ಭೂಕುಸಿತದಿಂದ ಸ್ಥಗಿತಗೊಂಡಿದ್ದ ಮಂಗಳೂರು-ಬೆಂಗಳೂರು ರೈಲು ಮಾರ್ಗ ಶೀಘ್ರದಲ್ಲೇ ಆರಂಭ 
ರಾಜ್ಯ

ಭೂಕುಸಿತದಿಂದ ಸ್ಥಗಿತಗೊಂಡಿದ್ದ ಮಂಗಳೂರು-ಬೆಂಗಳೂರು ರೈಲು ಮಾರ್ಗ ಶೀಘ್ರದಲ್ಲೇ ಆರಂಭ

ಭೀಕರ ಮಳೆ ಹಾಗೂ ಪ್ರವಾಹದಿಂದಾಗಿ ಬರೋಬ್ಬರಿ 2 ತಿಂಗಳಿನಿಂದಲೂ ಸ್ಥಗಿತಗೊಂಡಿದ್ದ ಮಂಗಳೂರು-ಬೆಂಗಳೂರು ರೈಲ್ವೇ ಮಾರ್ಗ ಶೀಘ್ರದಲ್ಲಿಯೇ ಆರಂಭಗೊಳ್ಳಲಿದೆ...

ಮಂಗಳೂರು: ಭೀಕರ ಮಳೆ ಹಾಗೂ ಪ್ರವಾಹದಿಂದಾಗಿ ಬರೋಬ್ಬರಿ 2 ತಿಂಗಳಿನಿಂದಲೂ ಸ್ಥಗಿತಗೊಂಡಿದ್ದ ಮಂಗಳೂರು-ಬೆಂಗಳೂರು ರೈಲ್ವೇ ಮಾರ್ಗ ಶೀಘ್ರದಲ್ಲಿಯೇ ಆರಂಭಗೊಳ್ಳಲಿದೆ. 
ಸಕಲೇಶಪುರ-ಸುಬ್ರಮಣ್ಯ ರಸ್ತೋ ಘಾಟ್ ವರೆಗೂ ಗೂಡ್ಸ್ ರೈಲನ್ನು ಚಾಲನೆ ಮಾಡುವ ಮೂಲಕ ರೈಲ್ವೇ ಅಧಿಕಾರಿಗಳು ಹಳಿಗಳನ್ನು ಸೋಮವಾರ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ರೈಲುಗಳು ಚಲಿಸಲು ಯಾವುದೇ ರೀತಿಯ ಸಮಸ್ಯೆಗಳಿಲ್ಲ ಎಂಬುದು ತಿಳಿದುಬಂದಿದೆ. 
ಕೊಡಗು ಜಿಲ್ಲೆಯಲ್ಲಿ ಸುರಿದ ಭಾರಿ ಮಳೆ ಬೆಂಗಳೂರು-ಮಂಗಳೂರು ರೈಲ್ವೇ ಮಾರ್ಗಗಳ ಮೇಲೆ ಗಂಭೀರ ಪರಿಣಾಮ ಬೀರಿತ್ತು. ಹಲವೆಡೆ ಗುಡ್ಡಗಳು ಹಳಿಗಳ ಮೇಲೆ ಕುಸಿದು ಬಿದ್ದ ಪರಿಣಾಮ ರೈಲ್ವೇ ಸಂಚಾರಗಳು ಸ್ಥಗಿತಗೊಂಡಿತ್ತು. 
ಹಳಿಗಳನ್ನು ಸರಿಪಡಿಸಲು ರೈಲ್ವೇ ಸಿಬ್ಬಂದಿಗಳು ಸಾಕಷ್ಟು ಹರಸಾಹಸ ಪಡುವಂತಾಗಿತ್ತು. ಮಳೆ ಹಿನ್ನಲೆಯಲ್ಲಿ ಸಿಬ್ಬಂದಿಗಳು ಸಿಗದೆ ಅಧಿಕಾರಿಗಳೇ ಹಳಿಗಳನ್ನು ಸರಿಪಿಸಲು ಮುಂದಾಗಿತ್ತು. ಬಳಿಕ 60 ಜನರನ್ನು ನಿಯೋಜಿಸಿ ಹಳಿಗಳನ್ನು ಸರಿಪಡಿಸುವ ಕಾರ್ಯಗಳನ್ನು ಆರಂಭಿಸಿದ್ದರು. ಹಗಲು-ರಾತ್ರಿ ಕಾರ್ಯನಿರ್ವಹಿಸಿದ್ದರು. 
ಹಳಿಗಳನ್ನು ಸಂಪೂರ್ಣವಾಗಿ ಪರಿಶೀಲನೆ ನಡೆಸಿದ ಬಳಿಕ ಬೆಂಗಳೂರು-ಮಂಗಳೂರು ವಿಭಾಗದ ಸಾರ್ವಜನಿಕ ರೈಲುಗಳ ಸಂಚಾರಕ್ಕೆ ಅನುವು ಮಾಡಿಕೊಡುವ ಕುರಿತು ನಿರ್ಧಾರಗಳನ್ನು ಕೈಗೊಳ್ಳಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 
ಭೂಕುಸಿತ ಸಂಭವಿಸಿದ ಹಿನ್ನಲೆಯಲ್ಲಿ ರಾತ್ರಿ ವೇಳೆ ಸಂಚಾರ ನಡೆಸುತ್ತಿದ್ದ ಬೆಂಗಳೂರು-ಕಾರವಾರ/ಕಣ್ಣೂರು, ಯಶವಂತಪುರ-ಮಂಗಳೂರು ಜಕ್ಷನ್, ಯಶವಂತಪುರ ಕಾರವಾರ ರೈಲುಗಳು ಆಗಸ್ಟ್ 14 ರಿಂದ ಸ್ಥಗಿತಗೊಂಡಿದ್ದವು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT