ನೂತನ ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ್ 
ರಾಜ್ಯ

ನಿರ್ವಹಣಾ ನಿರ್ಲಕ್ಷ್ಯ: ದಿಢೀರ್ ತಪಾಸಣೆ ವೇಳೆ ಇಬ್ಬರು ಗುತ್ತಿಗೆದಾರರಿಗೆ ದಂಡ ವಿಧಿಸಿದ ನೂತನ ಮೇಯರ್

ನಗರದ ವಿವಿಧೆಡೆ ಮಂಗಳವಾರ ತಡರಾತ್ರಿವರೆಗೂ ರಸ್ತೆ ಗುಂಡಿ ದುರಸ್ತಿ, ಬೀದಿ ದೀಪ ನಿರ್ವಹಣೆ, ಚರಂಡಿ ಕಾಮಗಾರಿಗಳ ವೀಕ್ಷಣೆ ನಡೆಸಿದ ನೂತನ ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ್ ಅವರು ಸಮರ್ಪಕವಾಗಿ ಕಾರ್ಯನಿರ್ವಹಿಸದೆ...

ಬೆಂಗಳೂರು: ನಗರದ ವಿವಿಧೆಡೆ ಮಂಗಳವಾರ ತಡರಾತ್ರಿವರೆಗೂ ರಸ್ತೆ ಗುಂಡಿ ದುರಸ್ತಿ, ಬೀದಿ ದೀಪ ನಿರ್ವಹಣೆ, ಚರಂಡಿ ಕಾಮಗಾರಿಗಳ ವೀಕ್ಷಣೆ ನಡೆಸಿದ ನೂತನ ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ್ ಅವರು ಸಮರ್ಪಕವಾಗಿ ಕಾರ್ಯನಿರ್ವಹಿಸದೆ ನಿರ್ಲಕ್ಷ್ಯ ವಹಿಸಿದ್ದ ಇಬ್ಬರು ಗುತ್ತಿಗೆದಾರರಿಗೆ ದಂಡ ವಿಧಿಸಿದ್ದಾರೆ. 
ರಾತ್ರಿ 10ಗಂಟೆ ಸುಮಾರಿಗೆ ಉಪ ಮೇಯರ್ ರಮೀಳಾ ಉಮಾಶಂಕರ್, ಆಡಳಿತ ಪಕ್ಷದ ನಾಯಕ ಎಂ.ಶಿವರಾಜು, ಬಿಬಿಎಂಪಿ ಅಧಿಕಾರಿಗಳೊಂದಿಗೆ ದ್ವಿಚಕ್ರ ವಾಹನದಲ್ಲಿಯೇ ಜಯಮಹಲ್, ಗಂಗಾನಗರ, ಶಾಂತಿನಗರ ಸೇರಿದಂತೆ ಹಲವೆಡೆ ಮೇಯರ್ ಗಂಗಾಂಬಿಕೆಯವರು ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸಿದರು. 
ಈ ವೇಳೆ ಜಯಮಹಲ್ ವ್ಯಾಪ್ತಿಯಲ್ಲಿ ಬೆಂಗಳೂರು ಅರಮನೆ ಸಮೀಪ ರಸ್ತೆ ಗುಂಡಿಗಳನ್ನು ಸಮರ್ಪಕವಾಗಿ ಮುಚ್ಚದಿರುವುದನ್ನು ಕಂಡು ತಕ್ಷಣ ಅಧಿಕಾರಿಗಳನ್ನು ಕರೆದು ರಸ್ತೆ ಗುಂಡಿ ಮುಚ್ಚಲು ವೈಜ್ಞಾನಿಕ ಕ್ರಮ ಅನುಸರಿಸದಿರುವುದು ಕಂಡು ಬರುತ್ತಿದೆ. ಸಂಬಂಧ ಪಟ್ಟ ಗುತ್ತಿಗೆದಾರರಿಗೆ ರೂ.1 ಲಕ್ಷ ದಂಡ ವಿಧಿಸುವಂತೆ ಆದೇಶಿಸಿದರು. 
ಬಳಿಕ ಪೂರ್ವ ವಲಯದಲ್ಲಿ ಬೀದಿ ಪೀದ ಬೆಳಗದಿರುವುದನ್ನು ಗಮನಿಸಿ ಎಲೆಕ್ಟ್ರಿಕ್ ಗುತ್ತಿಗೆದಾರರಿಗೂ ರೂ.50 ಸಾವಿರ ದಂಡಕ್ಕೆ ಸೂಚನೆ ನೀಡಿದರು. 
ಬಿಬಿಎಂಪಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ ಗಂಗಾಂಬಿಕೆಯವರು, ಅಕ್ಟೋಬರ್ ತಿಂಗಳಿನಲ್ಲಿ ಮಳೆ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಹೀಗಾಗಿ ಮುಂಜಾಗ್ರತಾ ಕ್ರಮಗಳ ಕುರಿತಂತೆ ಮಾತುಕತೆ ನಡೆಸಲು ಸಭೆ ನಡೆಸಲಾಯಿತು. ಸಭೆಯಲ್ಲಿ ಪ್ರಗತಿಯಲ್ಲಿರುವ ಕಾರ್ಯಗಳು ಹಾಗೂ ಬಾಕಿ ಉಳಿದಿರುವ ಕಾರ್ಯಗಳ ಕುರಿತಂತೆ ಮಾತುಕತೆ ನಡೆಸಲಾಯಿತು ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಕೊಡಗು: 100 ಎಕರೆ ಅರಣ್ಯ ವಲಯದಲ್ಲಿ ಬೌದ್ಧಧರ್ಮ ಜೊತೆಗೆ ಪರಿಸರ ಸಂರಕ್ಷಣೆ ಮಾಡುತ್ತಿರುವ 'ಕರ್ಮ ಕರ್ಗ್ಯು ಮಠ!

SCROLL FOR NEXT