ಸಾಂದರ್ಭಿಕ ಚಿತ್ರ 
ರಾಜ್ಯ

ನಲಪಾಡ್ ಮಾದರಿಯ ಮತ್ತೊಂದು ಕೇಸ್: ನಿವೃತ್ತ ಡಿವೈಎಸ್‍ಪಿ ಕೋನಪ್ಪ ರೆಡ್ಡಿ ಪುತ್ರನಿಂದ ಹಲ್ಲೆ, ಪೊಲೀಸರ ಶೋಧ!

26 ವರ್ಷದ ಯುವಕನ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿವೃತ್ತ ಡಿವೈಎಸ್ ಪಿ ಕೋನಪ್ಪ ರೆಡ್ಡಿ ಪುತ್ರನಿಗಾಗಿ ಹೈಗ್ರೌಂಡ್ ಪೊಲೀಸರು ಶೋಧ ನಡೆಸಿದ್ದಾರೆ.

ಬೆಂಗಳೂರು: 26 ವರ್ಷದ ಯುವಕನ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿವೃತ್ತ ಡಿವೈಎಸ್ ಪಿ ಕೋನಪ್ಪ ರೆಡ್ಡಿ ಪುತ್ರನಿಗಾಗಿ ಹೈಗ್ರೌಂಡ್ ಪೊಲೀಸರು ಶೋಧ ನಡೆಸಿದ್ದಾರೆ. 
ಸೆಪ್ಟೆಂಬರ್ 8 ರಂದು ನಿವೃತ್ತ ಡಿವೈಎಸ್‍ಪಿ ಕೋನಪ್ಪ ರೆಡ್ಡಿ ಪುತ್ರ ಸುಮನ್ ಮತ್ತು ಗ್ಯಾಂಗ್ ಹೋಟೆಲಿನಲ್ಲಿ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬೆಂಗಳೂರಿನ ಹೈಗ್ರೌಂಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ರೇಸ್ ಕೋರ್ಸ್ ರಸ್ತೆಯಲ್ಲಿರುವ ರಿನೈಸಾನ್ಸ್ ಹೋಟೆಲ್ ನಲ್ಲಿ ಈ ಘಟನೆ ನಡೆದಿದೆ.
ಯುವರಾಜ್ ಸ್ನೇಹಿತ ಕಾರ್ತಿಕ್ ಆಸ್ಪತ್ರೆಗೆ ಸೇರಿಸಲು ಹೋಟೆಲ್ ನಿಂದ ಹೊರಗೆ ಕರೆದುಕೊಂಡು ಬಂದಿದ್ದಾರೆ. ಈ ವೇಳೆ ಆರೋಪಿಗಳು ಚಾಕು ತೋರಿಸಿ ಕೊಲೆ ಬೆದರಿಕೆ ಹಾಕಿ ಪರಾರಿಯಾಗಿದ್ದಾರೆ ಎನ್ನಲಾಗಿದೆ.
ಕಾರಿನ ನಂಬರ್ ಆಧರಿಸಿ ತನಿಖೆ ನಡೆಸಿದ ಪೊಲೀಸರಿಗೆ ಆ ಕಾರು ಕೋನಪ್ಪ ರೆಡ್ಡಿ ಅವರಿಗೆ ಸೇರಿದ್ದು ಎಂದು ತಿಳಿದು ಬಂದಿದೆ, ಕೋನಪ್ಪ ರೆಡ್ಡಿ ಪುತ್ರ ಸುಮನ್ ಮತ್ತು ಆತನ ಸ್ನೆಹಿತರು ಈ ಹಲ್ಲೆ ನಡೆಸಿದ್ದಾಗಿ ತಿಳಿದು ಬಂದಿದೆ, 
ಆರೋಪಿ ಪತ್ತೆಗಾಗಿ ವಿಶೇಷ ತಂಡ ರಚಿಸಲಾಗಿದೆ. ಆದರೆ ಆರೋಪಿಗಳು ನಾಪತ್ತೆಯಾಗಿದ್ದಾರೆ,  ಘಟನೆ ನಡೆದು 24 ದಿನವಾದ್ರೂ ಆರೋಪಿಗಳು ಪತ್ತೆಯಾಗಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT