ಬೆಂಗಳೂರು: ರಾಜ್ಯ ರಾಜಧಾನಿ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಹಿಳೆಯರು ಸುರಕ್ಷಿತವಾಗಿ ಹಾಗೂ ಸಮಾಜ ಶಾಂತಿಯುತವಾಗಿದ್ದು ಮುಂದಿನ ದಿನಗಳಲ್ಲಿ ರಾಮರಾಜ್ಯವಾಗಲಿದೆ ಎಂದು ಸಿಎಂ ಕುಮಾರ ಸ್ವಾಮಿ ಭರವಸೆ ವ್ಯಕ್ತ ಪಡಿಸಿದ್ದಾರೆ,
ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 150ನೇ ಜನ್ಮ ದಿನಾಚರಣೆ ಅಂಗವಾಗಿ ಗಾಂಧಿಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಕುಮಾರ ಸ್ವಾಮಿ, ನಗರದಲ್ಲಿ ಸದ್ಯದ ಪರಿಸ್ಥಿತಿಯಲ್ಲಿ ಅನುಮತಿಯಿಲ್ಲದೆ ಜೂಜಾಟ ನಡೆಸುವುದು ಸೇರಿದಂತೆ ಹಲವು ಸಮಾಜ ವಿರೋಧಿ ಚಟುವಟಿಕೆಗಳು ನಡೆಯುತ್ತಿವೆ , ಖಾಸಗಿ ಹಾಗೂ ಸರ್ಕಾರಿ ಭೂಮಿಗಳ ಒತ್ತುವರಿ ಸಾಮಾನ್ಯವಾಗಿ ಹೋಗಿದೆ, ಸಾರ್ವಜನಿಕರು ಅದರಲ್ಲೂ ವಿಶೇಷವಾಗಿ ಹಿರಿಯ ನಾಗರಿಕರನ್ನು ವಂಚಿಸಲಾಗುತ್ತಿದೆ,. ಸರಗಳ್ಳತನ ಮಿತಿಮೀರಿದೆ ಎಂದು ಹೇಳಿದ್ದಾರೆ,
ಬೆಂಗಳೂರಿಗೆ ನಾವು ಸಮರ್ಥ ಅಧಿಕಾರಿಗಳನ್ನು ಪೋಸ್ಟಿಂಗ್ ಮಾಡಿದ್ದೇವೆ, ಯಾವುದೇ ಒತ್ತಡಕ್ಕೆ ಮಣಿಯದೆ ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಾನು ಹೇಳಿದ್ದೇನೆ, ಕೆಲವು ಪ್ರಕರಣಗಳನ್ನು ನನ್ನ ಗಮನಕ್ಕೆ ತರುವ ಅವಶ್ಯಕತೆಯಿಲ್ಲ, ರೌಡಿ ಚಟುವಟಿಕೆಗಳನ್ನು ಹತ್ತಿಕ್ಕಬೇಕು ಎಂದು ಹೇಳಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos