ಎಚ್.ಡಿ ಕುಮಾರ ಸ್ವಾಮಿ 
ರಾಜ್ಯ

ನನ್ನ ಸಂಪಾದನೆ ಆರಂಭವಾದದ್ದು ಮೈಸೂರಿನಲ್ಲಿ: ಹಳೇಯ ಘಟನೆ ಮೆಲಕು ಹಾಕಿದ ಸಿಎಂ

ದಸರಾ ಪ್ರಯುಕ್ತ ನಡೆಯುತ್ತಿರುವ ಚಲನಚಿತ್ರೋತ್ಸವಕ್ಕೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಚಾಲನೆ ನೀಡಿದರು. ಕಲಾಮಂದಿರದಲ್ಲಿ ದೀಪ ಬೆಳಗುವ ...

ಮೈಸೂರು: ದಸರಾ ಪ್ರಯುಕ್ತ ನಡೆಯುತ್ತಿರುವ ಚಲನಚಿತ್ರೋತ್ಸವಕ್ಕೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಚಾಲನೆ ನೀಡಿದರು. ಕಲಾಮಂದಿರದಲ್ಲಿ ದೀಪ ಬೆಳಗುವ ಮೂಲಕ ದಸರಾ ಚಲನಚಿತ್ರೋತ್ಸವನ್ನ ಕುಮಾರಸ್ವಾಮಿ ಉದ್ಘಾಟಿಸಿದರು.
ಈ ವೇಳೆ ತಾವು, ವಿತರಕರಾಗಿ, ಪ್ರದರ್ಶಕರಾಗಿ ಹಾಗೂ ನಿರ್ಮಾಪಕರಾದ ತಮ್ಮ ಜೀವನದ ಹಳೇಯ ಘಟನೆಗಳನ್ನು  ಸಿಎಂ ಕುಮಾರಸ್ವಾಮಿ ಸ್ಮರಿಸಿದರು,
ಮೈಸೂರಿಗ ಬರುವ ಪ್ರತಿ ವ್ಯಕ್ತಿಯೂ ದೊಡ್ಡದ್ದನ್ನು ಸಾಧಿಸಬೇಕು ಎಂದು ಬಯಸಿ ಬರುತ್ತಾನೆ, ನಾನು ಕೂಡ ಅರಮನೆ ನಗರಿ ಮೈಸೂರಿಗೆ ಸಿನಿಮಾ ಹಂಚಿಕೆಗಾಗಿ ಬಂದೆ, ಆದರೆ ಯಾವತ್ತೂ ನಾನು ಹಿಂತಿರುಗಿ ನೋಡಲೇ ಇಲ್ಲ.
ನಜರಾಬಾದ್ ಮ ಮಾದ್ವೇಶ ಕಾಂಪ್ಲೆಕ್ಸ್ ನಲ್ಲಿ ಚೆನ್ನಾಂಬಿಕಾ ಫಿಲ್ಮ್ ಆರಂಭಿಸಿ ಸಿನಿಮಾ ಹಂಚಿಕೆ ಪ್ರಾರಂಭಿಸಿದೆ. ನಾನು ಹಂಚಿಕೆ ಮಾಡಿದ ಮೊದಲು ಮೂರು ಚಿತ್ರಗಲ್ಲಿ ಅಂಬರೀಷ್ ನಟಿಸಿದ್ದರು,  ನಾನು ಮೈಸೂರು, ಮಂಡ್ಯ, ಕೂರ್ಗ್ (ಕೊಡಗು) ಮತ್ತು ಹಾಸನ ಜಿಲ್ಲೆಗಳಿಗೆ ಮಾತ್ರ ಹಂಚಿಕೆದಾರನಾಗಿದ್ದೆ, ನನ್ನ ಸಂಪಾದನೆ ಆರಂಭವಾದದ್ದು ಮೈಸೂರಿನಿಂದ ಎಂದು ಸಿಎಂ ಹೇಳಿದರು,. 
ಚಿತ್ರಗಳನ್ನ ನಿರ್ಮಾಣ ಮಾಡಬೇಕಾದರೇ ಸಮಾಜವನ್ನ ತಪ್ಪುದಾರಿಗೆ ತೆಗೆದುಕೊಂಡು ಹೋಗುವಂತಹ ಸಿನಿಮಾ ಮಾಡಬಾರದು' ಎಂದು ನಿರ್ಮಾಪಕ, ನಿರ್ದೇಶಕರಿಗೆ ಕಿವಿಮಾತು ಹೇಳಿದರು. 'ಜನರು ಯಾವ ದೃಶ್ಯಗಳನ್ನ, ಯಾವ ಚಿತ್ರಗಳನ್ನ ಇಷ್ಟಪಡ್ತಾರೆ ಎಂಬುದನ್ನ ನಾನು ಚಿತ್ರಮಂದಿರದಲ್ಲಿ ಕೂತು ನೋಡಿದ್ದೇನೆ. ಇದು ನಾನು ನನ್ನ ಉದ್ಯಮಕ್ಕೆ ಸಹಾಯವಾಗಿದೆ ಎಂದು  ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!