ಭೂಕುಸಿತದಿಂದ ಸ್ಥಗಿತಗೊಂಡಿದ್ದ ಮಂಗಳೂರು-ಬೆಂಗಳೂರು ರೈಲು ಮಾರ್ಗ ಶೀಘ್ರದಲ್ಲೇ ಆರಂಭ 
ರಾಜ್ಯ

ಭೂಕುಸಿತದಿಂದ ಸ್ಥಗಿತಗೊಂಡಿದ್ದ ಮಂಗಳೂರು-ಬೆಂಗಳೂರು ರೈಲು ಮಾರ್ಗ ಶೀಘ್ರದಲ್ಲೇ ಆರಂಭ

ಭೀಕರ ಮಳೆ ಹಾಗೂ ಪ್ರವಾಹದಿಂದಾಗಿ ಬರೋಬ್ಬರಿ 2 ತಿಂಗಳಿನಿಂದಲೂ ಸ್ಥಗಿತಗೊಂಡಿದ್ದ ಮಂಗಳೂರು-ಬೆಂಗಳೂರು ರೈಲ್ವೇ ಮಾರ್ಗ ಶೀಘ್ರದಲ್ಲಿಯೇ ಆರಂಭಗೊಳ್ಳಲಿದೆ...

ಮಂಗಳೂರು: ಭೀಕರ ಮಳೆ ಹಾಗೂ ಪ್ರವಾಹದಿಂದಾಗಿ ಬರೋಬ್ಬರಿ 2 ತಿಂಗಳಿನಿಂದಲೂ ಸ್ಥಗಿತಗೊಂಡಿದ್ದ ಮಂಗಳೂರು-ಬೆಂಗಳೂರು ರೈಲ್ವೇ ಮಾರ್ಗ ಶೀಘ್ರದಲ್ಲಿಯೇ ಆರಂಭಗೊಳ್ಳಲಿದೆ. 
ಸಕಲೇಶಪುರ-ಸುಬ್ರಮಣ್ಯ ರಸ್ತೋ ಘಾಟ್ ವರೆಗೂ ಗೂಡ್ಸ್ ರೈಲನ್ನು ಚಾಲನೆ ಮಾಡುವ ಮೂಲಕ ರೈಲ್ವೇ ಅಧಿಕಾರಿಗಳು ಹಳಿಗಳನ್ನು ಸೋಮವಾರ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ರೈಲುಗಳು ಚಲಿಸಲು ಯಾವುದೇ ರೀತಿಯ ಸಮಸ್ಯೆಗಳಿಲ್ಲ ಎಂಬುದು ತಿಳಿದುಬಂದಿದೆ. 
ಕೊಡಗು ಜಿಲ್ಲೆಯಲ್ಲಿ ಸುರಿದ ಭಾರಿ ಮಳೆ ಬೆಂಗಳೂರು-ಮಂಗಳೂರು ರೈಲ್ವೇ ಮಾರ್ಗಗಳ ಮೇಲೆ ಗಂಭೀರ ಪರಿಣಾಮ ಬೀರಿತ್ತು. ಹಲವೆಡೆ ಗುಡ್ಡಗಳು ಹಳಿಗಳ ಮೇಲೆ ಕುಸಿದು ಬಿದ್ದ ಪರಿಣಾಮ ರೈಲ್ವೇ ಸಂಚಾರಗಳು ಸ್ಥಗಿತಗೊಂಡಿತ್ತು. 
ಹಳಿಗಳನ್ನು ಸರಿಪಡಿಸಲು ರೈಲ್ವೇ ಸಿಬ್ಬಂದಿಗಳು ಸಾಕಷ್ಟು ಹರಸಾಹಸ ಪಡುವಂತಾಗಿತ್ತು. ಮಳೆ ಹಿನ್ನಲೆಯಲ್ಲಿ ಸಿಬ್ಬಂದಿಗಳು ಸಿಗದೆ ಅಧಿಕಾರಿಗಳೇ ಹಳಿಗಳನ್ನು ಸರಿಪಿಸಲು ಮುಂದಾಗಿತ್ತು. ಬಳಿಕ 60 ಜನರನ್ನು ನಿಯೋಜಿಸಿ ಹಳಿಗಳನ್ನು ಸರಿಪಡಿಸುವ ಕಾರ್ಯಗಳನ್ನು ಆರಂಭಿಸಿದ್ದರು. ಹಗಲು-ರಾತ್ರಿ ಕಾರ್ಯನಿರ್ವಹಿಸಿದ್ದರು. 
ಹಳಿಗಳನ್ನು ಸಂಪೂರ್ಣವಾಗಿ ಪರಿಶೀಲನೆ ನಡೆಸಿದ ಬಳಿಕ ಬೆಂಗಳೂರು-ಮಂಗಳೂರು ವಿಭಾಗದ ಸಾರ್ವಜನಿಕ ರೈಲುಗಳ ಸಂಚಾರಕ್ಕೆ ಅನುವು ಮಾಡಿಕೊಡುವ ಕುರಿತು ನಿರ್ಧಾರಗಳನ್ನು ಕೈಗೊಳ್ಳಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 
ಭೂಕುಸಿತ ಸಂಭವಿಸಿದ ಹಿನ್ನಲೆಯಲ್ಲಿ ರಾತ್ರಿ ವೇಳೆ ಸಂಚಾರ ನಡೆಸುತ್ತಿದ್ದ ಬೆಂಗಳೂರು-ಕಾರವಾರ/ಕಣ್ಣೂರು, ಯಶವಂತಪುರ-ಮಂಗಳೂರು ಜಕ್ಷನ್, ಯಶವಂತಪುರ ಕಾರವಾರ ರೈಲುಗಳು ಆಗಸ್ಟ್ 14 ರಿಂದ ಸ್ಥಗಿತಗೊಂಡಿದ್ದವು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಒಬ್ಬ ಅಲ್ಲ.. ಭಾರತದ ಮೇಲೆ ದಾಳಿಗೆ ಸಾವಿರಾರು ಆತ್ಮಹತ್ಯಾ ಬಾಂಬರ್‌ಗಳು ಸಿದ್ಧ': ಪಾಕ್ ಮೂಲದ ಉಗ್ರ Masood Azhar ಆಡಿಯೋ ವೈರಲ್!

Pak ಸಚಿವನಿಗೆ ಮುಖಭಂಗ: ನೆತನ್ಯಾಹು ವಿರುದ್ಧ ಮಾತಾಡ್ತಿದ್ದಂತೆ ಶೋ ನಿಲ್ಲಿಸಿ ಆಸಿಫ್‌ನನ್ನು ಹೊರಕಹಿಸಿದ ಆ್ಯಂಕರ್, Video!

1st ODI: ಮಿಚೆಲ್ ಸ್ಫೋಟಕ ಭರ್ಜರಿ ಬ್ಯಾಟಿಂಗ್, ಭಾರತಕ್ಕೆ ಗೆಲ್ಲಲು ಬೃಹತ್ ಗುರಿ ನೀಡಿದ ಕಿವೀಸ್

ಹೊಂದಿಕೊಳ್ಳಲು ಸಾಧ್ಯವಿಲ್ಲ ಎಂದು ಯಾರು ಹೇಳಿದ್ದು?': ಅಮೆರಿಕ ವ್ಯಾಪಾರ ಒಪ್ಪಂದದ ಅನಿಶ್ಚಿತತೆ ನಡುವೆಯೇ ಹೊಸ ಮಾರುಕಟ್ಟೆಗಳತ್ತ ಭಾರತ ಕಣ್ಣು!

ಯುವನಿಧಿಗೆ ನಿರುದ್ಯೋಗಿ ವಿದ್ಯಾರ್ಥಿಗಳ ನೋಂದಣಿ ನೋಡ್ತಿದ್ದರೆ ಆತಂಕಕಾರಿ, ಶಿಕ್ಷಣದಲ್ಲಿ ಬದಲಾವಣೆ ಅಗತ್ಯ: ವಿಟಿಯು ಉಪಕುಲಪತಿ

SCROLL FOR NEXT