ಸಚಿವ ಡಿ.ಕೆ.ಶಿವಕುಮಾರ್ 
ರಾಜ್ಯ

ಡಿ.ಕೆ.ಶಿವಕುಮಾರ್ ವಿರುದ್ಧ ಪ್ರಕರಣ ದಾಖಲಿಸಿದ್ದ ಅಧಿಕಾರಿ ಉಲ್ಟಾ

ಜಾಹೀರಾತು ಫಲಕ ಅಳವಡಿಕೆಗೆ ತೆರವುಗೊಳಿಸದ ಆರೋಪದ ಹಿನ್ನಲೆಯಲ್ಲಿ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಅಧಿಕಾರಿಯು ಪ್ರಕರಣದಲ್ಲಿ ಸಚಿವರ ಪಾತ್ರವಿಲ್ಲ ಎಂದು ಪೊಲೀಸರಿಗೆ ಮರು ಹೇಳಿಕೆ ನೀಡಿದ್ದಾರೆ...

ಬೆಂಗಳೂರು: ಜಾಹೀರಾತು ಫಲಕ ಅಳವಡಿಕೆಗೆ ತೆರವುಗೊಳಿಸದ ಆರೋಪದ ಹಿನ್ನಲೆಯಲ್ಲಿ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಅಧಿಕಾರಿಯು ಪ್ರಕರಣದಲ್ಲಿ ಸಚಿವರ ಪಾತ್ರವಿಲ್ಲ ಎಂದು ಪೊಲೀಸರಿಗೆ ಮರು ಹೇಳಿಕೆ ನೀಡಿದ್ದಾರೆ. 
ನಗರದ ರಸ್ತೆಗಳಲ್ಲಿ ಎಲ್ಲೆಂದರಲ್ಲಿ ಜಾಹೀರಾತು ಹಾಕುತ್ತಿದ್ದರಿಂದಾಗಿ ನಗರದ ಅಂದ ಹಾಳಾಗುತ್ತಿದೆ ಎಂದು ಹೈಕೋರ್ಟ್ ತೀವ್ರವಾಗಿ ಕೆಂಡಾಮಂಡಲಗೊಂಡಿತ್ತು. ಕೂಡಲೇ ಕಾರ್ಯಾಚರಣೆ ಕೈಗೊಂಡು ಜಾಹೀರಾತು ಫಲಕಗಳನ್ನು ತೆರವುಗೊಳಿಸುವಂತೆ ಸೂಚಿಸಿತ್ತು. 
ಈ ಹಿನ್ನಲೆಯಲ್ಲಿ ಬಿಬಿಎಂಪಿ ಅದಿಕಾರಿಗಳು ಜಾಹೀರಾತು ಫಲಕಗಳನ್ನು ತೆರವುಗೊಳಿಸಿ, ಜಾಹೀರಾತು ಫಲಕ ಅಳವಡಿಸಿದವರ ವಿರುದ್ಧ ದೂರು ದಾಖಲು ಮಾಡುತ್ತಿದ್ದಾರೆ. 
ಪಂತರಪಾಳ್ಯ ಜಂಕ್ಷನ್ ಸಮೀಪದ ಸ್ಥಳದಲ್ಲಿ ಜಾಹೀರಾತು ಫಲಕ ಅಳವಡಿಕೆಗೆ ಬಳಸಿದ್ದ ಲೋಹದ ಚೌಕಟ್ಟು ತೆರವುಗೊಳಿಸಿಲ್ಲ ಎಂದು ಆರ್.ಆರ್ ನಗರ ಉಪ ವಿಭಾಗದ ಕಂದಾಯ ಅಧಿಕಾರಿ ಮುತ್ತುರಾಜ್ ಅವರು ಬ್ಯಾಟರಾಯನಪುರ ಠಾಣೆಯಲ್ಲಿ ಸಚಿವರ ವಿರುದ್ಧ ಸೆ.24 ರಂದು ದೂರು ನೀಡಿದ್ದರು. 
ಇದೀಗ ಪ್ರಕರಣ ಸಂಬಂಧ ಮರು ಹೇಳಿಕೆ ನೀಡಿರುವ ಮುತ್ತುರಾಜ್ ಅವರು ಪ್ರಕರಣದಲ್ಲಿ ಶಿವಕುಮಾರ್ ಅವರದ್ದು ಯಾವುದೇ ತಪ್ಪಿಲ್ಲ. ಭೂ ಮಾಲೀಕರಿಗೆ ಹಲವು ಬಾರಿ ನೋಟಿಸ್ ಜಾರಿ ಮಾಡಲಾಗಿತ್ತು. ಎಫ್ಐಆರ್ ದಾಖಲಾದ ಬಳಿಕ ಜಾಹೀರಾತನ್ನು ತೆಗೆದು ಹಾಕಲಾಗಿದೆ. ಹೀಗಾಗಿ ದೂರನ್ನು ಹಿಂದಕ್ಕೆ ಪಡೆದಿದ್ದೇನೆ. ಇತರೆ ಪ್ರಕರಣದಲ್ಲಿ ಮಾಡಿದಂತೆಯೇ ಮಾಡಿದ್ದೇವೆಂದು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT