ಎಚ್.ಡಿ ಕುಮಾರ ಸ್ವಾಮಿ 
ರಾಜ್ಯ

ನನ್ನ ಸಂಪಾದನೆ ಆರಂಭವಾದದ್ದು ಮೈಸೂರಿನಲ್ಲಿ: ಹಳೇಯ ಘಟನೆ ಮೆಲಕು ಹಾಕಿದ ಸಿಎಂ

ದಸರಾ ಪ್ರಯುಕ್ತ ನಡೆಯುತ್ತಿರುವ ಚಲನಚಿತ್ರೋತ್ಸವಕ್ಕೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಚಾಲನೆ ನೀಡಿದರು. ಕಲಾಮಂದಿರದಲ್ಲಿ ದೀಪ ಬೆಳಗುವ ...

ಮೈಸೂರು: ದಸರಾ ಪ್ರಯುಕ್ತ ನಡೆಯುತ್ತಿರುವ ಚಲನಚಿತ್ರೋತ್ಸವಕ್ಕೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಚಾಲನೆ ನೀಡಿದರು. ಕಲಾಮಂದಿರದಲ್ಲಿ ದೀಪ ಬೆಳಗುವ ಮೂಲಕ ದಸರಾ ಚಲನಚಿತ್ರೋತ್ಸವನ್ನ ಕುಮಾರಸ್ವಾಮಿ ಉದ್ಘಾಟಿಸಿದರು.
ಈ ವೇಳೆ ತಾವು, ವಿತರಕರಾಗಿ, ಪ್ರದರ್ಶಕರಾಗಿ ಹಾಗೂ ನಿರ್ಮಾಪಕರಾದ ತಮ್ಮ ಜೀವನದ ಹಳೇಯ ಘಟನೆಗಳನ್ನು  ಸಿಎಂ ಕುಮಾರಸ್ವಾಮಿ ಸ್ಮರಿಸಿದರು,
ಮೈಸೂರಿಗ ಬರುವ ಪ್ರತಿ ವ್ಯಕ್ತಿಯೂ ದೊಡ್ಡದ್ದನ್ನು ಸಾಧಿಸಬೇಕು ಎಂದು ಬಯಸಿ ಬರುತ್ತಾನೆ, ನಾನು ಕೂಡ ಅರಮನೆ ನಗರಿ ಮೈಸೂರಿಗೆ ಸಿನಿಮಾ ಹಂಚಿಕೆಗಾಗಿ ಬಂದೆ, ಆದರೆ ಯಾವತ್ತೂ ನಾನು ಹಿಂತಿರುಗಿ ನೋಡಲೇ ಇಲ್ಲ.
ನಜರಾಬಾದ್ ಮ ಮಾದ್ವೇಶ ಕಾಂಪ್ಲೆಕ್ಸ್ ನಲ್ಲಿ ಚೆನ್ನಾಂಬಿಕಾ ಫಿಲ್ಮ್ ಆರಂಭಿಸಿ ಸಿನಿಮಾ ಹಂಚಿಕೆ ಪ್ರಾರಂಭಿಸಿದೆ. ನಾನು ಹಂಚಿಕೆ ಮಾಡಿದ ಮೊದಲು ಮೂರು ಚಿತ್ರಗಲ್ಲಿ ಅಂಬರೀಷ್ ನಟಿಸಿದ್ದರು,  ನಾನು ಮೈಸೂರು, ಮಂಡ್ಯ, ಕೂರ್ಗ್ (ಕೊಡಗು) ಮತ್ತು ಹಾಸನ ಜಿಲ್ಲೆಗಳಿಗೆ ಮಾತ್ರ ಹಂಚಿಕೆದಾರನಾಗಿದ್ದೆ, ನನ್ನ ಸಂಪಾದನೆ ಆರಂಭವಾದದ್ದು ಮೈಸೂರಿನಿಂದ ಎಂದು ಸಿಎಂ ಹೇಳಿದರು,. 
ಚಿತ್ರಗಳನ್ನ ನಿರ್ಮಾಣ ಮಾಡಬೇಕಾದರೇ ಸಮಾಜವನ್ನ ತಪ್ಪುದಾರಿಗೆ ತೆಗೆದುಕೊಂಡು ಹೋಗುವಂತಹ ಸಿನಿಮಾ ಮಾಡಬಾರದು' ಎಂದು ನಿರ್ಮಾಪಕ, ನಿರ್ದೇಶಕರಿಗೆ ಕಿವಿಮಾತು ಹೇಳಿದರು. 'ಜನರು ಯಾವ ದೃಶ್ಯಗಳನ್ನ, ಯಾವ ಚಿತ್ರಗಳನ್ನ ಇಷ್ಟಪಡ್ತಾರೆ ಎಂಬುದನ್ನ ನಾನು ಚಿತ್ರಮಂದಿರದಲ್ಲಿ ಕೂತು ನೋಡಿದ್ದೇನೆ. ಇದು ನಾನು ನನ್ನ ಉದ್ಯಮಕ್ಕೆ ಸಹಾಯವಾಗಿದೆ ಎಂದು  ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT