ಡಿ.ಕೆ ಶಿವಕುಮಾರ್ 
ರಾಜ್ಯ

ಪ್ರತ್ಯೇಕ ಲಿಂಗಾಯತ ಧರ್ಮದ ವಿಚಾರವಾಗಿ ನಮ್ಮಿಂದ ತಪ್ಪಾಗಿದೆ, ಕ್ಷಮಿಸಿ: ಡಿ.ಕೆ ಶಿವಕುಮಾರ್

ಪ್ರತ್ಯೇಕ ಲಿಂಗಾಯತ ವೀರಶೈವ ಧರ್ಮ ರಚನೆ ಕುರಿತು ಹೋರಾಡಿ ನಾವು ತಪ್ಪು ಮಾಡಿದ್ದೇವೆ, ದಯಮಾಡಿ ಕ್ಷಮಿಸಿ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ...

ಗದಗ: ಪ್ರತ್ಯೇಕ ಲಿಂಗಾಯತ ವೀರಶೈವ ಧರ್ಮ ರಚನೆ ಕುರಿತು ಹೋರಾಡಿ ನಾವು ತಪ್ಪು ಮಾಡಿದ್ದೇವೆ, ದಯಮಾಡಿ ಕ್ಷಮಿಸಿ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ರಾಜ್ಯದ ಜನತೆ ಬಳಿ ಕ್ಷಮೆಯಾಚಿಸಿದ್ದಾರೆ.
ಗದಗದ  ಲಕ್ಷ್ಮೇಶ್ವರದಲ್ಲಿ ರಂಭಾಪುರಿ ಶ್ರೀಗಳ ದಸರಾ ಧರ್ಮ ಸಮ್ಮೇಳನದಲ್ಲಿ    ಮಾತನಾಡಿದ ಅವರು, 2018ರ ರಾಜ್ಯ ವಿಧಾನ ಸಭೆಗೂ ಮುನ್ನ ಕೇಳಿ ಬಂದಿದ್ದ ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಸಂವಿಧಾನಿಕ ಮಾನ್ಯತೆ ನೀಡಲು ಈ ಹಿಂದಿನ ಕಾಂಗ್ರೆಸ್​ಸರ್ಕಾರ ಮುಂದಾಗಿತ್ತು. ಆದರೆ ಸರ್ಕಾರ, ರಾಜಕಾರಣಿಗಳು ಧರ್ಮದ ವಿಚಾರಕ್ಕೆ ಕೈ ಹಾಕಬಾರದು ಎಂಬುದು ನಂತರ ನಮಗೆ ತಿಳಿಯಿತು. ಈ ವಿಚಾರದಲ್ಲಿ ನಾವು ಎಡವಿದೆವು. ನಮ್ಮ ಸರ್ಕಾರದಿಂದ ದೊಡ್ಡ ತಪ್ಪಾಯಿತು ಎಂದು ಕ್ಷಮಾಪಣೆ ಕೇಳಿದ್ದಾರೆ. 
ಇನ್ನೂ ಸಚಿವ ಡಿ.ಕೆ ಶಿವಕುಮಾರ್ ಪ್ರತ್ಯೇಕ ಲಿಂಗಾಯತ ಧರ್ಮದ ಬಗ್ಗೆ ಕ್ಷಮೆ ಯಾಚಿಸಿದ ಸಂಬಂಧ ಪ್ರತಿಕ್ರಿಯಿಸಿರುವ ಸಿಎಂ ಕುಮಾರ ಸ್ವಾಮಿ, ನಾನು ಲಿಂಗಾಯತ ಪ್ರತ್ಯೇಕ ಧರ್ಮದ ಬಗ್ಗೆ ಮಾತಾಡಿಲ್ಲ. ಹಿಂದಿನ ಸರ್ಕಾರದಲ್ಲಿ ಯಾವುದಕ್ಕೆ ಕಿತ್ತಾಡಿಕೊಂಡಿದ್ದರು ಎಂಬುದು ಗೊತ್ತಿಲ್ಲ. ಧರ್ಮ ವಿಚಾರದಲ್ಲಿ ಧರ್ಮಗುರುಗಳ ಜತೆ ಮಾತಾಡಿ ಬಗೆಹರಿಸಿಕೊಳ್ಳಬೇಕು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT