ಮೆಟ್ರೋ ರೈಲು 
ರಾಜ್ಯ

ಪೆಟ್ರೋಲಿಯಂ ಪೈಪ್ ಲೈನ್ ಅಡ್ಡ: ವಿಮಾನ ನಿಲ್ದಾಣಕ್ಕೆ ಸಾಗುವ ಮೆಟ್ರೋ ಮಾರ್ಗದಲ್ಲಿ ಬದಲಾವಣೆ?

ನಾಗವಾರದಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದವರೆಗೂ ಪ್ರಸ್ತಾವಿತ ಮೆಟ್ರೋ ಮಾರ್ಗ ಹೆಬ್ಬಾಳ ಮೂಲಕ ಸಂಚರಿಸುವಂತೆ ಮರು ಬದಲಾವಣೆ ಆಗುವ ಸಾಧ್ಯತೆ ಇದೆ.

ಬೆಂಗಳೂರು: ನಾಗವಾರದಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದವರೆಗೂ ಪ್ರಸ್ತಾವಿತ ಮೆಟ್ರೋ ಮಾರ್ಗ ಹೆಬ್ಬಾಳ ಮೂಲಕ  ಸಂಚರಿಸುವಂತೆ ಮರು ಬದಲಾವಣೆ ಆಗುವ ಸಾಧ್ಯತೆ ಇದೆ.

ಈ ಹಿಂದೆ ಪ್ರಸ್ತಾವಿತ ಮಾರ್ಗದಲ್ಲಿ ಬೆಂಗಳೂರು- ಮಂಗಳೂರು  ಪೆಟ್ರೋಲಿಯಂ ಪೈಪ್ ಲೈನ್ ಸಾಗಿರುವುದರಿಂದ ಈ ಮಾರ್ಗದಲ್ಲಿ ಯಾವುದೇ  ಕಾಮಗಾರಿ ಚಟುವಟಿಕೆ ಕೈಗೊಳ್ಳದಂತೆ  ಆದೇಶಿಸಲಾಗಿದ್ದು, ಮಾರ್ಗ ಬದಲಾವಣೆಯನ್ನು  ಬಿಎಂಆರ್ ಸಿಎಲ್  ಪರಿಗಣಿಸಿದೆ ಎಂದು ಉನ್ನತ  ಮೂಲಗಳಿಂದ ತಿಳಿದುಬಂದಿದೆ.

ನಾಗವಾರದಿಂದ ಆರಂಭಗೊಳ್ಳಬೇಕಾಗಿದ್ದ  ಎರಡನೇ ಬಿ ಹಂತದ ಮೆಟ್ರೋ ರೈಲು  ಆರ್ ಕೆ ಹೆಗಡೆ ನಗರ ಮಾರ್ಗವಾಗಿ ಥಣಿಸಂದ್ರ ಮುಖ್ಯರಸ್ತೆ ಸಾಗಿ ನಂತರ ಜಕ್ಕೂರು ಪ್ಲೇಯಿಂಗ್ ಶಾಲೆ,  ಬಳ್ಳಾರಿ ಮುಖ್ಯರಸ್ತೆ ಮೂಲಕ ವಿಮಾನ ನಿಲ್ದಾಣ ಸಂಪರ್ಕಿಸುತಿತ್ತು. 5, 950 ಕೋಟಿ ರೂ. ಮೊತ್ತದ ಈ ಯೋಜನೆಗಾಗಿ ಕಳೆದ ವರ್ಷದ  ಡಿಸೆಂಬರ್ 11 ರಂದು  ಸಚಿವ ಸಂಪುಟದಲ್ಲಿ ಅನುಮೋದನೆ ಕೂಡಾ ದೂರಕಿತ್ತು.

ಆದರೆ, ಹೊಸದಾಗಿ ಪ್ರಸ್ತಾಪಿಸಿರುವಂತೆ ನಾಗವಾರದಿಂದ ಹೊರ ವರ್ತುಲ ರಸ್ತೆ ಮಾರ್ಗವಾಗಿ ಹೆಬ್ಬಾಳಕ್ಕೆ ಸಾಗಿ ನಂತರ ಬಳ್ಳಾರಿ ಮುಖ್ಯರಸ್ತೆ ಬಲಕ್ಕೆ ಜಕ್ಕೂರು ಫ್ಲೇಯಿಂಗ್ ಶಾಲೆ ಮೂಲಕ ವಿಮಾನ ನಿಲ್ದಾಣ ಸಂಪರ್ಕಿಸಬಹುದಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT