ಯಮನಂತೆ ಬಂದ ಬಸ್: ದಸರಾ ಆನೆ 'ರಂಗ' ಸಾವು 
ರಾಜ್ಯ

ಯಮನಂತೆ ಬಂದ ಬಸ್: ದಸರಾ ಆನೆ 'ರಂಗ' ಅಪಘಾತದಲ್ಲಿ ಸಾವು

ಕೆಲವೇ ದಿನಗಳಲ್ಲಿ ಮೈಸೂರು ದಸರಾ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳಬೇಕಿದ್ದ ಆನೆಯೊಂದಕ್ಕೆ ಖಾಸಗಿ ಬಸ್ ವೊಂದು ಡಿಕ್ಕಿ ಹೊಡೆದ ಪರಿಣಾಮ ಸೊಂಟ ಮುರಿದು ಆನೆ ಸಾವನ್ನಪ್ಪಿರುವ ಘಟನೆ ವಿರಾಜಪೇಟೆ ತಾಲೂಕಿನ ಮತ್ತಿಗೋಡು ಸಾಕಾನೆಗಳ ಶಿಬಿರದಲ್ಲಿ ನಡೆದಿದೆ...

ಕೊಡಗು: ಕೆಲವೇ ದಿನಗಳಲ್ಲಿ ಮೈಸೂರು ದಸರಾ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳಬೇಕಿದ್ದ ಆನೆಯೊಂದಕ್ಕೆ ಖಾಸಗಿ ಬಸ್ ವೊಂದು ಡಿಕ್ಕಿ ಹೊಡೆದ ಪರಿಣಾಮ ಸೊಂಟ ಮುರಿದು ಆನೆ ಸಾವನ್ನಪ್ಪಿರುವ ಘಟನೆ ವಿರಾಜಪೇಟೆ ತಾಲೂಕಿನ ಮತ್ತಿಗೋಡು ಸಾಕಾನೆಗಳ ಶಿಬಿರದಲ್ಲಿ ನಡೆದಿದೆ.

ಮತ್ತಿಗೋಡು ಆನೆ ಶಿಬಿರಲ್ಲಿರುವ 45 ವರ್ಷದ ಪ್ರಾಯದ ಆನೆ ರಂಗನನ್ನು ಎಂದಿನಂತೆ ರಾತ್ರಿ ತಿರುಗಾಡಲು ಬಿಡಲಾಗಿತ್ತು. ರಾತ್ರಿ 2 ಗಂಟೆ ಸುಮಾರಿಗೆ ಬಂದಿರುವ ಖಾಸಗಿ ಬಸ್ ವೊಂದು ಆನೆಗೆ ಡಿಕ್ಕಿ ಹೊಡೆದ ಪರಿಣಾಮ ಸ್ತಳದಲ್ಲಿ ಕುಸಿದುಬಿದ್ದು ಆನೆ ಸಾವನ್ನಪ್ಪಿದೆ.

ಘಟನೆ ಸಂಬಂಧ ಕಲ್ಪಕ ಖಾಸಗಿ ಬಸ್ ಚಾಲಕನ ವಿರುದ್ಧ ಪೊನ್ನಂಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಚಾಲಕನನ್ನು ಬಂಧನಕ್ಕೊಳಪಡಿಸಿದ್ದಾರೆ.

3 ವರ್ಷಗಳ ಹಿಂದೆ ಬೆಂಗಳೂರಿನಿಂದ ರಂಗನನ್ನು ಮತ್ತಿಗೋಡು ಆನೆ ಶಿಬಿರಕ್ಕೆ ಕರೆದೊಯ್ಯಲಾಗಿತ್ತು. ದಸರಾ ಹಬ್ಬ ಹಿನ್ನಲೆಯಲ್ಲಿ ರಂಗನನ್ನು ಇನ್ನೆರಡು ದಿನಗಳಲ್ಲಿ ಮೈಸೂರಿಗೆ ಕರೆದೊಯ್ಯಲು ಸಿದ್ಧತೆ ನಡೆಸಲಾಗಿತ್ತು. ಈ ನಡುವಲ್ಲೇ ದುರಂತ ಸಂಭವಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

2nd Test, Day 3: ಮೊದಲ ಇನ್ನಿಂಗ್ಸ್ ನಲ್ಲಿ 248 ರನ್ ಗೆ ವಿಂಡೀಸ್ ಆಲೌಟ್, ಫಾಲೋಆನ್ ಹೇರಿದ ಭಾರತ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

SCROLL FOR NEXT