ರಾಜಕಾಲುವೆ 
ರಾಜ್ಯ

ಬೆಂಗಳೂರು: ಕುರುಬರಹಳ್ಳಿಯಲ್ಲಿ ಜನಪ್ರತಿನಿಧಿಗಳ ದಿವ್ಯ ನಿರ್ಲಕ್ಷ್ಯ : ಮೃತ್ಯುಕೂಪ ರಾಜಕಾಲುವೆ !

ಕುರುಬರಹಳ್ಳಿಯಲ್ಲಿ ಮೃತ್ಯೂಕೂಪದಂತಿರುವ ಈ ರಾಜಕಾಲುವೆಯಲ್ಲಿ ಒಂದು ವರ್ಷದ ನಂತರವೂ ಮತ್ತೆ ದುರಂತ ಮರುಕಳಿಸುವ ಸಾಧ್ಯತೆ ಹೆಚ್ಚಾಗಿದೆ

ಬೆಂಗಳೂರು : ಪಶ್ಚಿಮ ಬೆಂಗಳೂರು ಭಾಗದಲ್ಲಿರುವ  ಕುರುಬರಹಳ್ಳಿಯಲ್ಲಿ ಕಳೆದ ವರ್ಷ ಅಕ್ಟೋಬರ್ 13 ರಂದು ಭಾರೀ ಮಳೆಯಿಂದಾಗಿ  5 ಮಂದಿ ಮೃತಪಟ್ಟಿದ್ದರು. ರಾಜಕಾಲುವೆ ಬಳಿ ವಾಸಿಸುತ್ತಿದ್ದ   ಕಮಲಮ್ಮ ಮತ್ತು ಶಂಕರಪ್ಪ ದಂಪತಿ  ಸೇರಿದಂತೆ  ಅವರ ತಾಯಿ ಮಗಳು, ಮೀನಾಕ್ಷಿ, ಪುಷ್ಪ ರಾಜಕಾಲುವೆ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದರು.

ಮೃತ್ಯೂಕೂಪದಂತಿರುವ ಈ  ರಾಜಕಾಲುವೆಯಲ್ಲಿ  ಒಂದು ವರ್ಷದ ನಂತರವೂ ಮತ್ತೆ ದುರಂತ ಮರುಕಳಿಸುವ ಸಾಧ್ಯತೆ ಹೆಚ್ಚಾಗಿದೆ. ಬೇರೆ ಬೇರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗಳಿಗೆ ಬರುವ ಈ ಕಾಲುವೆಯ ಒಂದು ಭಾಗವನ್ನು  ಮಾತ್ರ ಸರಿಪಡಿಸಲಾಗಿದ್ದು, ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರಕ್ಕೊಳಪಡುವ ಕಾಲುವೆ ಸರಿಪಡಿಸದೆ ಇರುವುದರಿಂದ  ಜನರು ತೀವ್ರ ರೀತಿಯ  ತೊಂದರೆ ಎದುರಿಸುವಂತಾಗಿದೆ.

ಕಾಲುವೆ  ಬಳಿಯಿರುವ ಮನೆಗಳಿಗೆ ನೀರು  ಪ್ರವೇಶಿಸದಂತೆ ತಡೆಗಟ್ಟಲು ಒಂದು ಗೋಡೆ ಸ್ಥಾಪಿಸಲಾಗಿದ್ದು, ಗೋಡೆಯ ಮೇಲೆ ಬೇಲಿ ಹಾಕಲಾಗಿದೆ. ಆದರೆ ಬಲಭಾಗದ ಕಾಲುವೆ ನಿರ್ಲಕ್ಷ್ಯಕ್ಕೊಳಪಟ್ಟಿರುವುದರಿಂದ  ಮಳೆ ನೀರು ಮನೆಗೆ ನುಗ್ಗುವಂತಾಗಿದೆ ಎಂದು  ಟೈಲರ್  ಷಣ್ಮುಗ  ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದ್ದಾರೆ.

ಆದರೆ, ನೀರು ಬಾರದಂತೆ ಹಾಕಿರುವ ತಡೆಗೋಡೆ ಸಹ ಎತ್ತರದಲ್ಲಿ ಇಲ್ಲ ಎಂದು ಕುರುಬರಹಳ್ಳಿ ನಿವಾಸಿ ರಾಧಾ ಆರೋಪಿಸಿದರು. ಬೆಂಗಳೂರಿನಲ್ಲಿ ಪ್ರತಿದಿನ ಮಳೆಯಾಗುತ್ತಿದ್ದು, ಕಳೆದ ವರ್ಷದಂತೆ  ಈ ವರ್ಷವೂ ದುರಂತ ಸಂಭವಿಸುವ ಭೀತಿಯಲ್ಲಿ ಕಾಲ ಕಳೆಯುವಂತಾಗಿದೆ ಎಂದು  ಕೆಂಪೇಗೌಡ ಲೇಔಟ್ ನಿವಾಸಿ  ಅಳಲು ತೋಡಿಕೊಂಡರು.

 ಯಶವಂತಪುರ ಕಡೆಯಿಂದ ಬರುವ ತ್ಯಾಜ್ಯ ನೀರು ಈ ಕಾಲುವೆ  ಕೆಂಗೇರಿ  ಬಳಿಯ ವೃಷಭಾವತಿ ಕಡೆಗೆ  ಹರಿದು ಹೋಗುತ್ತದೆ. ಮಳೆಗಾಲದಲ್ಲಿ ಈ ರಾಜಕಾಲುವೆ ಬಳಿ ವಾಸಿಸುವ ಜನರು ಆತಂಕದಲ್ಲಿಯೇ ಬದುಕು ಸಾಗಿಸುವಂತಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT