ಸಂಗ್ರಹ ಚಿತ್ರ 
ರಾಜ್ಯ

ದಾವಣಗೆರೆ: ಅತ್ಯಾಚಾರ ಆರೋಪ, ಮಾನಕ್ಕೆ ಹೆದರಿ ಕಬಡ್ಡಿ ಕೋಚ್ ಆತ್ಮಹತ್ಯೆಗೆ ಶರಣು!

ಹದಿಮೂರು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಎದುರಿಸುತ್ತಿರುವ ಕಬಡ್ಡಿ ಕೋಚ್ ರುದ್ರಪ್ಪ ಎಂಬುವರು ದಾವಣಗೆರೆಯ ಹರಿಹರ ಪಟ್ಟಣದಲ್ಲಿ ಡೆತ್ ನೋಟ್ ಬರೆದಿಟ್ಟು...

ದಾವಣಗೆರೆ: 13 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಎದುರಿಸುತ್ತಿರುವ ಕಬಡ್ಡಿ ಕೋಚ್ ರುದ್ರಪ್ಪ ಎಂಬುವರು ದಾವಣಗೆರೆಯ ಹರಿಹರ ಪಟ್ಟಣದಲ್ಲಿ ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದುಕೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. 
ಉತ್ತರ ಕರ್ನಾಟಕ ಮೂಲದ ಕೋಚ್ ರುದ್ರಪ್ಪ ಹೊಸಮನಿ ಅವರು ಬೆಂಗಳೂರಿನಲ್ಲಿ ಕಬಡ್ಡಿ ಕೋಚ್ ಆಗಿ ಕಾರ್ಯ ನಿರ್ವಹನಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. 
13 ವರ್ಷದ ಬಾಲಕಿ ಮೇಲೆ ರುದ್ರಪ್ಪ ಹೊಸಮನಿ ಅತ್ಯಾಚಾರವೆಸಗಿದ್ದಾರೆಂದು ದೂರನ್ನು ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿತ್ತು. ಈ ಆರೋಪ ಹಿನ್ನಲೆ ಅವರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಪ್ರಕರಣ ವಿಚಾರಣೆ ಹಂತದಲ್ಲಿರುವಾಗಲೇ ರುದ್ರಪ್ಪ ನೇಣಿಗೆ ಶರಣಾಗಿದ್ದಾರೆ. 
ರುದ್ರಪ್ಪ ಅವರು ಡೆಟ್ ನೋಟ್ ನಲ್ಲಿ ಪತ್ನಿ ಮತ್ತು ಮಗನಿಗೆ ತನ್ನನ್ನು ಕ್ಷಮಿಸಿ ಎಂದು ಬರೆದಿದ್ದಾರೆ. ನಿಮಗೆ ಬಹಳ ತೊಂದರೆ ಮಾಡಿದೆ. ಮೊಬೈಲ್ ಇಲ್ಲ. ನನ್ನ ಪರ್ಸ್ ನಲ್ಲಿ ನಿಮ್ಮಿಬ್ಬರ ಫೋಟೋನೂ ಇಲ್ಲ. ಬಹಳ ಬಹಳ ನೋಡಬೇಕೆನಿಸಿತ್ತು. ನನ್ನ ಅಮ್ಮ, ಬಂಧುಗಳಿಗೆ ಹಾಗೂ ನನ್ನ ಸ್ನೇಹಿತರಿಗೆ ನನ್ನ ಅಮೂಲ್ಯ ಧನ್ಯವಾದಗಳು. ದಯವಿಟ್ಟು ನಿಮಗೆ ತೊಂದರೆಯಾಗಿದೆ. ನನ್ನನ್ನು ಕ್ಷಮಿಸಿ, ನನ್ನ ದೇಹವನ್ನು ಯಾವುದಾದರೂ ಆಸ್ಪತ್ರೆಗೆ ದಾನ ಮಾಡಿ ಎಂದು ಬರೆದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT