ನೀಲಕುರಿಂಜಿ ಹೂವಿನ ಸಂಗ್ರಹ ಚಿತ್ರ 
ರಾಜ್ಯ

ಚಿಕ್ಕಮಗಳೂರು: ಈ ವರ್ಷ ಅರಳಲಿಲ್ಲ ನೀಲಕುರಿಂಜಿ; ಪೋಟೋ ನೋಡಿ ಹೋದ ಪ್ರವಾಸಿಗರು ಬೆಸ್ತು

ಮುಳ್ಳಯ್ಯನಗಿರಿ ಮತ್ತು ಬಾಬಾ ಬುಡನ್ ಗಿರಿ ಬೆಟ್ಟ ಪ್ರದೇಶದಲ್ಲಿ ಪ್ರತಿ 12 ವರ್ಷಗಳಿಗೊಮ್ಮೆ ಒಂದು ...

ಚಿಕ್ಕಮಗಳೂರು: ಮುಳ್ಳಯ್ಯನಗಿರಿ ಮತ್ತು ಬಾಬಾ ಬುಡನ್ ಗಿರಿ ಬೆಟ್ಟ ಪ್ರದೇಶದಲ್ಲಿ ಪ್ರತಿ 12 ವರ್ಷಗಳಿಗೊಮ್ಮೆ ಒಂದು ಹೂವು ಅರಳುತ್ತದೆ,  ಪ್ರಕೃತಿಪ್ರಿಯರನ್ನು ಕಣ್ಣರಳಿಸಿ ಬರಸೆಳೆಯುವ ಈ ಹೂವಿಗೆ ಕುರಿಂಜಿ ಅಥವಾ ನೀಲಕುರಿಂಜಿ ಹೂವು ಎಂದು ಹೆಸರು. ಈ ವರ್ಷ ಹೂವು ಅರಳದೆ ಇರುವುದು ಪ್ರವಾಸಿಗರಿಗೆ ನಿರಾಶೆಯನ್ನುಂಟುಮಾಡಿದೆ.

ಈ ಹೂವು ಕಳೆದ ಬಾರಿ ಅರಳಿದ್ದು 2006ರಲ್ಲಿ, ಈ ಹೂವು ಅರಳಿದಾಗ ಇಡೀ ಬೆಟ್ಟವೇ ನೀಲಿ ಮತ್ತು ನೇರಳೆ ಬಣ್ಣದಲ್ಲಿ ಚಿತ್ತಾರ ಬಿಡಿಸಿದಂತೆ ಕಾಣುತ್ತದೆ. 12 ವರ್ಷಗಳ ನಂತರ ಈ ಹೂ ಅರಳುತ್ತದೆ, ಇಂಟರ್ನೆಟ್, ಸೋಷಿಯಲ್ ಮೀಡಿಯಾಗಳಲ್ಲಿ ಮಾತ್ರವಲ್ಲದೆ ನೇರವಾಗಿ ಚಿಕ್ಕಮಗಳೂರಿಗೆ ಹೋಗಿ ಕಣ್ತುಂಬಿಕೊಳ್ಳಬಹುದು ಎಂದು ಪ್ರವಾಸಿಗರು ಆಸೆಯಲ್ಲಿದ್ದರು. ಆದರೆ ಅವರ ಆಸೆ ಈ ವರ್ಷ ಕೈಗೂಡುವ ಲಕ್ಷಣ ಕಾಣುತ್ತಿಲ್ಲ.

ಕೆಲವರು ಹಿಂದಿನ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಾಕಿ ಅದು ಈಗಿನ ಕುರುಂಜಿ ಹೂವಿನ ಫೋಟೋ ಎಂದು ಹೇಳಿ ಹಾದಿತಪ್ಪಿಸುತ್ತಿದ್ದಾರೆ. ಇದನ್ನು ನಂಬಿಕೊಂಡು ದೂರದೂರುಗಳಿಂದ ವಾರಾಂತ್ಯಗಳಲ್ಲಿ ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ, ಬಾಬಾ ಬುಡನ್ ಗಿರಿ ಮತ್ತು ಸೀತಾಲಯನಗಿರಿಗೆ ಬಂದು ನಿರಾಶೆಯಿಂದ ವಾಪಸ್ಸಾಗುತ್ತಿದ್ದಾರೆ.

ಬೆಂಗಳೂರಿನ ಪ್ರವಾಸಿಗರೊಬ್ಬರು ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಗೆ ಮಾಹಿತಿ ನೀಡಿ, ಸೋಷಿಯಲ್ ಮೀಡಿಯಾದಲ್ಲಿನ ಪೋಸ್ಟ್ ನೋಡಿಕೊಂಡು ಕುರುಂಜಿ ಹೂವನ್ನು ನೋಡಲೆಂದು ಬಂದೆ. ಇಲ್ಲಿನ ಬರಿದಾದ ದೃಶ್ಯ ನೋಡಿ ಬೇಸರವಾಯಿತು ಎನ್ನುತ್ತಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಕ್ಕಳ ಸಾವಿಗೆ ಪ್ರತೀಕಾರ: ಇಸ್ರೇಲ್-ಅಮೆರಿಕ, ಗಲ್ಫ್ ದೇಶಗಳ ಮೇಲೆ ದಾಳಿ ನಿಲ್ಲಲ್ಲ; ಇರಾನ್ ಹೊಸ ಸರ್ವೋಚ್ಛ ನಾಯಕ ವಾರ್ನಿಂಗ್!

No shortage of fuel: ಹಾರ್ಮುಜ್ ಜಲಸಂಧಿ ತಲುಪಿಸಬಹುದಾದ ತೈಲಕ್ಕಿಂತ ಹೆಚ್ಚಿನದ್ದು ಬೇರೆಡೆಯಿಂದ ಭಾರತ ತಲುಪಿದೆ; ಪೆಟ್ರೋಲಿಯಂ ಸಚಿವ

ಮಧ್ಯಪ್ರಾಚ್ಯ ಯುದ್ಧಗ್ರಸ್ತ: ತೈಲ, ಅನಿಲ ಪೂರೈಕೆ ವ್ಯತ್ಯಯ ಸಂಕಷ್ಟ; ಆದರೂ ರಹಸ್ಯ'ಭೂಗತ ಗುಹೆ'ಗಳಿಂದ ಭಾರತಕ್ಕೆ No Tension!

ನಮ್ಮ ಶಕ್ತಿ ಇರಾನ್ ನಿರ್ನಾಮಕ್ಕೆ ಮೀಸಲು, ಹಾರ್ಮುಜ್ ಜಲಸಂಧಿಯಲ್ಲಿ ಟ್ಯಾಂಕರ್ ಗಳಿಗೆ ಬೆಂಗಾವಲು ನೀಡಲ್ಲ: ಅಮೆರಿಕ

ಮಾರ್ಚ್ 16 ರಂದು ರಾಜ್ಯದ ಎರಡು ಕ್ಷೇತ್ರಗಳ ಉಪ ಚುನಾವಣೆ ಸೇರಿದಂತೆ ಐದು ರಾಜ್ಯಗಳ ಚುನಾವಣೆ ಘೋಷಣೆ ಸಾಧ್ಯತೆ

SCROLL FOR NEXT