ಸಂಗ್ರಹ ಚಿತ್ರ 
ರಾಜ್ಯ

ಬದುಕೋದಕ್ಕೆ ಧರ್ಮ ಯಾವುದಯ್ಯ: ತನ್ನ ಬಸ್ಸುಗಳಿಗೆ ಆಯುಧ ಪೂಜೆ ಮಾಡಿದ ಮುಸ್ಲಿಂ ಯುವಕ!

ಆಯುಧ ಪೂಜೆ ಹಿಂದೂಗಳಿಗೆ ತುಂಬಾ ಶ್ರೇಷ್ಠವಾದ ಹಬ್ಬ. ಆದರೆ ಇಲ್ಲೊಬ್ಬ ಮುಸ್ಲಿಂ ಯುವಕ ಹಿಂದೂಗಳ ಸಂಪ್ರದಾಯದಂತೆ ತನ್ನ ಬಸ್ಸುಗಳಿಗೆ ಪೂಜೆ ಮಾಡಿ ಸಿಹಿ ಹಂಚಿ ಶುಭ ಹಾರೈಸಿದ್ದಾನೆ...

ಚಿಕ್ಕಮಗಳೂರು: ಆಯುಧ ಪೂಜೆ ಹಿಂದೂಗಳಿಗೆ ತುಂಬಾ ಶ್ರೇಷ್ಠವಾದ ಹಬ್ಬ. ಆದರೆ ಇಲ್ಲೊಬ್ಬ ಮುಸ್ಲಿಂ ಯುವಕ ಹಿಂದೂಗಳ ಸಂಪ್ರದಾಯದಂತೆ ತನ್ನ ಬಸ್ಸುಗಳಿಗೆ ಪೂಜೆ ಮಾಡಿ ಸಿಹಿ ಹಂಚಿ ಶುಭ ಹಾರೈಸಿದ್ದಾನೆ. 
ಆಯುಧ ಪೂಜೆ ದಿನ ಪ್ರತಿಯೊಬ್ಬರು ತಮ್ಮ ವಾಹನ ಮತ್ತು ಆಯುಧಗಳಿಗೆ ಪೂಜೆ ಮಾಡಿ ನಮಿಸುತ್ತಾರೆ. ಇಂದು ಮುಂಜಾನೆಯಿಂದಲೇ ಪ್ರತಿಯೊಬ್ಬರು ತಮ್ಮ ವಾಹನ ಮತ್ತು ಪ್ರತಿನಿತ್ಯ ಮನೆಯಲ್ಲಿ ಬಳಕೆ ಮಾಡುವಂತಹ ವಸ್ತುಗಳನ್ನು ತೊಳೆದು ವಿಭೂತಿ, ಕುಂಕುಮ ಹಚ್ಚಿ, ಹೂವಿನಿಂದ ಸಿಂಗಾರ ಮಾಡಿ ಪೂಜೆ ಸಲ್ಲಿಸಿ ನಂತರ ಮಂಗಳಾರತಿ ಮಾಡಿ ಬೂದುಗುಂಬಳ ಕಾಯಿ ಒಡೆದು ಆಯುಧ ಪೂಜೆ ಮಾಡುತ್ತಿದ್ದಾರೆ. 
ಚಿಕ್ಕಮಗಳೂರಿನ ಎಸ್ಎಂಎಸ್ ಬಸ್ ಮಾಲೀಕನಾದ ಸಿರಾಜ್ ಹಿಂದೂಗಳು ನಾಚುವಂತೆ ಆಯುಧ ಪೂಜೆ ಹಬ್ಬವನ್ನು ಆಚರಿಸಿದ್ದಾರೆ. ತಮ್ಮ ಆರು ಬಸ್ಸುಗಳನ್ನು ಶುಚಿ ಮಾಡಿ ಅವುಗಳಿಗೆ ಚೆಂಡೂ ಹೂ, ಬಲೂನ್, ಬಾಳೆ ದಿಂಡು, ಮಾವಿನ ತೋರಣ ಕಟ್ಟಿ ಸಿಂಗಾರ ಮಾಡಿದ್ದಾರೆ. 
ಪ್ರತಿಯೊಂದು ಬಸ್ಸಿಗೂ ಕುಂಕುಮ, ವಿಭೂತಿ ಹಚ್ಚಿ ಆರತಿ ಬೆಳಗಿದ್ದಾರೆ. ಆರು ಬಸ್ಸುಗಳನ್ನು ಹೂವಿನಿಂದ ಅಲಂಕಾರ ಮಾಡಿ ಪ್ರಯಾಣಿಕರಿಗೆ, ಸಾರ್ವಜನಿಕರಿಗೆ ಸಹಿ ಹಂಚಿ ಆಯುಧ ಪೂಜೆ ಶುಭಾಶಯ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT