ಕಳೆದ ವಾರ ಬಿಬಿಎಂಪಿ ಉಪ ಮೇಯರ್ ಆಗಿ ಅಧಿಕಾರ ವಹಿಸಿಕೊಂಡಿದ್ದ ಸಂದರ್ಭದಲ್ಲಿ ರಮೀಳಾ ಉಮಾಶಂಕರ್ 
ರಾಜ್ಯ

ಉಪ ಮೇಯರ್ ರಮೀಳಾ ನಿಧನ: ಪ್ರಶ್ನೆ ಮೂಡಿಸುವ ವೈದ್ಯಕೀಯ ವರದಿ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಉಪ ಮೇಯರ್ ರಮೀಳಾ ಉಮಾಶಂಕರ್(44 ವ) ...

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಉಪ ಮೇಯರ್ ರಮೀಳಾ ಉಮಾಶಂಕರ್(44 ವ) ಹಠಾತ್ತಾಗಿ ನಿಧನರಾಗಿದ್ದು, ಅವರ ಸಾವಿನ ಬಗ್ಗೆ ಆಸ್ಪತ್ರೆ ನೀಡುತ್ತಿರುವ ಹೇಳಿಕೆಗಳು ಗೊಂದಲ ಸೃಷ್ಟಿ ಮಾಡಿದೆ.

ಗುರುವಾರ ತಡರಾತ್ರಿ 12.50 ರ ಸುಮಾರಿಗೆ ಉಸಿರಾಡಲು ಸಾಧ್ಯವಾಗುತ್ತಿಲ್ಲ ಎಂದು ರಮೀಳಾ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಬಂದಾಗಲೇ ಅವರು ಮೃತಪಟ್ಟಿದ್ದರು ಮತ್ತು ಅಲ್ಲಿ ಅವರನ್ನು ಕೆಲವು ಗಂಟೆಗಳವರೆಗೆ ಇರಿಸಲಾಗಿದ್ದರೂ ಕೂಡ ಸಾವಿಗೆ ನಿಖರ ಕಾರಣಗಳನ್ನು ಹೇಳಲು ಸಾಧ್ಯವಾಗುತ್ತಿಲ್ಲ ಎನ್ನುತ್ತಿರುವುದು ಹಲವು ಪ್ರಶ್ನೆ ಮತ್ತು ಸಂದೇಹಗಳನ್ನು ಹುಟ್ಟುಹಾಕಿದೆ.

ನಂತರ ಆಸ್ಪತ್ರೆ ಜೊತೆ ಸಂಬಂಧವಿರದ ಮತ್ತೊಬ್ಬ ವೈದ್ಯರು ರಮೀಳಾ ಅವರು ಸಹಜವಾಗಿ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ವರದಿ ನೀಡಿದ್ದಾರೆ.

ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಗೆ ಸಿಕ್ಕಿರುವ ಮಾಹಿತಿ ಪ್ರಕಾರ, ಗೋವಿಂದರಾಜನಗರದ ಕಾವೇರಿಪುರ ವಾರ್ಡ್ ನಿಂದ ಮೊದಲ ಬಾರಿಗೆ ಕೌನ್ಸಿಲರ್ ಆಗಿ ಆಯ್ಕೆಯಾಗಿದ್ದ ರಮೀಳಾ ಅವರನ್ನು ಕಾರ್ಡ್ ರೋಡ್ ಆಸ್ಪತ್ರೆಗೆ ಮಧ್ಯರಾತ್ರಿ 12.50ರ ಸುಮಾರಿಗೆ ಕರೆತಂದಾಗಲೇ ಮೃತಪಟ್ಟಿದ್ದರು ಎಂದು ಹೇಳಲಾಗುತ್ತಿದೆ.

ಆಸ್ಪತ್ರೆ ಶಿಷ್ಟಾಚಾರದಂತೆ ಬಸವೇಶ್ವರನಗರ ವ್ಯಾಪ್ತಿಯ ಪೊಲೀಸ್ ಠಾಣೆಗೆ ಮಾಹಿತಿ ನೀಡುವಾಗ ಹೃದಯಾಘಾತದಿಂದ ನಿಧನರಾಗಿದ್ದರು ಎಂದು ಪ್ರಮಾಣಪತ್ರ ನೀಡಲು ಸಾಧ್ಯವಾಗಿರಲಿಲ್ಲ. ಸಾವಿನ ಬಗ್ಗೆ ನಿಖರ ಕಾರಣ ನೀಡಲು ಯಾವುದೇ ಮರಣೋತ್ತರ ಪರೀಕ್ಷೆಗಳನ್ನು ಸಹ ನಡೆಸಿರಲಿಲ್ಲ. ರಮೀಳಾ ಅವರ ಕುಟುಂಬಕ್ಕೆ ಗೊತ್ತಿರುವ ಬೇರೊಬ್ಬ ವೈದ್ಯರು ಸಾವಿನ ಕಾರಣದ ಪ್ರಮಾಣಪತ್ರವನ್ನು ನೀಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT