ಕಳೆದ ವಾರ ಬಿಬಿಎಂಪಿ ಉಪ ಮೇಯರ್ ಆಗಿ ಅಧಿಕಾರ ವಹಿಸಿಕೊಂಡಿದ್ದ ಸಂದರ್ಭದಲ್ಲಿ ರಮೀಳಾ ಉಮಾಶಂಕರ್ 
ರಾಜ್ಯ

ಉಪ ಮೇಯರ್ ರಮೀಳಾ ನಿಧನ: ಪ್ರಶ್ನೆ ಮೂಡಿಸುವ ವೈದ್ಯಕೀಯ ವರದಿ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಉಪ ಮೇಯರ್ ರಮೀಳಾ ಉಮಾಶಂಕರ್(44 ವ) ...

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಉಪ ಮೇಯರ್ ರಮೀಳಾ ಉಮಾಶಂಕರ್(44 ವ) ಹಠಾತ್ತಾಗಿ ನಿಧನರಾಗಿದ್ದು, ಅವರ ಸಾವಿನ ಬಗ್ಗೆ ಆಸ್ಪತ್ರೆ ನೀಡುತ್ತಿರುವ ಹೇಳಿಕೆಗಳು ಗೊಂದಲ ಸೃಷ್ಟಿ ಮಾಡಿದೆ.

ಗುರುವಾರ ತಡರಾತ್ರಿ 12.50 ರ ಸುಮಾರಿಗೆ ಉಸಿರಾಡಲು ಸಾಧ್ಯವಾಗುತ್ತಿಲ್ಲ ಎಂದು ರಮೀಳಾ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಬಂದಾಗಲೇ ಅವರು ಮೃತಪಟ್ಟಿದ್ದರು ಮತ್ತು ಅಲ್ಲಿ ಅವರನ್ನು ಕೆಲವು ಗಂಟೆಗಳವರೆಗೆ ಇರಿಸಲಾಗಿದ್ದರೂ ಕೂಡ ಸಾವಿಗೆ ನಿಖರ ಕಾರಣಗಳನ್ನು ಹೇಳಲು ಸಾಧ್ಯವಾಗುತ್ತಿಲ್ಲ ಎನ್ನುತ್ತಿರುವುದು ಹಲವು ಪ್ರಶ್ನೆ ಮತ್ತು ಸಂದೇಹಗಳನ್ನು ಹುಟ್ಟುಹಾಕಿದೆ.

ನಂತರ ಆಸ್ಪತ್ರೆ ಜೊತೆ ಸಂಬಂಧವಿರದ ಮತ್ತೊಬ್ಬ ವೈದ್ಯರು ರಮೀಳಾ ಅವರು ಸಹಜವಾಗಿ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ವರದಿ ನೀಡಿದ್ದಾರೆ.

ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಗೆ ಸಿಕ್ಕಿರುವ ಮಾಹಿತಿ ಪ್ರಕಾರ, ಗೋವಿಂದರಾಜನಗರದ ಕಾವೇರಿಪುರ ವಾರ್ಡ್ ನಿಂದ ಮೊದಲ ಬಾರಿಗೆ ಕೌನ್ಸಿಲರ್ ಆಗಿ ಆಯ್ಕೆಯಾಗಿದ್ದ ರಮೀಳಾ ಅವರನ್ನು ಕಾರ್ಡ್ ರೋಡ್ ಆಸ್ಪತ್ರೆಗೆ ಮಧ್ಯರಾತ್ರಿ 12.50ರ ಸುಮಾರಿಗೆ ಕರೆತಂದಾಗಲೇ ಮೃತಪಟ್ಟಿದ್ದರು ಎಂದು ಹೇಳಲಾಗುತ್ತಿದೆ.

ಆಸ್ಪತ್ರೆ ಶಿಷ್ಟಾಚಾರದಂತೆ ಬಸವೇಶ್ವರನಗರ ವ್ಯಾಪ್ತಿಯ ಪೊಲೀಸ್ ಠಾಣೆಗೆ ಮಾಹಿತಿ ನೀಡುವಾಗ ಹೃದಯಾಘಾತದಿಂದ ನಿಧನರಾಗಿದ್ದರು ಎಂದು ಪ್ರಮಾಣಪತ್ರ ನೀಡಲು ಸಾಧ್ಯವಾಗಿರಲಿಲ್ಲ. ಸಾವಿನ ಬಗ್ಗೆ ನಿಖರ ಕಾರಣ ನೀಡಲು ಯಾವುದೇ ಮರಣೋತ್ತರ ಪರೀಕ್ಷೆಗಳನ್ನು ಸಹ ನಡೆಸಿರಲಿಲ್ಲ. ರಮೀಳಾ ಅವರ ಕುಟುಂಬಕ್ಕೆ ಗೊತ್ತಿರುವ ಬೇರೊಬ್ಬ ವೈದ್ಯರು ಸಾವಿನ ಕಾರಣದ ಪ್ರಮಾಣಪತ್ರವನ್ನು ನೀಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT