ಸಂಗ್ರಹ ಚಿತ್ರ 
ರಾಜ್ಯ

ನವರಾತ್ರಿ ಸಂಭ್ರಮ ಆರಂಭ: ಮೈಸೂರು ಅರಮನೆಯಲ್ಲಿ ಕಳೆಕಟ್ಟಿದ ಖಾಸಗಿ ದರ್ಬಾರ್

ರಾಜ್ಯದ ನಾಡಹಬ್ಬವಾದ ದಸರಾ ಮಹೋತ್ಸವಕ್ಕೆ ಸಾಂಸ್ಕೃತಿಕ ನಗರಿ ಮೈಸೂರು ಸೇರಿದಂತೆ ರಾಜ್ಯದಾದ್ಯಂತ ಬುಧವಾರ ಚಾಲನೆ ದೊರಕಿದ್ದು, ಮೈಸೂರು ಅರಮನೆಯಲ್ಲಿ ನಡೆಯುವ ಖಾಸಗಿ ದರ್ಬಾರ್ ಎಲ್ಲರ ಗಮನ ಸೆಳೆಯುತ್ತಿದೆ...

ಬೆಂಗಳೂರು: ರಾಜ್ಯದ ನಾಡಹಬ್ಬವಾದ ದಸರಾ ಮಹೋತ್ಸವಕ್ಕೆ ಸಾಂಸ್ಕೃತಿಕ ನಗರಿ ಮೈಸೂರು ಸೇರಿದಂತೆ ರಾಜ್ಯದಾದ್ಯಂತ ಬುಧವಾರ ಚಾಲನೆ ದೊರಕಿದ್ದು, ಮೈಸೂರು ಅರಮನೆಯಲ್ಲಿ ನಡೆಯುವ ಖಾಸಗಿ ದರ್ಬಾರ್ ಎಲ್ಲರ ಗಮನ ಸೆಳೆಯುತ್ತಿದೆ. 
ದಸರಾ ಮಹೋತ್ಸವ ಅಂಗವಾಗಿ ಮೈಸೂರು ಅರಮನೆಯಲ್ಲಿ ರಾಜವಂಶಸ್ಥರ ಖಾಸಗಿ ದರ್ಬಾರ್ ಅ.10ರಿಂದ 19ರವರೆಗೂ ನಡೆಯಲಿದೆ. 
ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಇಂದು ಸಂಪ್ರದಾಯದಂತೆ ಖಾಸಗಿ ದರ್ಬಾರ್ ಆರಂಭಿಸಲಿದ್ದು, ನಾಲ್ಕನೇ ಬಾರಿಗೆ ಸಿಂಹಾಸನಾರೋಹಣ ಮಾಡಲಿದ್ದಾರೆ. 
ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ಅವರ ಪತ್ನಿ ತ್ರಿಷಿಕಾ ಕುಮಾರಿ, ತಾಯಿ ಪ್ರಮೋದಾದೇವಿ ಒಡೆಯರ್, ಕುಟುಂಬ ವರ್ಗದವರು ಹಾಗೂ ಅರಮನೆ ಸಿಬ್ಬಂದಿ ಸಾತ್ ನೀಡಲಿದ್ದಾರೆ. 
ನವರಾತ್ರಿ ಇಂದಿನಿಂದ ಆರಂಭವಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಪ್ರಸಿದ್ಧ ಶಕ್ತಿ ಕೇಂದ್ರಗಳಾದ ಶೃಂಗೇರಿ, ಹೊರನಾಡು, ಕೊಲ್ಲೂರು, ಕಟೀಲು, ಮಂಗಳಾದೇವಿ, ಬಪ್ಪನಾಡು, ಪೊಳಲಿ, ಶಿರಸಿ, ಬನಶಂಕರಿ, ಸವದತ್ತಿ, ಸಿರಸಂಗಿ ಕ್ಷೇತ್ರಗಳಲ್ಲೂ ಇಂದಿನಿಂದ ನವರಾತ್ರಿ ಉತ್ಸವ ಮತ್ತು ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಆರಂಭವಾಗಿವೆ. ಅದೇ ರೀತಿ ಮಂಗಳೂರಿನ ಇತಿಹಾಸ ಪ್ರಸಿದ್ಧ ಕುದ್ರೋಳಿ ದಸರಾ ಉತ್ಸವಕ್ಕೂ ಭರದ ತಯಾರಿಗಳು ನಡೆದಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT