ಮೈಸೂರು ದಸರಾ ಉದ್ಘಾಟನೆಗೆ ಮುನ್ನ ಚಾಮುಂಡಿ ದೇವಿಗೆ ಪೂಜೆ ಸಲ್ಲಿಸಿದ ಇನ್ಫೋಸಿಸ್ ಪ್ರತಿಷ್ಠಾನ ಅಧ್ಯಕ್ಷೆ ಸುಧಾಮೂರ್ತಿ, ಸಿಎಂ ಕುಮಾರಸ್ವಾಮಿ, ಸಚಿವರುಗಳಾದ ಜಿ ಟಿ ದೇವೇಗೌಡ, ಜಯಮಾಲಾ 
ರಾಜ್ಯ

ಕೊಡಗು ಜಿಲ್ಲೆ ಪ್ರವಾಹಪೀಡಿತರಿಗೆ ಇನ್ಫೋಸಿಸ್ ವತಿಯಿಂದ ಮನೆ ನಿರ್ಮಾಣ: ಸುಧಾ ಮೂರ್ತಿ

ಕೊಡಗು ಜಿಲ್ಲೆಯ ಪ್ರವಾಹ ಪೀಡಿತರಿಗೆ ವಸತಿ ಕಲ್ಪಿಸಿಕೊಡಲು ಇನ್ಫೋಸಿಸ್ ವತಿಯಿಂದ ಆರ್ಥಿಕ ನೆರವು ನೀಡಲಾಗುವುದು. ಈ ನಿಟ್ಟಿನಲ್ಲಿ ಸರ್ಕಾರದ ಜೊತೆ ಕೆಲಸದಲ್ಲಿ ....

ಮೈಸೂರು: ಮೈಸೂರು: ಕರ್ನಾಟಕ ಸರ್ಕಾರ ಭೂಮಿ ನೀಡಿದರೆ ಇನ್ಫೋಸಿಸ್ ವತಿಯಿಂದ ಕೊಡಗು ಜಿಲ್ಲೆಯ ಪ್ರವಾಹ ಪೀಡಿತರಿಗೆ ವಸತಿ ಕಲ್ಪಿಸಿಕೊಡಲಾಗುವುದು ಎಂದು ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ತಿಳಿಸಿದ್ದಾರೆ.

ಅವರು ಇಂದು ಬೆಳಗ್ಗೆ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ದೇವಿ ಚಾಮುಂಡಿಗೆ ಪುಷ್ಪಾರ್ಚನೆ ಸಲ್ಲಿಸಿ 9 ದಿನಗಳ ನವರಾತ್ರಿ ಹಾಗೂ 10ನೇ ದಿನ ವಿಜಯದಶಮಿಯ ನಾಡಹಬ್ಬಕ್ಕೆ ಅಧಿಕೃತ ಚಾಲನೆ ನೀಡಿ ಮಾತನಾಡಿದರು.

ಸರ್ಕಾರ ಮಾಡುವ ಯಾವುದೇ ಕೆಲಸದಲ್ಲಿ ನಾವು ಕೈಜೋಡಿಸುವುದು ನಮ್ಮ ಕೆಲಸವಾಗಿದೆ, ನಮಗೆ ಸಮಾಜದಿಂದ ಸಿಕ್ಕಿದ ಹಣ ಮತ್ತೆ ಸಮಾಜಕ್ಕೆ ಹೋಗಬೇಕು. ಹೀಗಾಗಿ ಕೊಡಗು ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳ ಜನರ ಪುನರ್ವಸತಿಗೆ ಸರ್ಕಾರ ಸ್ಥಳ ಗುರುತಿಸಿದರೆ ಇನ್ಫೋಸಿಸ್ ವತಿಯಿಂದ 25 ಕೋಟಿ ರೂಪಾಯಿ ವೆಚ್ಚದಲ್ಲಿ ವಸತಿ ನಿರ್ಮಿಸಿಕೊಡಲಾಗುವುದು ಎಂದು ಘೋಷಿಸಿದರು. ಇದನ್ನು ನಾನು ಕೊಡುಗೆ ಎಂದು ಭಾವಿಸದೆ ಕರ್ತವ್ಯ ಎಂದು ತಿಳಿಯುತ್ತೇನೆ ಎಂದು ಕೂಡ ಸುಧಾಮೂರ್ತಿ ಹೇಳಿದರು.

ದಸರಾ ಕೇವಲ ಇಂದು ನಿನ್ನೆಯದಲ್ಲ, ಸಾವಿರಾರು ವರ್ಷಗಳ ಇತಿಹಾಸ ಮೈಸೂರು ದಸರಾಗೆ ಇದೆ. ಹಿಂದಿನ ಕಾಲದಲ್ಲಿ ಇದನ್ನು ನವಮಿ ಹಬ್ಬ ಎಂದು ಕೂಡ ಆಚರಿಸುತ್ತಿದ್ದರೆ. ಕರ್ನಾಟಕ ರಾಜ್ಯದ ಉದಯ, ಕನ್ನಡ ಭಾಷೆ, ಸಂಸ್ಕೃತಿಯ ಉಳಿವು, ಬೆಳವಣಿಗೆಗೆ ಮೈಸೂರು ಮಹಾರಾಜರ ಕೊಡುಗೆ ಅಪಾರ. ಇದಕ್ಕೆ ನಾವು ಮೈಸೂರು ದೊರೆಗಳಿಗೆ ಎಂದಿಗೂ ಕೃತಜ್ಞರಾಗಿರಬೇಕು ಎಂದರು.

ದಸರಾ ಉದ್ಘಾಟಿಸಿರುವುದು ನನ್ನ ಪೂರ್ವಜನ್ಮದ ಪುಣ್ಯ ಎಂದು ಭಾವಿಸುತ್ತೇನೆ. ನನ್ನ ಜೀವನದ ಅತ್ಯಂತದ ಸಂತಸದ ದಿನ. ನಮ್ಮ ಕಾಲದಲ್ಲಿ ಇದಕ್ಕೆ ಅಜ್ಜಿ 'ಮಹಾನವಮಿ ಹಬ್ಬ' ಎಂದು ಹೇಳುತ್ತಿದ್ದರು. ಹಂಪಿಯಲ್ಲಿ ಇಂದಿಗೂ ಮಹಾನವಮಿ ದಿಬ್ಬವನ್ನು ಕಾಣಬಹುದು. ಮುಂದೆ ಮೈಸೂರು ಮಹಾರಾಜರು ಅದನ್ನು ಮುಂದುವರಿಸಿ ನಾಡಿನ ತುಂಬ ಪಸರುವಂತೆ ಮಾಡಿದರು. ಈ ವೈಭವದ ಉತ್ಸವ ಮತ್ತು ಹಬ್ಬವನ್ನು ಉಳಿಸಿದ್ದಕ್ಕೆ ಅವರಿಗೆ ನಾವು ಸದಾ ಕೃತಜ್ಞರಾಗಿರಬೇಕು ಎಂದು ಸುಧಾ ಮೂರ್ತಿ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT