ದಸರಾ ಆನೆ ರಂಗ ಅಪಘಾತದಲ್ಲಿ ಸಾವು 
ರಾಜ್ಯ

ಆನೆ ಶಿಬಿರಗಳನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಿ: ವನ್ಯಜೀವಿ ಕಾರ್ಯಕರ್ತರು ಆಗ್ರಹ

ಆನೆ ಶಿಬಿರಗಳನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸುವಂತೆ ಹಲವು ವರ್ಷಗಳಿಂದಲೂ ಆಗ್ರಹಗಳು ಕೇಳಿ ಬಂದಿದ್ದು, ಇದೀಗ ದಸರಾ ಆನೆ ರಂಗನ ಸಾವಿನ ಬಳಿಕ ಈ ದನಿ ಮತ್ತಷ್ಟು ಪ್ರಬಲಗೊಂಡಿದೆ...

ಹುಬ್ಬಳ್ಳಿ: ಆನೆ ಶಿಬಿರಗಳನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸುವಂತೆ ಹಲವು ವರ್ಷಗಳಿಂದಲೂ ಆಗ್ರಹಗಳು ಕೇಳಿ ಬಂದಿದ್ದು, ಇದೀಗ ದಸರಾ ಆನೆ ರಂಗನ ಸಾವಿನ ಬಳಿಕ ಈ ದನಿ ಮತ್ತಷ್ಟು ಪ್ರಬಲಗೊಂಡಿದೆ. 
ಕರ್ನಾಟಕ 130 ಆನೆಗಳನ್ನು ವಿವಿಧ ಶಿಬಿರಗಳಿಗೆ ಕಳುಹಿಸಲಾಗಿದೆ. 8 ಶಿಬಿರಗಳ ಪೈಕಿ 6 ಶಿಬಿರಗಳು ಬಂಡೀಪುರ, ನಾಗರಹೊಳೆ ಹಾಗೂ ಬಿಆರ್'ಟಿ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿವೆ. ಇವು ಪ್ರಾಣಿಗಳಿಗೆ ಸುರಕ್ಷಿತ ಪ್ರದೇಶಗಳಲ್ಲ ಎಂಬುದು ವನ್ಯಜೀವಿ ಕಾರ್ಯಕರ್ತರ ಅಭಿಪ್ರಾಯವಾಗಿದೆ. 
ವನ್ಯಜೀವಿ ಪ್ರದೇಶಗಳಲ್ಲಿ ಆನೆ ಶಿಬಿರಗಳಿರುವುದು ಋಣಾತ್ಮಕ ಪರಿಣಾಮಗಳನ್ನು ಬೀರುತ್ತಿವೆ. ಪರಿಸ್ಥಿತಿ ಗಂಭೀರವಾಗಿದ್ದರೂ ಸಿಬ್ಬಂದಿಗಳಿಗೆ ಹಾಗೂ ಅವರ ಕುಟುಂಬಸ್ಥರು ಅನುಕೂಲವಾಗುವ ಸಲುವಾಗಿ ಶಿಬಿರಗಳನ್ನು ಹತ್ತಿರವೇ ಮಾಡಲಾಗುತ್ತಿದೆ. ರಾಷ್ಟ್ರೀಯ ಉದ್ಯಾನವನದಲ್ಲಿ ಹೊಸ ಆನೆ ರಕ್ಷಣಾ ಕೇಂದ್ರಗಳನ್ನು ಸ್ಥಾಪನೆ ಮಾಡಬಾರದು ಎಂಬುದು ಕಡ್ಡಾಯವಾಗಿದೆ. ಪ್ರಸ್ತುತ ಇರುವ ಶಿಬಿರಗಳನ್ನು ಪಶುವೈದ್ಯ ಸೌಲಭ್ಯಗಳೊಂದಿಗೆ ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರ ಮಾಡಬೇಕೆಂದು ವೈಲ್ಡ್ ಲೈಫ್ ಫರ್ಸ್ಟ್ ಟ್ರಸ್ಟೀ ಪ್ರವೀನ್ ಭಾರ್ಗವ್ ಅವರು ಹೇಳಿದ್ದಾರೆ.
ಹಲವು ವರ್ಷಗಳಿಂದಲೂ ಅರಣ್ಯ ಪ್ರದೇಶದೊಳಗೆ ಆನೆ ಶಿಬಿರಗಳಿರುವುದಕ್ಕೆ ಪ್ರಾಣಿ ಸಂರಕ್ಷಕ ಕೆ.ಎಂ. ಚಿನ್ನಪ್ಪ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 
ಪ್ರಾಣಿ ಸಂರಕ್ಷಿತ ಪ್ರದೇಶಗಳಲ್ಲಿ ಮರ ಕಾರ್ಯಾಚರಣೆಗಳನ್ನು ಸಂಪೂರ್ಣವಾಗಿ ನಿಷೇಧಿಸಬೇಕು. ಪ್ರಸ್ತುತ ಬುಡಕಟ್ಟು ಜನಾಂಗದವರು ಸೇರಿಕೊಂಡಿರುವ ಸ್ಥಳಗಳು ಆನೆ ಶಿಬಿರಗಳಾಗಿತ್ತು. ಒಂದೆಡೆ ಇಲಾಖೆ ಬುಡಕಟ್ಟು ಜನರನ್ನು ಸ್ಥಳಾಂತರಿಸುವ ಪ್ರಯತ್ನಗಳನ್ನು ಮಾಡುತ್ತಿದ್ದರೆ, ಮತ್ತೊಂದೆಡೆ ಅರಣ್ಯದಲ್ಲಿ ಮನುಷ್ಯರ ಸಂಖ್ಯೆಯನ್ನು ಹೆಚ್ಚಿಸುತ್ತಿದ್ದೇವೆಂದು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT