ಸಮಾರಂಭದಲ್ಲಿ ಮಾತನಾಡಿದ ಸಂಸದ ಪ್ರತಾಪ ಸಿಂಹ 
ರಾಜ್ಯ

ಟಿಪ್ಪು ಜಯಂತಿ ಆಚರಣೆ ನಿಲ್ಲಿಸಿ: ಸಂಸದ ಪ್ರತಾಪ್ ಸಿಂಹ ಸಿಎಂಗೆ ಒತ್ತಾಯ

ಟಿಪ್ಪು ಜಯಂತಿ ಆಚರಿಸುವುದು ಈ ನಾಡಿನ ಸಂಸ್ಕೃತಿಗೆ ವಿರುದ್ಧವಾದದ್ದು. ಜೆಡಿಎಸ್-ಕಾಂಗ್ರೆಸ್ ಮೈತ್ರಿ ...

ಮೈಸೂರು: ಟಿಪ್ಪು ಜಯಂತಿ ಆಚರಿಸುವುದು ಈ ನಾಡಿನ ಸಂಸ್ಕೃತಿಗೆ ವಿರುದ್ಧವಾದದ್ದು. ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರವಾದರೂ ಟಿಪ್ಪು ಜಯಂತಿ ಆಚರಿಸುವುದನ್ನು ಬಂದ್ ಮಾಡಬೇಕು ಎಂದು ಮೈಸೂರು-ಕೊಡಗು ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಒತ್ತಾಯಿಸಿದ್ದಾರೆ.

ನಾಡದೇವಿ ಚಾಮುಂಡಿ ದೇವಿಗೆ ಪೂಜೆ ಸಲ್ಲಿಸಿ ಮೈಸೂರು ದಸಾರ ಉದ್ಘಾಟನೆ ನಂತರ ನಡೆದ ಕಾರ್ಯಕ್ರಮದಲ್ಲಿ ವೇದಿಕೆಯಲ್ಲಿ ಟಿಪ್ಪು ಜಯಂತಿ‌ ಕುರಿತು ಮಾತನಾಡಿದ ಸಂಸದ ಪ್ರತಾಪ್‌ಸಿಂಹ, ಇಂದು ದಸರಾ ಆಚರಣೆ ಮಾಡುತ್ತಿದ್ದರೆ ಅದು ಮೈಸೂರು ಅರಸರ ಕೊಡುಗೆ.ಅಂತಹ ಕುಟುಂಬದ ರಕ್ತಪಾತಕ್ಕೆ ಕಾರಣವಾಗಿದ್ದು ಟಿಪ್ಪು ಸುಲ್ತಾನ. ಈ ಹೊತ್ತಿನಲ್ಲಾದರೂ ಮೈಸೂರು ಅರಸರಿಗೆ ಗೌರವ ನೀಡಿ. ನಿಮ್ಮ ಆಳ್ವಿಕೆಯಲ್ಲಿಯಾದರೂ ಟಿಪ್ಪು ಜಯಂತಿ ಬಂದ್ ಮಾಡಿ ಎಂದು ವೇದಿಕೆಯಲ್ಲಿದ್ದ ಸಿಎಂ ಕುಮಾರಸ್ವಾಮಿಯವರನ್ನು ಮನವಿ ಮಾಡಿದರು.

ಮೈಸೂರು ಮಹಾನಗರ ಪಾಲಿಕೆಗೆ ಪ್ರಥಮ ಪ್ರಜೆ ಮೇಯರ್ ನೇಮಕವಾಗದ ಕಾರಣ ದಸರಾ ಉದ್ಘಾಟನೆ ಕಾರ್ಯಕ್ರಮದಲ್ಲಿ ಈ ಬಾರಿ ಮೇಯರ್ ಉಪಸ್ಥಿತಿ ಇರಲಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT