ಸಂಗ್ರಹ ಚಿತ್ರ 
ರಾಜ್ಯ

ಕೊಪ್ಪಳ: ಮೊದಲ ರಾತ್ರಿಯಂದೇ ವಧು ಅಪಹರಣ, ಫಸ್ಟ್ ನೈಟ್ ಕನಸಿಗೆ ಕೊಳ್ಳಿಯಿಟ್ಟ ದುಷ್ಕರ್ಮಿಗಳು!

ಈಗಷ್ಟೇ ವಿವಾಹವಾಗಿದ್ದು ಇನ್ನೇನು ವಧೂ ವರರು ಮೊದಲ ರಾತ್ರಿಯ ಸವಿಯುಣಬೇಕು ಎನ್ನುವಷ್ಟರಲ್ಲಿ ವಧು ಅಪಹರಣಕ್ಕೊಳಗಾಗಿರುವ ವಿಲಕ್ಷಣ ಘಟನೆ ಕೊಪ್ಪಳ ಜಿಲ್ಲೆ ಗಂಘಾವತಿಯಲ್ಲಿ ನಡೆದಿದೆ.

ಕೊಪ್ಪಳ: ಈಗಷ್ಟೇ ವಿವಾಹವಾಗಿದ್ದು ಇನ್ನೇನು ವಧೂ ವರರು ಮೊದಲ ರಾತ್ರಿಯ ಸವಿಯುಣಬೇಕು ಎನ್ನುವಷ್ಟರಲ್ಲಿ ವಧು ಅಪಹರಣಕ್ಕೊಳಗಾಗಿರುವ ವಿಲಕ್ಷಣ ಘಟನೆ ಕೊಪ್ಪಳ ಜಿಲ್ಲೆ ಗಂಗಾವತಿಯಲ್ಲಿ ನಡೆದಿದೆ.
ಗಂಗಾವತಿ ತಾಲೂಕು ಗುಡೂರು ಗ್ರಾಮದಲ್ಲಿ ನಡೆದ ಘಟನೆಯಲ್ಲಿ ಮಲ್ಲನ ಗೌಡ ಹಾಗೂ ಗಾಯತ್ರಿ ವಿವಾಹವಾಗಿದ್ದರು. 15 ದಿನಗಳ ಹಿಂದೆ ಹುರು ಹಿರಿಯರ ಸಮ್ಮುಖದಲ್ಲಿ ಇವರ ವಿವಾಹ ನೆರವೇರಿತ್ತು.ಕುಷ್ಟಗಿ ತಾಲೂಕಿನ ಪುರದ ಸೋಮನಾಥ ದೇವಸ್ಥಾನದಲ್ಲಿ ವಿವಾಹ ಜರುಗಿತ್ತು. 
ವಿವಾಹವಾಗಿ ಬಳಿಕ ವಧು-ವರರು ಮೊದಲ ರಾತ್ರಿ ಕಾರ್ಯಕ್ರಮವನ್ನು ಗುಡೂರಿನಲ್ಲಿ ಆಯೋಜಿಸಿದ್ದಾಗ ಅಪಹರಣಕಾರರು ಹೊಂಚು ಹಾಕಿ ವಧುವನ್ನು ಅಪಹರಿಸಿಕೊಂಡು ಹೋಗಿದ್ದಾರೆ ಎಂದು ಪೋಲೀಸರು ತಿಳಿಸಿದರು.
ಮೊದಲ ರಾತ್ರಿಯಂದು ವಧು ಶೌಚಾಲಯಕ್ಕೆಂದು ತೆರಳಿದ್ದಾಗ ಅಲ್ಲೇ ಹೊಂಚುಹಾಕಿ ಕುಳಿತಿದ್ದ ಆರು ಮಂದಿ ದುಷ್ಕರ್ಮಿಗಳು ಆಕೆಯನ್ನು ಬಲವಂತವಾಗಿ ಕಾರಿನಲ್ಲಿ ಕೂರಿಸಿಕೊಂಡು ಪರಾರಿಯಾಗಿದ್ದಾರೆ.ಮನೆಯವರೆಲ್ಲಾ ಸೇರಿ ಬಿಡಿಸಹೋದರೂ ಪ್ರಯೋಜನವಾಗಿಲ್ಲ. 
ಘಟನೆಗೆ ಸಂಬಂಧಿಸಿ ಕಾರಟಗಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಆದರೆ ಪೋಲೀಸರು ಯಾವುದೇ ಕ್ರಮ ಕೈಗೊಲ್ಳುತ್ತಿಲ್ಲ ಎಂದು ದೂರುದಾರರಾದ ವರನ ಮನೆಯವರು ಆರೋಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT