ಮಹಿಳೆಯಿಂದ ಬ್ಯಾಂಕ್ ಮ್ಯಾನೇಜರ್ ಥಳಿತ 
ರಾಜ್ಯ

ದಾವಣಗೆರೆ: ಸಾಲ ಮಂಜೂರಾತಿಗೆ ಮಂಚಕ್ಕೆ ಕರೆದ ಬ್ಯಾಂಕ್ ಮ್ಯಾನೇಜರ್ ಬಂಧನ!

ಸಾಲ ಮಂಜೂರು ಮಾಡಲು ಲೈಂಗಿಕ ಸಂಬಂಧ ಹೊಂದುವಂತೆ ಅರ್ಜಿದಾರ ಮಹಿಳೆಯನ್ನು ಪೀಡಿಸುತ್ತಿದ್ದ ಖಾಸಗಿ ಬ್ಯಾಂಕ್ ಮ್ಯಾನೇಜರ್ ನನ್ನು ಪೊಲೀಸರು ಬಂಧಿಸಿದ್ದಾರೆ.

ದಾವಣಗೆರೆ: ಸಾಲ ಮಂಜೂರು  ಮಾಡಲು ಲೈಂಗಿಕ ಸಂಬಂಧ ಹೊಂದುವಂತೆ ಅರ್ಜಿದಾರ ಮಹಿಳೆಯನ್ನು ಪೀಡಿಸುತ್ತಿದ್ದ ಖಾಸಗಿ ಬ್ಯಾಂಕ್ ಮ್ಯಾನೇಜರ್ ನನ್ನು ಪೊಲೀಸರು ಬಂಧಿಸಿದ್ದಾರೆ.
ಬ್ಯಾಂಕ್ ಮ್ಯಾನೇಜರ್ ನಿಂದ ಮಾನಸಿಕ ಕಿರುಕುಳ ಅನುಭವಿಸುತ್ತಿದ್ದ ಮಹಿಳೆ ಬ್ಯಾಂಕಿನಿಂದ ಆತ ಹೊರಗಡೆ ಬಂದ ನಂತರ  ಕಟ್ಟಿಗೆ ಹಾಗೂ ಮರಗಳಿಂದ ಹಿಗ್ಗಾಮುಗ್ಗಾ ಥಳಿಸಿದ ವಿಡಿಯೋ  ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.
ಸಾಲ ಮಂಜೂರು ಮಾಡಲು ತನ್ನೊಂದಿಗೆ ಮಲಗುವಂತೆ ಬ್ಯಾಂಕ್ ಮ್ಯಾನೇಜರ್ ಕರೆಯುತ್ತಿದ್ದ ಎಂದು ಆ ಮಹಿಳೆ ವಿಡಿಯೋದಲ್ಲಿ ಆರೋಪ ಮಾಡಿದ್ದರು. ದಾಳಿ ಮಾಡಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬ್ಯಾಂಕ್ ಮ್ಯಾನೇಜರ್ ಕೂಡಾ ಬೇಡಿಕೊಳ್ಳುತ್ತಿದದ್ದು ವಿಡಿಯೋದಲ್ಲಿತ್ತು.
ನಂತರ ಆ ಬ್ಯಾಂಕ್ ಮ್ಯಾನೇಜರ್ ನನ್ನು  ಮಹಿಳಾ ಪೊಲೀಸ್ ಠಾಣೆಗೆ  ಒಪ್ಪಿಸಿ, ಆತನ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ನಂತರ ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ಜೈಲಿಗೆ ಕಳುಹಿಸಲಾಗಿದೆ.
ಡಿಎಚ್ ಎಫ್ ಎಲ್ ಮಾಧ್ಯಮ ಹೇಳಿಕೆ
ಅಧಿಕಾರಿ ಸೇವೆಯಿಂದ ವಜಾ: ದಾವಣಗೆರೆಯಲ್ಲಿ ನಡೆದಿರುವುದು ದುರದೃಷ್ಠ ಘಟನೆ. ಅನುಚಿತವಾಗಿ ವರ್ತಿಸಿರುವ ಅಧಿಕಾರಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಕೆಲಸದಿಂದ ವಜಾ ಮಾಡಲಾಗಿದೆ. ಡಿಎಚ್ ಎಫ್ ಎಲ್ ಮಹಿಳೆಯರ ಸುರಕ್ಷತೆಗೆ ಬದ್ಧವಾಗಿದ್ದು ಮಹಿಳಾ ಸುರಕ್ಷತಾ ವಾತಾವರಣವನ್ನು ಉತ್ತೇಜಿಸುತ್ತದೆ. ಈ ಕುರಿತು ತನಿಖೆ ನಡೆಸುವ ಸಂಸ್ಥೆಗೆ ಡಿಎಚ್ ಎಫ್ ಎಲ್ ಎಲ್ಲಾ ರೀತಿಯ ಸಹಕಾರ ನೀಡಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT