ಭೂಕುಸಿತದಿಂದ ಸ್ಥಗಿತಗೊಂಡಿದ್ದ ಮಂಗಳೂರು-ಬೆಂಗಳೂರು ರೈಲು ಮಾರ್ಗ ಶೀಘ್ರದಲ್ಲೇ ಆರಂಭ 
ರಾಜ್ಯ

ಭೂಕುಸಿತದಿಂದ ಸ್ಥಗಿತಗೊಂಡಿದ್ದ ಮಂಗಳೂರು-ಬೆಂಗಳೂರು ರೈಲು ಮಾರ್ಗ ಶೀಘ್ರದಲ್ಲೇ ಆರಂಭ

ಭೀಕರ ಮಳೆ ಹಾಗೂ ಪ್ರವಾಹದಿಂದಾಗಿ ಬರೋಬ್ಬರಿ 2 ತಿಂಗಳಿನಿಂದಲೂ ಸ್ಥಗಿತಗೊಂಡಿದ್ದ ಮಂಗಳೂರು-ಬೆಂಗಳೂರು ರೈಲ್ವೇ ಮಾರ್ಗ ಶೀಘ್ರದಲ್ಲಿಯೇ ಆರಂಭಗೊಳ್ಳಲಿದೆ...

ಮಂಗಳೂರು: ಭೀಕರ ಮಳೆ ಹಾಗೂ ಪ್ರವಾಹದಿಂದಾಗಿ ಬರೋಬ್ಬರಿ 2 ತಿಂಗಳಿನಿಂದಲೂ ಸ್ಥಗಿತಗೊಂಡಿದ್ದ ಮಂಗಳೂರು-ಬೆಂಗಳೂರು ರೈಲ್ವೇ ಮಾರ್ಗ ಶೀಘ್ರದಲ್ಲಿಯೇ ಆರಂಭಗೊಳ್ಳಲಿದೆ. 
ಸಕಲೇಶಪುರ-ಸುಬ್ರಮಣ್ಯ ರಸ್ತೋ ಘಾಟ್ ವರೆಗೂ ಗೂಡ್ಸ್ ರೈಲನ್ನು ಚಾಲನೆ ಮಾಡುವ ಮೂಲಕ ರೈಲ್ವೇ ಅಧಿಕಾರಿಗಳು ಹಳಿಗಳನ್ನು ಸೋಮವಾರ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ರೈಲುಗಳು ಚಲಿಸಲು ಯಾವುದೇ ರೀತಿಯ ಸಮಸ್ಯೆಗಳಿಲ್ಲ ಎಂಬುದು ತಿಳಿದುಬಂದಿದೆ. 
ಕೊಡಗು ಜಿಲ್ಲೆಯಲ್ಲಿ ಸುರಿದ ಭಾರಿ ಮಳೆ ಬೆಂಗಳೂರು-ಮಂಗಳೂರು ರೈಲ್ವೇ ಮಾರ್ಗಗಳ ಮೇಲೆ ಗಂಭೀರ ಪರಿಣಾಮ ಬೀರಿತ್ತು. ಹಲವೆಡೆ ಗುಡ್ಡಗಳು ಹಳಿಗಳ ಮೇಲೆ ಕುಸಿದು ಬಿದ್ದ ಪರಿಣಾಮ ರೈಲ್ವೇ ಸಂಚಾರಗಳು ಸ್ಥಗಿತಗೊಂಡಿತ್ತು. 
ಹಳಿಗಳನ್ನು ಸರಿಪಡಿಸಲು ರೈಲ್ವೇ ಸಿಬ್ಬಂದಿಗಳು ಸಾಕಷ್ಟು ಹರಸಾಹಸ ಪಡುವಂತಾಗಿತ್ತು. ಮಳೆ ಹಿನ್ನಲೆಯಲ್ಲಿ ಸಿಬ್ಬಂದಿಗಳು ಸಿಗದೆ ಅಧಿಕಾರಿಗಳೇ ಹಳಿಗಳನ್ನು ಸರಿಪಿಸಲು ಮುಂದಾಗಿತ್ತು. ಬಳಿಕ 60 ಜನರನ್ನು ನಿಯೋಜಿಸಿ ಹಳಿಗಳನ್ನು ಸರಿಪಡಿಸುವ ಕಾರ್ಯಗಳನ್ನು ಆರಂಭಿಸಿದ್ದರು. ಹಗಲು-ರಾತ್ರಿ ಕಾರ್ಯನಿರ್ವಹಿಸಿದ್ದರು. 
ಹಳಿಗಳನ್ನು ಸಂಪೂರ್ಣವಾಗಿ ಪರಿಶೀಲನೆ ನಡೆಸಿದ ಬಳಿಕ ಬೆಂಗಳೂರು-ಮಂಗಳೂರು ವಿಭಾಗದ ಸಾರ್ವಜನಿಕ ರೈಲುಗಳ ಸಂಚಾರಕ್ಕೆ ಅನುವು ಮಾಡಿಕೊಡುವ ಕುರಿತು ನಿರ್ಧಾರಗಳನ್ನು ಕೈಗೊಳ್ಳಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 
ಭೂಕುಸಿತ ಸಂಭವಿಸಿದ ಹಿನ್ನಲೆಯಲ್ಲಿ ರಾತ್ರಿ ವೇಳೆ ಸಂಚಾರ ನಡೆಸುತ್ತಿದ್ದ ಬೆಂಗಳೂರು-ಕಾರವಾರ/ಕಣ್ಣೂರು, ಯಶವಂತಪುರ-ಮಂಗಳೂರು ಜಕ್ಷನ್, ಯಶವಂತಪುರ ಕಾರವಾರ ರೈಲುಗಳು ಆಗಸ್ಟ್ 14 ರಿಂದ ಸ್ಥಗಿತಗೊಂಡಿದ್ದವು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Geneva ಸಭೆಯಲ್ಲಿ ಭಾರತದ ವಿರುದ್ಧ ಟೀಕೆ; ‘ರಾಜಕೀಯ ಪ್ರೇರಿತ ಹೇಳಿಕೆಗಳ ಒಪ್ಪಲ್ಲ’ ಎಂದ MEA, ವಿಶ್ವಸಂಸ್ಥೆ ಸಮಿತಿ ವಿರುದ್ಧ ಕಿಡಿ..!

'ವಿರೋಧವಿದ್ದರೂ ಮೋಹನ್ ಭಾಗವತ್ ಅಮೆರಿಕಕ್ಕೆ ಯಾಕೆ ಹೋದ್ರು? ಮಹಾರಾಷ್ಟ್ರ ಕಾಂಗ್ರೆಸ್ ಶಾಸಕ ನಾನಾ ಪಟೋಲೆ ಪ್ರಶ್ನೆ!

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!