ಸಂಗ್ರಹ ಚಿತ್ರ 
ರಾಜ್ಯ

ಬದುಕೋದಕ್ಕೆ ಧರ್ಮ ಯಾವುದಯ್ಯ: ತನ್ನ ಬಸ್ಸುಗಳಿಗೆ ಆಯುಧ ಪೂಜೆ ಮಾಡಿದ ಮುಸ್ಲಿಂ ಯುವಕ!

ಆಯುಧ ಪೂಜೆ ಹಿಂದೂಗಳಿಗೆ ತುಂಬಾ ಶ್ರೇಷ್ಠವಾದ ಹಬ್ಬ. ಆದರೆ ಇಲ್ಲೊಬ್ಬ ಮುಸ್ಲಿಂ ಯುವಕ ಹಿಂದೂಗಳ ಸಂಪ್ರದಾಯದಂತೆ ತನ್ನ ಬಸ್ಸುಗಳಿಗೆ ಪೂಜೆ ಮಾಡಿ ಸಿಹಿ ಹಂಚಿ ಶುಭ ಹಾರೈಸಿದ್ದಾನೆ...

ಚಿಕ್ಕಮಗಳೂರು: ಆಯುಧ ಪೂಜೆ ಹಿಂದೂಗಳಿಗೆ ತುಂಬಾ ಶ್ರೇಷ್ಠವಾದ ಹಬ್ಬ. ಆದರೆ ಇಲ್ಲೊಬ್ಬ ಮುಸ್ಲಿಂ ಯುವಕ ಹಿಂದೂಗಳ ಸಂಪ್ರದಾಯದಂತೆ ತನ್ನ ಬಸ್ಸುಗಳಿಗೆ ಪೂಜೆ ಮಾಡಿ ಸಿಹಿ ಹಂಚಿ ಶುಭ ಹಾರೈಸಿದ್ದಾನೆ. 
ಆಯುಧ ಪೂಜೆ ದಿನ ಪ್ರತಿಯೊಬ್ಬರು ತಮ್ಮ ವಾಹನ ಮತ್ತು ಆಯುಧಗಳಿಗೆ ಪೂಜೆ ಮಾಡಿ ನಮಿಸುತ್ತಾರೆ. ಇಂದು ಮುಂಜಾನೆಯಿಂದಲೇ ಪ್ರತಿಯೊಬ್ಬರು ತಮ್ಮ ವಾಹನ ಮತ್ತು ಪ್ರತಿನಿತ್ಯ ಮನೆಯಲ್ಲಿ ಬಳಕೆ ಮಾಡುವಂತಹ ವಸ್ತುಗಳನ್ನು ತೊಳೆದು ವಿಭೂತಿ, ಕುಂಕುಮ ಹಚ್ಚಿ, ಹೂವಿನಿಂದ ಸಿಂಗಾರ ಮಾಡಿ ಪೂಜೆ ಸಲ್ಲಿಸಿ ನಂತರ ಮಂಗಳಾರತಿ ಮಾಡಿ ಬೂದುಗುಂಬಳ ಕಾಯಿ ಒಡೆದು ಆಯುಧ ಪೂಜೆ ಮಾಡುತ್ತಿದ್ದಾರೆ. 
ಚಿಕ್ಕಮಗಳೂರಿನ ಎಸ್ಎಂಎಸ್ ಬಸ್ ಮಾಲೀಕನಾದ ಸಿರಾಜ್ ಹಿಂದೂಗಳು ನಾಚುವಂತೆ ಆಯುಧ ಪೂಜೆ ಹಬ್ಬವನ್ನು ಆಚರಿಸಿದ್ದಾರೆ. ತಮ್ಮ ಆರು ಬಸ್ಸುಗಳನ್ನು ಶುಚಿ ಮಾಡಿ ಅವುಗಳಿಗೆ ಚೆಂಡೂ ಹೂ, ಬಲೂನ್, ಬಾಳೆ ದಿಂಡು, ಮಾವಿನ ತೋರಣ ಕಟ್ಟಿ ಸಿಂಗಾರ ಮಾಡಿದ್ದಾರೆ. 
ಪ್ರತಿಯೊಂದು ಬಸ್ಸಿಗೂ ಕುಂಕುಮ, ವಿಭೂತಿ ಹಚ್ಚಿ ಆರತಿ ಬೆಳಗಿದ್ದಾರೆ. ಆರು ಬಸ್ಸುಗಳನ್ನು ಹೂವಿನಿಂದ ಅಲಂಕಾರ ಮಾಡಿ ಪ್ರಯಾಣಿಕರಿಗೆ, ಸಾರ್ವಜನಿಕರಿಗೆ ಸಹಿ ಹಂಚಿ ಆಯುಧ ಪೂಜೆ ಶುಭಾಶಯ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪದೇ ಪದೇ ಇರಾನ್ ದಾಳಿ: ಅಬುದಾಬಿಯಲ್ಲಿ ಕ್ಷಿಪಣಿ ಅವಶೇಷಗಳು ಬಿದ್ದು, ಭಾರತೀಯ ಪ್ರಜೆ ಸೇರಿದಂತೆ ಇಬ್ಬರು ಸಾವು!

IPL 2026: ಸಂಪೂರ್ಣ ವೇಳಾಪಟ್ಟಿ ಪ್ರಕಟಿಸಿದ BCCI! ಫೈನಲ್ ಪಂದ್ಯ ಎಲ್ಲಿ ಗೊತ್ತಾ?

1ನೇ ತರಗತಿ ಪ್ರವೇಶಕ್ಕೆ 6 ವರ್ಷ ಕಡ್ಡಾಯವಲ್ಲ: ವಯೋಮಿತಿಯಲ್ಲಿ ಸಡಿಲಿಕೆ, ಪೋಷಕರು ನಿರಾಳ!

IPL 2026: ಬೆಂಗಳೂರಿನಲ್ಲಿ ನಡೆಯುವ ಪಂದ್ಯಕ್ಕೆ ಶಾಸಕರಿಗೆ 4 ವಿಐಪಿ ಟಿಕೆಟ್ ಖಾತ್ರಿಗೆ ಸ್ಪೀಕರ್ ಯುಟಿ ಖಾದರ್ ನಿರ್ದೇಶನ!

Airbnb ಮೂಲಕ ಪೆಂಟ್‌ಹೌಸ್ ಬಾಡಿಗೆ ವಿವಾದ: ಜನರ ಮೇಲೆ ಕಾರು ಹತ್ತಿಸಿದ ತಂದೆ-ಮಗ; ಮಹಿಳಾ ಟೆಕ್ಕಿ ಸಾವು, ಭೀಕರ ದೃಶ್ಯ!

SCROLL FOR NEXT