ನೀಲಕುರಿಂಜಿ ಹೂವಿನ ಸಂಗ್ರಹ ಚಿತ್ರ 
ರಾಜ್ಯ

ಚಿಕ್ಕಮಗಳೂರು: ಈ ವರ್ಷ ಅರಳಲಿಲ್ಲ ನೀಲಕುರಿಂಜಿ; ಪೋಟೋ ನೋಡಿ ಹೋದ ಪ್ರವಾಸಿಗರು ಬೆಸ್ತು

ಮುಳ್ಳಯ್ಯನಗಿರಿ ಮತ್ತು ಬಾಬಾ ಬುಡನ್ ಗಿರಿ ಬೆಟ್ಟ ಪ್ರದೇಶದಲ್ಲಿ ಪ್ರತಿ 12 ವರ್ಷಗಳಿಗೊಮ್ಮೆ ಒಂದು ...

ಚಿಕ್ಕಮಗಳೂರು: ಮುಳ್ಳಯ್ಯನಗಿರಿ ಮತ್ತು ಬಾಬಾ ಬುಡನ್ ಗಿರಿ ಬೆಟ್ಟ ಪ್ರದೇಶದಲ್ಲಿ ಪ್ರತಿ 12 ವರ್ಷಗಳಿಗೊಮ್ಮೆ ಒಂದು ಹೂವು ಅರಳುತ್ತದೆ,  ಪ್ರಕೃತಿಪ್ರಿಯರನ್ನು ಕಣ್ಣರಳಿಸಿ ಬರಸೆಳೆಯುವ ಈ ಹೂವಿಗೆ ಕುರಿಂಜಿ ಅಥವಾ ನೀಲಕುರಿಂಜಿ ಹೂವು ಎಂದು ಹೆಸರು. ಈ ವರ್ಷ ಹೂವು ಅರಳದೆ ಇರುವುದು ಪ್ರವಾಸಿಗರಿಗೆ ನಿರಾಶೆಯನ್ನುಂಟುಮಾಡಿದೆ.

ಈ ಹೂವು ಕಳೆದ ಬಾರಿ ಅರಳಿದ್ದು 2006ರಲ್ಲಿ, ಈ ಹೂವು ಅರಳಿದಾಗ ಇಡೀ ಬೆಟ್ಟವೇ ನೀಲಿ ಮತ್ತು ನೇರಳೆ ಬಣ್ಣದಲ್ಲಿ ಚಿತ್ತಾರ ಬಿಡಿಸಿದಂತೆ ಕಾಣುತ್ತದೆ. 12 ವರ್ಷಗಳ ನಂತರ ಈ ಹೂ ಅರಳುತ್ತದೆ, ಇಂಟರ್ನೆಟ್, ಸೋಷಿಯಲ್ ಮೀಡಿಯಾಗಳಲ್ಲಿ ಮಾತ್ರವಲ್ಲದೆ ನೇರವಾಗಿ ಚಿಕ್ಕಮಗಳೂರಿಗೆ ಹೋಗಿ ಕಣ್ತುಂಬಿಕೊಳ್ಳಬಹುದು ಎಂದು ಪ್ರವಾಸಿಗರು ಆಸೆಯಲ್ಲಿದ್ದರು. ಆದರೆ ಅವರ ಆಸೆ ಈ ವರ್ಷ ಕೈಗೂಡುವ ಲಕ್ಷಣ ಕಾಣುತ್ತಿಲ್ಲ.

ಕೆಲವರು ಹಿಂದಿನ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಾಕಿ ಅದು ಈಗಿನ ಕುರುಂಜಿ ಹೂವಿನ ಫೋಟೋ ಎಂದು ಹೇಳಿ ಹಾದಿತಪ್ಪಿಸುತ್ತಿದ್ದಾರೆ. ಇದನ್ನು ನಂಬಿಕೊಂಡು ದೂರದೂರುಗಳಿಂದ ವಾರಾಂತ್ಯಗಳಲ್ಲಿ ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ, ಬಾಬಾ ಬುಡನ್ ಗಿರಿ ಮತ್ತು ಸೀತಾಲಯನಗಿರಿಗೆ ಬಂದು ನಿರಾಶೆಯಿಂದ ವಾಪಸ್ಸಾಗುತ್ತಿದ್ದಾರೆ.

ಬೆಂಗಳೂರಿನ ಪ್ರವಾಸಿಗರೊಬ್ಬರು ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಗೆ ಮಾಹಿತಿ ನೀಡಿ, ಸೋಷಿಯಲ್ ಮೀಡಿಯಾದಲ್ಲಿನ ಪೋಸ್ಟ್ ನೋಡಿಕೊಂಡು ಕುರುಂಜಿ ಹೂವನ್ನು ನೋಡಲೆಂದು ಬಂದೆ. ಇಲ್ಲಿನ ಬರಿದಾದ ದೃಶ್ಯ ನೋಡಿ ಬೇಸರವಾಯಿತು ಎನ್ನುತ್ತಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಂಚಿ ಪರೀಕ್ಷೆ ವಿವಾದ: ಬ್ಯಾರಿಕೇಡ್ ಮುರಿದು ವಿಧಾನಸೌಧದತ್ತ ನುಗ್ಗಿದ ವಿದ್ಯಾರ್ಥಿಗಳು! ಜಲಫಿರಂಗಿ ಬಳಸಿದ ಪೊಲೀಸರು, Video

'JDS ಪಾದಯಾತ್ರೆಯ ಬಂಡವಾಳ ಬಯಲು ಮಾಡಿದ ವಿಜಯೇಂದ್ರ': ಕಾಂಗ್ರೆಸ್​​ನಿಂದ ವಿಡಿಯೋ ಬಿಡುಗಡೆ!

TNIE Exclusive | Air India ವಿಮಾನದಲ್ಲಿ ಭಾರೀ ತಾಂತ್ರಿಕ ದೋಷ..! Phuket-Delhi ವಿಮಾನ 300 ಅಡಿ ಕುಸಿತಕ್ಕೆ Triple hydraulic systems ವೈಫಲ್ಯ ಕಾರಣ..?

GBA: ಖಾಲಿ ನಿವೇಶನ ಸ್ವಚ್ಛಗೊಳಿಸದ, ಡೆಬ್ರಿಸ್ ತೆರವುಗೊಳಿಸದ ಮಾಲೀಕರೆ ಎಚ್ಚರ! 19 ಸಾವಿರ ರೂಗಳಿಂದ 1.28 ಲಕ್ಷವರೆಗೂ ಬೀಳಲಿದೆ ದಂಡ!

ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಸಿಎಂ ಡಿಕೆ.ಶಿವಕುಮಾರ್ ದೆಹಲಿಗೆ ದೌಡು: ಹೈಕಮಾಂಡ್‌ ಜೊತೆ ಮಹತ್ವದ ಚರ್ಚೆ..!