ಎಚ್.ಡಿ ಕುಮಾರ ಸ್ವಾಮಿ 
ರಾಜ್ಯ

ಬೆಂಗಳೂರನ್ನು 'ರಾಮ ರಾಜ್ಯ' ಮಾಡುವುದು ನನ್ನ ಗುರಿ: ಸಿಎಂ ಎಚ್.ಡಿ ಕುಮಾರಸ್ವಾಮಿ

ರಾಜ್ಯ ರಾಜಧಾನಿ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಹಿಳೆಯರು ಸುರಕ್ಷಿತವಾಗಿ ಹಾಗೂ ಸಮಾಜ ಶಾಂತಿಯುತವಾಗಿದ್ದು ಮುಂದಿನ ದಿನಗಳಲ್ಲಿ ...

ಬೆಂಗಳೂರು: ರಾಜ್ಯ ರಾಜಧಾನಿ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಹಿಳೆಯರು ಸುರಕ್ಷಿತವಾಗಿ ಹಾಗೂ ಸಮಾಜ ಶಾಂತಿಯುತವಾಗಿದ್ದು ಮುಂದಿನ ದಿನಗಳಲ್ಲಿ ರಾಮರಾಜ್ಯವಾಗಲಿದೆ ಎಂದು ಸಿಎಂ ಕುಮಾರ ಸ್ವಾಮಿ ಭರವಸೆ ವ್ಯಕ್ತ ಪಡಿಸಿದ್ದಾರೆ, 
ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 150ನೇ ಜನ್ಮ ದಿನಾಚರಣೆ ಅಂಗವಾಗಿ ಗಾಂಧಿಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಕುಮಾರ ಸ್ವಾಮಿ, ನಗರದಲ್ಲಿ ಸದ್ಯದ ಪರಿಸ್ಥಿತಿಯಲ್ಲಿ ಅನುಮತಿಯಿಲ್ಲದೆ ಜೂಜಾಟ ನಡೆಸುವುದು ಸೇರಿದಂತೆ ಹಲವು ಸಮಾಜ ವಿರೋಧಿ ಚಟುವಟಿಕೆಗಳು ನಡೆಯುತ್ತಿವೆ , ಖಾಸಗಿ ಹಾಗೂ ಸರ್ಕಾರಿ ಭೂಮಿಗಳ ಒತ್ತುವರಿ ಸಾಮಾನ್ಯವಾಗಿ ಹೋಗಿದೆ, ಸಾರ್ವಜನಿಕರು ಅದರಲ್ಲೂ ವಿಶೇಷವಾಗಿ ಹಿರಿಯ ನಾಗರಿಕರನ್ನು ವಂಚಿಸಲಾಗುತ್ತಿದೆ,. ಸರಗಳ್ಳತನ ಮಿತಿಮೀರಿದೆ ಎಂದು ಹೇಳಿದ್ದಾರೆ,
ಬೆಂಗಳೂರಿಗೆ ನಾವು ಸಮರ್ಥ ಅಧಿಕಾರಿಗಳನ್ನು ಪೋಸ್ಟಿಂಗ್ ಮಾಡಿದ್ದೇವೆ, ಯಾವುದೇ ಒತ್ತಡಕ್ಕೆ ಮಣಿಯದೆ ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಾನು ಹೇಳಿದ್ದೇನೆ, ಕೆಲವು ಪ್ರಕರಣಗಳನ್ನು ನನ್ನ ಗಮನಕ್ಕೆ ತರುವ ಅವಶ್ಯಕತೆಯಿಲ್ಲ, ರೌಡಿ ಚಟುವಟಿಕೆಗಳನ್ನು ಹತ್ತಿಕ್ಕಬೇಕು ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT