ಗಾಯಿತ್ರಿ ಪ್ರಿಯಕರ ಅಂಜುಕುಮಾರ್ ವಿವಾಹದ ಚಿತ್ರ
ಕೊಪ್ಪಳ: ಪ್ರಸ್ಥಕ್ಕೂ ಮುನ್ನವೇ ನವ ವಿವಾಹಿತೆ ಅಪಹರಣ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದ ನವ ವಿವಾಹಿತೆ ಗಾಯತ್ರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಗೆ ದಿಢೀರ್ ಅಂತಾ ಗುರುವಾರ ಸಂಜೆ ಆಗಮಿಸಿದ್ದಾರೆ.
ವಧು ನಾಪತ್ತೆಯಾದ ವಿಚಾರ ಮಾಧ್ಯಗಳಲ್ಲಿ ವರದಿಯಾಗುತ್ತಿದ್ದರಿಂದ ಎಚ್ಚೆತ್ತ ವಧು ನಾಪತ್ತೆ ಕುರಿತು ಸ್ಪಷ್ಟನೆ ನೀಡಲು ಖುದ್ದು ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಗೆ ಆಗಮಿಸಿದ್ದಾರೆ. ಅಲ್ಲದೇ ನಮ್ಮ ಜೀವಕ್ಕೆ ಅಪಾಯವಿದ್ದು ನಮಗೆ ರಕ್ಷಣೆ ನೀಡಿ ಎಂದು ಮನವಿ ಸಲ್ಲಿಸಿದ್ದಾರೆ.
ನಾಪತ್ತೆಯಾಗಿದ್ದ ವಧು ಗಾಯತ್ರಿ ಮಾಧ್ಯಮಗಳ ಜೊತೆ ಮಾತನಾಡಿ ನನ್ನನ್ನು ಯಾರೂ ಅಪಹರಣ ಮಾಡಿಲ್ಲ. ನಾನು ಸ್ವ-ಇಚ್ಛೆಯಿಂದಲೇ ಅವರೊಂದಿಗೆ ಹೋಗಿದ್ದೇನೆ. ನಾನು ಅಂಜುಕುಮಾರ್ ಪ್ರೀತಿಸುತ್ತಿದ್ದೇವು. ನಾವು ಈಗಾಗಲೇ ಮದುವೆಯಾಗಿದ್ದೇವೆ. ನಮ್ಮ ಮನೆಯಲ್ಲಿ ನಮ್ಮ ಪ್ರೀತಿಗೆ ವಿರೋಧವಿತ್ತು. ವಿಷಯ ಗೊತ್ತಿದ್ದರೂ ಸಹ ನಮ್ಮ ಕುಟುಂಬದವರು ನಮ್ಮ ಮಾವನ ಜೊತೆ ಬಲವಂತವಾಗಿ ಮದುವೆ ಮಾಡಿಕೊಟ್ಟಿದ್ದರು. ಹೀಗಾಗಿ ನಾನು ಒಪ್ಪಿಯೇ ಅಂಜನ್ ಜೊತೆ ಹೋಗಿದ್ದೇನೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಕಳೆದ 15 ದಿನದ ಹಿಂದಷ್ಟೇ ಮಲ್ಲನಗೌಡ ಮತ್ತು ಗಾಯತ್ರಿ ಮದುವೆ ನಡೆದಿತ್ತು. ವಧುವಿನ ತವರು ಮನೆಯಲ್ಲೇ ಫಸ್ಟ್ ನೈಟ್ ನಿಗದಿಯಾಗಿತ್ತು. ಆದರೆ ಆ ಮೊದಲ ರಾತ್ರಿಯಂದೇ ಸೋಮನಾಳ ಗ್ರಾಮದ ಅಂಜುಕುಮಾರ್ ರೆಡ್ಡಿ ಮತ್ತು 6 ಜನ ಸಹಚರರು ಸೇರಿ ಗಾಯಿತ್ರಿಯನ್ನು ಕಿಡ್ನಾಪ್ ಮಾಡಿದ್ದರು.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos