ಮಂತ್ರಿ ಗ್ರೀನ್ಸ್ ಅಪಾರ್ಟ್'ಮೆಂಟ್ 
ರಾಜ್ಯ

ಬಿಡಿಎ, ಕೆಐಎಡಿಬಿ ಅಧಿಕಾರಿಗಳ ಮನೆ ಮೇಲೆ ಎಸಿಬಿ ದಾಳಿ, 4 ಕೆಜಿ ಚಿನ್ನ, 10 ಕೋಟಿ ನಗದು ಪತ್ತೆ

ಆಕ್ರಮ ಆಸ್ತಿ ಗಳಿಸಿದ ಆರೋಪದ ಮೇಲೆ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಅಧಿಕಾರಿಗಳು ಶುಕ್ರವಾರ ಕರ್ನಾಟಕ ಕೈಗಾರಿಕಾ..

ಬೆಂಗಳೂರು:ಆಕ್ರಮ ಆಸ್ತಿ ಗಳಿಸಿದ ಆರೋಪದ ಮೇಲೆ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಅಧಿಕಾರಿಗಳು ಶುಕ್ರವಾರ ಕರ್ನಾಟಕ ಕೈಗಾರಿಕಾ ಪ್ರಾದೇಶಾಭಿವೃದ್ಧಿ ಮಂಡಳಿಯ(ಕೆಐಎಡಿಬಿ) ಮುಖ್ಯ ಅಭಿವೃದ್ಧಿ ಟಿ.ಆರ್. ಸ್ವಾಮಿ ಮತ್ತು ಬಿಡಿಎ ಎಂಜಿನಿಯರ್ ಗೌಡಯ್ಯ ಅವರ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ. 
ಟಿ.ಆರ್. ಸ್ವಾಮಿ ಮತ್ತುಗೌಡಯ್ಯ ಅವರು ಆದಾಯಕ್ಕೂ ಮೀರಿ ಅಪಾರ ಪ್ರಮಾಣದ ಆಸ್ತಿ ಗಳಿಸಿದ ಬಗ್ಗೆ ದೂರು ಹಾಗೂ ಮಾಹಿತಿಯನ್ನು ಆಧರಿಸಿ ಎಸಿಬಿ ಅಧಿಕಾರಿಗಳ ತಂಡ ಇಂದು ಇಬ್ಬರ ಕಚೇರಿ ಮನೆ ಸೇರಿದಂತೆ 8 ಕಡೆ ದಾಳಿ ನಡಸಿದ್ದು, 4 ಕೆ.ಜಿ. ಚಿನ್ನ ಹಾಗೂ ಸುಮಾರು 10 ಕೋಟಿ ರುಪಾಯಿ ನಗದು ಪತ್ತೆ ಮಾಡಿದ್ದಾರೆ.  ಎಬಿಸಿ ಅಧಿಕಾರಿಗಳು ಕೌಂಟಿಂಗ್ ಮೆಷಿನ್ ನಲ್ಲಿ ಹಣ ಲೆಕ್ಕ ಹಾಕುತ್ತಿದ್ದಾರೆ.
ಬೆಂಗಳೂರಿನ ಬಸವೇಶ್ವರನಗರದಲ್ಲಿರುವ ಗೌಡಯ್ಯ ನಿವಾಸದ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ಸುಮಾರು 4 ಕೆ.ಜಿ.ಚಿನ್ನ ಹಾಗೂ 70 ಲಕ್ಷ ರುಪಾಯಿ ನಗದು ಜಪ್ತಿ ಮಾಡಿದ್ದಾರೆ. ಅಲ್ಲದೆ ತುಮಕೂರಿನಲ್ಲಿರುವ ಗೌಡಯ್ಯ ಅವರ ಸಹೋದರನ ಮನೆ ಮೇಲೂ ಅಧಿಕಾರಿಗಳು ದಾಳಿ ನಡೆಸಿದ್ದು, ತೀವ್ರ ಶೋಧ ನಡೆಸುತ್ತಿದ್ದಾರೆ.
ಇನ್ನು ಟಿ.ಆರ್ ಸ್ವಾಮಿ ಅವರಿಗೆ ಸೇರಿರುವ ಮಲ್ಲೇಶ್ವರದ ಮಂತ್ರಿ ಗ್ರೀನ್ಸ್ ಅಪಾರ್ಟ್'ಮೆಂಟ್ ನಲ್ಲಿರುವ ಮನೆ ಮೇಲೆ ದಾಳಿ ನಡೆಸಿದ ಅಧಿಕಾರಿಗಳು, ಮೂರು ಐಷಾರಾಮಿ ವಾಹನಗಳು, ಅಪಾರ ಪ್ರಮಾಣದ ನಗದು, ಜಿನ್ನಾಭರಣ ಹಾಗೂ ಹಲವು ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ. 
ಎಸಿಬಿ ಅಧಿಕಾರಿಗಳು ಮನೆಗೆ ಆಗಮಿಸಿದ ವೇಳೆ ಒಳಗಿನಿಂದ ಬಾಗಿಲು ಹಾಕಿಕೊಂಡಿದ್ದ ಸ್ವಾಮಿ, ಎಷ್ಟು ಬಾರಿ ಬಾಗಿಲು ಬಡಿದರು ತೆರೆಯಲಿಲ್ಲ. ಸ್ವಾಮಿ ಮನೆಯಲ್ಲಿದ್ದ ಹಣವನ್ನು ಬ್ಯಾಗ್ ನಲ್ಲಿ ತುಂಬಿ ಹೊರಗಡೆ ಬೆರೆಯವರನ್ನು ಕರೆಯಿಸಿಕೊಂಡು ಕಿಟಕಿಯಿಂದ ಬ್ಯಾಗ್ ಅನ್ನು ಹೊರಗೆಸೆದಿದ್ದಾರೆ. ಎಸಿಬಿ ಅಧಿಕಾರಿಗಳು ಆ ಬ್ಯಾಗ್ ಅನ್ನು ಸಹ ವಶಕ್ಕೆ ಪಡೆದಿದ್ದು, ಅಧಿಕಾರಿಯ ವಿಚಾರಣೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT