ಎಸಿಬಿ ಐಜಿಪಿ ಚಂದ್ರಶೇಖರ್ 
ರಾಜ್ಯ

ಎಸಿಬಿ ದಾಳಿ: ಇಬ್ಬರು ಭ್ರಷ್ಟ ಅಧಿಕಾರಿಗಳ ಮನೆಯಿಂದ 4.52 ಕೋಟಿ ರೂ. ನಗದು ವಶ!

ಟಿ. ಆರ್. ಸ್ವಾಮಿ ಹಾಗೂ ಎನ್. ಜಿ. ಗೌಡಯ್ಯ ಅವರ ನಿವಾಸದ ಮೇಲೆ ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳು ನಿನ್ನೆಯಿಂದ ನಡೆಸಿದ ಶೋಧ ಕಾರ್ಯಾಚರಣೆಯಿಂದ 4.52 ಕೋಟಿ ರೂ. ಮೊತ್ತದ ನಗದನ್ನು ವಶಪಡಿಸಿಕೊಂಡಿದ್ದಾರೆ.

ಬೆಂಗಳೂರು: ಅಕ್ರಮ ಆಸ್ತಿ ಸಂಪಾದನೆ ಹಿನ್ನೆಲೆಯಲ್ಲಿ ಸರ್ಕಾರಿ ಅಧಿಕಾರಿಗಳಾದ ಟಿ. ಆರ್. ಸ್ವಾಮಿ ಹಾಗೂ ಎನ್. ಜಿ. ಗೌಡಯ್ಯ ಅವರ ನಿವಾಸದ ಮೇಲೆ  ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳು  ನಿನ್ನೆಯಿಂದ ನಡೆಸಿದ ಶೋಧ ಕಾರ್ಯಾಚರಣೆಯಿಂದ  4.52 ಕೋಟಿ ರೂ. ಮೊತ್ತದ ನಗದನ್ನು ವಶಪಡಿಸಿಕೊಂಡಿದ್ದಾರೆ.

ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ(ಕೆಐಎಡಿಬಿ) ಮುಖ್ಯ ಅಭಿವೃದ್ಧಿ ಟಿ.ಆರ್. ಸ್ವಾಮಿ ಮತ್ತು ಬಿಡಿಎ ಎಂಜಿನಿಯರ್ ಗೌಡಯ್ಯ ಅವರ ಮನೆ ಹಾಗೂ ಕಚೇರಿಗಳ ಮೇಲಿನ ದಾಳಿ ವೇಳೆಯಲ್ಲಿ  4.52 ಕೋಟಿ ರೂ. ನಗದು  ಜೊತೆಗೆ  ಭಾರೀ ಪ್ರಮಾಣದ ಚಿನ್ನಾಭರಣ, ಮನೆ, ನಿವೇಶನ ಹಾಗೂ  ಕೃಷಿ ಜಮೀನನ್ನು  ವಶಕ್ಕೆ ಪಡೆಯಲಾಗಿದೆ.

ದಾಳಿ ಕುರಿತಂತೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಎಸಿಬಿ ಐಜಿಪಿ ಎಂ. ಚಂದ್ರಶೇಖರ್ , ಸ್ವಾಮಿ ಮತ್ತು ಎನ್. ಜಿ. ಗೌಡಯ್ಯ ಅವರ ವಿರುದ್ಧದ ಆರೋಪಕ್ಕೆ ಸಂಬಂಧಿಸಿದಂತೆ ಬೆಂಗಳೂರು , ತುಮಕೂರು ಸೇರಿದಂತೆ ರಾಜ್ಯದ 8 ಕಡೆಗಳಲ್ಲಿ ನಿನ್ನೆ ದಾಳಿ ನಡೆಸಲಾಗಿದ್ದು,4 4.52 ಕೋಟಿ ರೂ. ನಗದು  ಜೊತೆಗೆ  ಮೂರು ಕಾರು, 1.6 ಕೆಜಿ ಚಿನ್ನ, 7.5 ಕೆಜಿ ಬೆಳ್ಳಿ ಹಾಗೂ ಎಂಟು ಮನೆ, 11 ನಿವೇಶನ, ಮತ್ತು ಟಿ. ಆರ್. ಸ್ವಾಮಿಗೆ ಸೇರಿದ  14 ಎಕರೆ ಕೃಷಿ ಜಮೀನನ್ನು ವಶಕ್ಕೆ ಪಡೆದುಕೊಂಡಿರುವುದಾಗಿ ತಿಳಿಸಿದರು.

ಬೆಳಗಾವಿ ಜಿಲ್ಲೆ ಖಾನಪುರ  ವಲಯದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಚಂದ್ರಗೌಡ ಬಿ. ಪಾಟೀಲ್  ಹಾಗೂ  ಬಾಗಲಕೋಟೆ ಜಿಲ್ಲೆ ಕುಡಿಯುವ ನೀರು ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ  ಇಂಜಿನಿಯರ್ ಚಿದಾನಂದ ಬಿ. ಮಿಂಚಿನಾಳ್ ಅವರಿಗೆ ಸೇರಿದ ಮೂರು ಪ್ರದೇಶಗಳಲ್ಲಿ ದಾಳಿ ನಡೆಸಲಾಗಿದೆ ಎಂದು  ಚಂದ್ರಶೇಖರ್ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!