ಸಂಗ್ರಹ ಚಿತ್ರ 
ರಾಜ್ಯ

ಕೆಂಪೇಗೌಡ ಪ್ರಶಸ್ತಿ: ಪ್ರಶಸ್ತಿ ಆಯ್ಕೆ ಮಾರ್ಗಸೂಚಿಗೆ ಸಮಿತಿ ರಚಿಸುವಂತೆ ಡಿಸಿಎಂಗೆ ಬಿಬಿಎಂಪಿ ಪತ್ರ

ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ಕುರಿತು ಟೀಕೆಗಳು ವ್ಯಕ್ತವಾದ ಹಿನ್ನಲೆಯಲ್ಲಿ ಎಚ್ಚೆತ್ತ ಬಿಬಿಎಂಪಿ ಅಧಿಕಾರಿಗಳು, ಪ್ರಶಸ್ತಿ ಆಯ್ಕೆ ಮಾರ್ಗಸೂಚಿಗೆ ಸಮಿತಿ ರಚಿಸುವಂತೆ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರಿಗೆ ಪತ್ರ ಬರೆದಿದೆ ಎಂದು ಭಾನುವಾರ ತಿಳಿದುಬಂದಿದೆ...

ಬೆಂಗಳೂರು: ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ಕುರಿತು ಟೀಕೆಗಳು ವ್ಯಕ್ತವಾದ ಹಿನ್ನಲೆಯಲ್ಲಿ ಎಚ್ಚೆತ್ತ ಬಿಬಿಎಂಪಿ ಅಧಿಕಾರಿಗಳು, ಪ್ರಶಸ್ತಿ ಆಯ್ಕೆ ಮಾರ್ಗಸೂಚಿಗೆ ಸಮಿತಿ ರಚಿಸುವಂತೆ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರಿಗೆ ಪತ್ರ ಬರೆದಿದೆ ಎಂದು ಭಾನುವಾರ ತಿಳಿದುಬಂದಿದೆ. 
ಪ್ರಶಸ್ತಿಗೆ ಆಯ್ಕೆ ಆದವರ ಪಟ್ಟಿ ಪ್ರಕಟವಾದ ನಂತರ ಕೂಡ ಪಾಲಿಕೆ ಸದಸ್ಯರು ಹಾಗೂ ರಾಜಕೀಯ ಮುಖಂಡರು ಬಿಬಿಎಂಪಿ ಮೇಯಲ್ ಮೇಲೆ ಒತ್ತಡ ಹೇರಿ ತಮಗೆ ಬೇಕಾದವರ ಹೆಸರುಗಳನ್ನು ಅಂತಿಮ ಕ್ಷಣದಲ್ಲಿ ಸೇರ್ಪಡೆಗೊಳಿಸುತ್ತಿದ್ದರು. ಪ್ರಶಸ್ತಿ ಸಮಾರಂಭ ನಡೆಯುತ್ತಿದ್ದಂತೆಯೇ ವೇದಿಕೆಯಲ್ಲಿಯೇ ಹೊಸ ಹೆಸರುಗಳನ್ನು ಸೇರ್ಪಡೆ ಮಾಡಲಾಗುತ್ತಿತ್ತು. 
ಪ್ರಶಸ್ತಿ ಪ್ರದಾನ ಸಮಾರಂಭ ಕೂಡ ಶಿಸ್ತಿನಿಂದ ನಡೆಯುತ್ತಿರಲಿಲ್ಲ. ಪ್ರಶಸ್ತಿ ಪುರಸ್ಕೃತರನ್ನು ಗೌರವಯುತವಾಗಿ ನಡೆಸಿಕೊಳ್ಳುವ ವ್ಯವಸ್ಥೆಯನ್ನೂ ಕೂಡ ಪಾಲಿಕೆ ಮಾಡುತ್ತಿರಲಿಲ್ಲ. ನಿಜವಾದ ಅರ್ಹತೆಯಿಂದ ಈ ಪ್ರಶಸ್ತಿಗೆ ಆಯ್ಕೆಯಾದವರಿಗೆ ಈ ಗೊಂದಲಗಳು ಮುಜುಗರವನ್ನುಂಟು ಮಾಡುತ್ತಿದ್ದವು. 
2018ನೇ ಸಾಲಿನ ಪ್ರಶಸ್ತಿಗೆ ಒಟ್ಟು 500 ಜನರನ್ನು ಆಯ್ಕೆ ಮಾಡಲಾಗಿತ್ತು. ಈ ವರ್ಷದ ಪ್ರಶಸ್ತಿ ಪ್ರದಾನ ಸಮಾರಂಭ ನಡೆದ ಬಳಿಕ ಕೆಲ ಸಾಹಿತಿಗಳು ಹಾಗೂ ರಂಗಕರ್ಮಿಗಳು ಅವ್ಯವಸ್ಥೆಗಳ ಬಗ್ಗೆ ಬಹಿರಂಗವಾಗಿಯೇ ಬೇಸರ ವ್ಯಕ್ತಪಡಿಸಿದ್ದರು. 
ಈ ಹಿನ್ನಲೆಯಲ್ಲಿ ಎಚ್ಚೆತ್ತುಕೊಂಡಿರುವ ಬಿಬಿಎಂಪಿ ನಾಯಕ ಎಂ.ಶಿವರಾಜು ಅವರು ಉಪಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದು, ಪ್ರಶಸ್ತಿಗೆ ಮಾನದಂಡಗಳನ್ನು ರೂಪಿಸುವಂತೆ ಮನವಿ ಮಾಡಿಕೊಂಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT