ಯಮನಂತೆ ಬಂದ ಬಸ್: ದಸರಾ ಆನೆ 'ರಂಗ' ಸಾವು 
ರಾಜ್ಯ

ಯಮನಂತೆ ಬಂದ ಬಸ್: ದಸರಾ ಆನೆ 'ರಂಗ' ಅಪಘಾತದಲ್ಲಿ ಸಾವು

ಕೆಲವೇ ದಿನಗಳಲ್ಲಿ ಮೈಸೂರು ದಸರಾ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳಬೇಕಿದ್ದ ಆನೆಯೊಂದಕ್ಕೆ ಖಾಸಗಿ ಬಸ್ ವೊಂದು ಡಿಕ್ಕಿ ಹೊಡೆದ ಪರಿಣಾಮ ಸೊಂಟ ಮುರಿದು ಆನೆ ಸಾವನ್ನಪ್ಪಿರುವ ಘಟನೆ ವಿರಾಜಪೇಟೆ ತಾಲೂಕಿನ ಮತ್ತಿಗೋಡು ಸಾಕಾನೆಗಳ ಶಿಬಿರದಲ್ಲಿ ನಡೆದಿದೆ...

ಕೊಡಗು: ಕೆಲವೇ ದಿನಗಳಲ್ಲಿ ಮೈಸೂರು ದಸರಾ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳಬೇಕಿದ್ದ ಆನೆಯೊಂದಕ್ಕೆ ಖಾಸಗಿ ಬಸ್ ವೊಂದು ಡಿಕ್ಕಿ ಹೊಡೆದ ಪರಿಣಾಮ ಸೊಂಟ ಮುರಿದು ಆನೆ ಸಾವನ್ನಪ್ಪಿರುವ ಘಟನೆ ವಿರಾಜಪೇಟೆ ತಾಲೂಕಿನ ಮತ್ತಿಗೋಡು ಸಾಕಾನೆಗಳ ಶಿಬಿರದಲ್ಲಿ ನಡೆದಿದೆ.

ಮತ್ತಿಗೋಡು ಆನೆ ಶಿಬಿರಲ್ಲಿರುವ 45 ವರ್ಷದ ಪ್ರಾಯದ ಆನೆ ರಂಗನನ್ನು ಎಂದಿನಂತೆ ರಾತ್ರಿ ತಿರುಗಾಡಲು ಬಿಡಲಾಗಿತ್ತು. ರಾತ್ರಿ 2 ಗಂಟೆ ಸುಮಾರಿಗೆ ಬಂದಿರುವ ಖಾಸಗಿ ಬಸ್ ವೊಂದು ಆನೆಗೆ ಡಿಕ್ಕಿ ಹೊಡೆದ ಪರಿಣಾಮ ಸ್ತಳದಲ್ಲಿ ಕುಸಿದುಬಿದ್ದು ಆನೆ ಸಾವನ್ನಪ್ಪಿದೆ.

ಘಟನೆ ಸಂಬಂಧ ಕಲ್ಪಕ ಖಾಸಗಿ ಬಸ್ ಚಾಲಕನ ವಿರುದ್ಧ ಪೊನ್ನಂಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಚಾಲಕನನ್ನು ಬಂಧನಕ್ಕೊಳಪಡಿಸಿದ್ದಾರೆ.

3 ವರ್ಷಗಳ ಹಿಂದೆ ಬೆಂಗಳೂರಿನಿಂದ ರಂಗನನ್ನು ಮತ್ತಿಗೋಡು ಆನೆ ಶಿಬಿರಕ್ಕೆ ಕರೆದೊಯ್ಯಲಾಗಿತ್ತು. ದಸರಾ ಹಬ್ಬ ಹಿನ್ನಲೆಯಲ್ಲಿ ರಂಗನನ್ನು ಇನ್ನೆರಡು ದಿನಗಳಲ್ಲಿ ಮೈಸೂರಿಗೆ ಕರೆದೊಯ್ಯಲು ಸಿದ್ಧತೆ ನಡೆಸಲಾಗಿತ್ತು. ಈ ನಡುವಲ್ಲೇ ದುರಂತ ಸಂಭವಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT