುರ್ಗದ ಸುರಂಗಕಾಮಗಾರಿ ಶೀಘ್ರವಾಗಿ ಪೂರ್ಣಗೊಂಡ ಹಿನ್ನೆಲೆಯಲ್ಲಿ  ತಿರುಪತಿಯ ಬಾಲಾಜಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಭದ್ರಾ ಮೇಲ್ಡಂಡೆ ಯೋಜನೆಯ ಸುರಂಗ ಕಾಮಗಾರಿ ಸಂಪೂರ್ಣಗೊಂಡಿದ್ದು, ಈ ಭಾಗದ ಜನಪ್ರತಿನಿಧಿಗಳು ಹಾಗೂ ಸಂಸದರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಭಾನುವಾರ ತಿರುಪತಿಯಲ್ಲಿ ತಿಮ್ಮಪ್ಪನಿಗದೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಹರಕೆ ಸಲ್ಲಿಸಿದ್ದಾರೆ. 
ನಮ್ಮ ಕೋರಿಕೆ ಈಡೇರಿದ್ದಕ್ಕೆ ನಾವು ವಿಶೇಷ ಪೂಜೆ ಸಲ್ಲಿಸಿದ್ದೇವೆ,  ಈ ಕಾಮಗಾರಿ ಡಿಸೆಂಬರ್ ನಲ್ಲಿ ಪೂರ್ಣಗೊಳ್ಳಬೇಕಿತ್ತು, ಆದರೆ ನಾವು ಅಂದುಗೊಂಡಿದ್ದಕ್ಕಿಂತ ಮೊದಲೇ ಮುಗಿದಿದೆ, ಈ ಯೋಜನೆಯಿಂದ ಚಿತ್ರದುರ್ಗ ಮತ್ತು ಇತರ ಮೂರು ಜಿಲ್ಲೆಗಳ ರೈತರಿಗೆ ಅನುಕೂಲವಾಗಲಿದೆ,  ಹೀಗಾಗಿ ಈ ಭಾಗದ ಜನರ ಕನಸು ಶೀಘ್ರವೇ ನೆರವೇರಲಿದೆ ನಮೆಗೆಲ್ಲಾ ತುಂಬಾ ಸಂತೋಶವಾಗಿದೆ ಎಂದು ಚಿತ್ರದುರ್ಗ ಸಂಸದ ಬಿ,.ಎನ್ ಚಂದ್ರಪ್ಪ ಹೇಳಿದ್ದಾರೆ.
ಸಂಸದ ಚಂದ್ರಪ್ಪ ಅವರ ಜೊತೆಗೆ ಜಿಲ್ಲಾ ಉಸ್ತುವಾರಿ ಸಚಿವ  ವೆಂಕಟರಮಣಪ್ಪ, ಮಾಜಿ ಶಾಸಕ ಡಿ. ಸುಧಾಕರ್, ಹಾಗೂ ಗೋವಿಂದಪ್ಪ ಸೇರಿದಂತೆ ಅವರೆ ಬೆಂಬಲಿಗರೆಲ್ಲಾ ಶನಿವಾರ ಚಿತ್ರದುರ್ಗದಿಂದ ಹೊರಟು ಭಾನುವಾರ ತಿರುಪತಿಯಲ್ಲಿ ಪೂಜೆ ಸಲ್ಲಿಸಿ ಸೋಮವಾರ ವಾಪಸಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

SCROLL FOR NEXT