ಸಂಗ್ರಹ ಚಿತ್ರ 
ರಾಜ್ಯ

ಪಣಂಬೂರು ಬೀಚ್ ನಲ್ಲಿ ವಿಧಿಯಾಟ! ಆತ್ಮಹತ್ಯೆಗೆ ಯತ್ನಿಸಿದ ವೃದ್ದ ಪಾರು, ಇನ್ನೊಬ್ಬ ಯುವಕ ನೀರಲ್ಲಿ ಮುಳುಗಡೆ

ಮಂಗಳೂರು ಪಣಂಬೂರು ಬೀಚ್ ಇಂದು (ಶನಿವಾರ) ಎರಡು ದುರದೃಷ್ಟಕರ ಘಟನೆಗಳಿಗೆ ಸಾಕ್ಷಿಯಾಗಿದೆ. ಓರ್ವ ವೃದ್ದ ಸಮುದ್ರಕ್ಕೆ ಹಾರಿ ಪ್ರಾಣ ಬಿಡುವ ಯತ್ನದಲ್ಲಿದ್ದವನನ್ನು....

ಮಂಗಳೂರು: ಮಂಗಳೂರು ಪಣಂಬೂರು ಬೀಚ್ ಇಂದು (ಶನಿವಾರ) ಎರಡು ದುರದೃಷ್ಟಕರ ಘಟನೆಗಳಿಗೆ ಸಾಕ್ಷಿಯಾಗಿದೆ. ಓರ್ವ ವೃದ್ದ ಸಮುದ್ರಕ್ಕೆ ಹಾರಿ ಪ್ರಾಣ ಬಿಡುವ ಯತ್ನದಲ್ಲಿದ್ದವನನ್ನು ಅಪಾಯದಿಂದ ಪಾರುಮಾಡಲಾಗಿದೆ, ಇದೇ ಸಮಯದಲ್ಲಿ ಓರ್ವ ಯುವಕ ಸಮುದ್ರದಲ್ಲಿ ಈಜಲು ಹೋಗಿ ನೀರುಪಾಲಾಗಿದ್ದಾನೆಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಸುಮಾರು ಮಧ್ಯಾಹ್ನ 1:15 ರಿಂದ  1:30ರ ನಡುವೆ ನಡೆದ ಘಟನೆಯಲ್ಲಿ ಬೆಳ್ತಂಗಡಿಯ ಕೇಶವ ಗೆರುಕಟ್ಟೆಯವರ ಮಗ ಸುಂದರ್ ರಾಜ್ (18 ) ಸ್ನೇಹಿತರ ಜತೆ ಸಮುದ್ರ ಕಿನಾರೆಯಲ್ಲಿದ್ದರು.ಸುಮಾರು 12 ಹುಡುಗರು ನೀರಿನಲ್ಲಿ ಇಳಿಯಲು ಮುಂದಾದಾಗ ಅವರನ್ನು ಹಿಂತಿರುಗುವಂತೆ ಕೇಳಲಾಗಿತ್ತು. ಸಮುದ್ರದಲ್ಲಿ ಅಲೆಗಳ ಅಬ್ಬರ ಅತಿಯಾಗಿರುವ ಕಾರಣ ಅಪಾಯವಾಗಲಿದೆ ಎಂದು ಎಚ್ಚರಿಸಲಾಗಿತ್ತು.ಆದರೆ ಯಾರೊಬ್ಬರು ಪ್ರತಿಕ್ರಿಯೆ ನೀಡುವ ಮುನ್ನವೇ ಸುಂದರ್ ರಾಜ್ ಸಮುದ್ರಕ್ಕೆ ಜಿಗಿದಿದ್ದನು. ಸದ್ಯ ನಾಪತ್ತೆಯಾಗಿರುವ ಈತನ ದೇಹಕ್ಕಾಗಿ ಇನ್ನೂ ಹುಡುಕಾಟ ನಡೆಯುತ್ತಿದೆ ಎಂದು ಪಣಂಬೂರು ಇನ್ಸ್ಪೆಕ್ಟರ್ ರಫಿಕ್ ಕೆ ಎಮ್ ಹೇಳಿದ್ದಾರೆ.
ಈ ಘಟನೆ ನಡೆಯುವ ಕೆಲವೇ ಸಮಯಕ್ಕೆ ಮುನ್ನ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟಿಯವರಾದ ಮಲ್ಲದೇವರು ಅವರ ಪುತ್ರ ಮಹದೇವಪ್ಪ (69) ಮುಖ್ಯ ಸಮುದ್ರ ತೀರದಿಂದ  ದಕ್ಷಿಣ ಭಾಗದಲ್ಲಿ ಸಮುದ್ರಕ್ಕಿಳಿದು ಆತ್ಮಹತ್ಯೆಗೆ ಯತ್ನಿಸಿದ್ದರು.ಈತನನ್ನು ಅಪಾಯದಿಂದ ಪಾರುಮಾಡಿ ಪೋಲೀಸರಿಗೆ ಒಪ್ಪಿಸಲಾಗಿದೆ ಎಂದು ಪಣಂಬೂರು ಬೀಚ್ ಅಭಿವೃದ್ಧಿ ಪ್ರಾಧಿಕಾರ ಸಿಇಒ  ಯತೀಶ್ ಬೈಕಂಪಾಡಿ ಹೇಳಿದ್ದಾರೆ.
ಗುಂಡ್ಲುಪೇಟೆಯಿಂದ ಅವರ ಮಗ ಆಗಮಿಸುತ್ತಿದ್ದಾರೆ ಎಂದು ಪೋಲೀಸರು ಹೇಳಿದ್ದು ಆರು ವರ್ಷದ ಹಿಂದೆ ಅವರು ಹೆಂಡತಿಯಿಂದ ದೂರಾಗಿ ಮಗನೊಡನೆ ವಾಸಿಸುತ್ತಿದ್ದರು. ಆತ್ಮಹತ್ಯೆಗೆ ಯತ್ನಿಸುವ ಮುನ್ನ ಅವರು ಧರ್ಮಸ್ಥಳ ಮತ್ತು ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ಕೊಟ್ಟಿದ್ದರು ಎಂದು ಪೋಲೀಸರು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

SCROLL FOR NEXT