ಸಂಗ್ರಹ ಚಿತ್ರ 
ರಾಜ್ಯ

ನವರಾತ್ರಿ ಸಂಭ್ರಮ ಆರಂಭ: ಮೈಸೂರು ಅರಮನೆಯಲ್ಲಿ ಕಳೆಕಟ್ಟಿದ ಖಾಸಗಿ ದರ್ಬಾರ್

ರಾಜ್ಯದ ನಾಡಹಬ್ಬವಾದ ದಸರಾ ಮಹೋತ್ಸವಕ್ಕೆ ಸಾಂಸ್ಕೃತಿಕ ನಗರಿ ಮೈಸೂರು ಸೇರಿದಂತೆ ರಾಜ್ಯದಾದ್ಯಂತ ಬುಧವಾರ ಚಾಲನೆ ದೊರಕಿದ್ದು, ಮೈಸೂರು ಅರಮನೆಯಲ್ಲಿ ನಡೆಯುವ ಖಾಸಗಿ ದರ್ಬಾರ್ ಎಲ್ಲರ ಗಮನ ಸೆಳೆಯುತ್ತಿದೆ...

ಬೆಂಗಳೂರು: ರಾಜ್ಯದ ನಾಡಹಬ್ಬವಾದ ದಸರಾ ಮಹೋತ್ಸವಕ್ಕೆ ಸಾಂಸ್ಕೃತಿಕ ನಗರಿ ಮೈಸೂರು ಸೇರಿದಂತೆ ರಾಜ್ಯದಾದ್ಯಂತ ಬುಧವಾರ ಚಾಲನೆ ದೊರಕಿದ್ದು, ಮೈಸೂರು ಅರಮನೆಯಲ್ಲಿ ನಡೆಯುವ ಖಾಸಗಿ ದರ್ಬಾರ್ ಎಲ್ಲರ ಗಮನ ಸೆಳೆಯುತ್ತಿದೆ. 
ದಸರಾ ಮಹೋತ್ಸವ ಅಂಗವಾಗಿ ಮೈಸೂರು ಅರಮನೆಯಲ್ಲಿ ರಾಜವಂಶಸ್ಥರ ಖಾಸಗಿ ದರ್ಬಾರ್ ಅ.10ರಿಂದ 19ರವರೆಗೂ ನಡೆಯಲಿದೆ. 
ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಇಂದು ಸಂಪ್ರದಾಯದಂತೆ ಖಾಸಗಿ ದರ್ಬಾರ್ ಆರಂಭಿಸಲಿದ್ದು, ನಾಲ್ಕನೇ ಬಾರಿಗೆ ಸಿಂಹಾಸನಾರೋಹಣ ಮಾಡಲಿದ್ದಾರೆ. 
ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ಅವರ ಪತ್ನಿ ತ್ರಿಷಿಕಾ ಕುಮಾರಿ, ತಾಯಿ ಪ್ರಮೋದಾದೇವಿ ಒಡೆಯರ್, ಕುಟುಂಬ ವರ್ಗದವರು ಹಾಗೂ ಅರಮನೆ ಸಿಬ್ಬಂದಿ ಸಾತ್ ನೀಡಲಿದ್ದಾರೆ. 
ನವರಾತ್ರಿ ಇಂದಿನಿಂದ ಆರಂಭವಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಪ್ರಸಿದ್ಧ ಶಕ್ತಿ ಕೇಂದ್ರಗಳಾದ ಶೃಂಗೇರಿ, ಹೊರನಾಡು, ಕೊಲ್ಲೂರು, ಕಟೀಲು, ಮಂಗಳಾದೇವಿ, ಬಪ್ಪನಾಡು, ಪೊಳಲಿ, ಶಿರಸಿ, ಬನಶಂಕರಿ, ಸವದತ್ತಿ, ಸಿರಸಂಗಿ ಕ್ಷೇತ್ರಗಳಲ್ಲೂ ಇಂದಿನಿಂದ ನವರಾತ್ರಿ ಉತ್ಸವ ಮತ್ತು ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಆರಂಭವಾಗಿವೆ. ಅದೇ ರೀತಿ ಮಂಗಳೂರಿನ ಇತಿಹಾಸ ಪ್ರಸಿದ್ಧ ಕುದ್ರೋಳಿ ದಸರಾ ಉತ್ಸವಕ್ಕೂ ಭರದ ತಯಾರಿಗಳು ನಡೆದಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT