ಸಂಗ್ರಹ ಚಿತ್ರ 
ರಾಜ್ಯ

ಹೆಚ್1ಎನ್1 ಮಹಾಮಾರಿ: ರಾಜ್ಯದಲ್ಲಿ 8 ಮಂದಿ ಬಲಿ

ಹೆಚ್1ಎನ್1 ಮಹಾಮಾರಿಗೆ ರಾಜ್ಯದಲ್ಲಿ ಈ ವರೆಗೂ ಒಟ್ಟು 8 ಮಂದಿ ಬಲಿಯಾಗಿದ್ದಾರೆಂದು ಬುಧವಾರ ತಿಳಿದುಬಂದಿದೆ...

ಬೆಂಗಳೂರು: ಹೆಚ್1ಎನ್1 ಮಹಾಮಾರಿಗೆ ರಾಜ್ಯದಲ್ಲಿ ಈ ವರೆಗೂ ಒಟ್ಟು 8 ಮಂದಿ ಬಲಿಯಾಗಿದ್ದಾರೆಂದು ಬುಧವಾರ ತಿಳಿದುಬಂದಿದೆ. 
ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ ಬಳ್ಳಾರಿಯಲ್ಲಿ ಹೆಚ್1ಎನ್1 ಜ್ವರಕ್ಕೆ ಇಬ್ಬರು ಬಲಿಯಾಗಿದ್ದಾರೆ. 
ಹೆಚ್1ಎನ್1 ನಿಂದಾಗಿ ಬಲಿಯಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಮುಂಜಾಗ್ರತೆ ವಹಿಸಿರುವ ಆರೋಗ್ಯ ಇಲಾಖೆಯ ಕಾರ್ಯದರ್ಶಿ ಜಾವೈದ್ ಅಖ್ತರ್ ಅವರು, ಗ್ರಾಮಾಂತರ ಮಟ್ಟದ ಮೇಲ್ವಿಚಾರಣಾ ಸಮಿತಿ ರಚಿಸುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. 
ಮಂಗಳವಾರ ಸಂಜೆಯವರೆಗೂ ಹೆಚ್1ಎನ್1ಗೆ 542 ಮಂದಿ ಸಾವನ್ನಪ್ಪಿರುವುದಾಗಿ ಬಿಬಿಎಂಪಿ ಮಾಹಿತಿ ನೀಡಿದೆ. ಇದರಲ್ಲಿ 54 ಮಂದಿ ಬೆಂಗಳೂರು ಗ್ರಾಮಂತರ ಪ್ರದೇಶಗಳಿಗೆ ಸೇರಿದವರಾಗಿದ್ದಾರೆಂದು ತಿಳಿಸಿದೆ. 
ಇದಲ್ಲದೆ ರಾಜ್ಯ ಆರೋಗ್ಯ ಇಲಾಖೆ ಮಾರ್ಗಸೂಚಿಗಳನ್ನು ನೀಡಿದ್ದು, ರೋಗಿಗಳು ಹಾಗೂ ಸಾರ್ವಜನಿಕರು ಮಾಸ್ಕ್ ಗಳು ಹಾಗೂ ಇತರೆ ಆರೋಗ್ಯ ಸುರಕ್ಷತಾ ಕಾರ್ಯಗಳನ್ನು ಸೂಕ್ತ ರೀತಿಯಲ್ಲಿ ಬಳಕೆ ಮಾಡಿದರೆ ಸೋಂಕುಗಳು ಹರಡುವುದಿಲ್ಲ ಎಂದು ತಿಳಿಸಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT