ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ಸ್ನೇಹಿತೆಯನ್ನು ಕೆಣಕಿದ್ದಕ್ಕೆ ವಿರೋಧ, ಬಿಯರ್ ಬಾಟಲಿಯಿಂದ ಕತ್ತು ಸೀಳಿ ಯುವಕನ ಬರ್ಬರ ಹತ್ಯೆ!

ಸ್ನೇಹಿತೆಯನ್ನು ಚುಡಾಯಿಸಿದ್ದಕ್ಕೆ ವಿರೋಧಿಸಿದ ಯುವಕನೊಬ್ಬನನ್ನು ಬಿಯರ್ ಬಾಟಲಿ ಬಳಸಿ ಕತ್ತು ಸೀಳಿ ಬರ್ಬರ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರು: ಸ್ನೇಹಿತೆಯನ್ನು ಚುಡಾಯಿಸಿದ್ದಕ್ಕೆ ವಿರೋಧಿಸಿದ ಯುವಕನೊಬ್ಬನನ್ನು ಬಿಯರ್ ಬಾಟಲಿ ಬಳಸಿ ಕತ್ತು ಸೀಳಿ ಬರ್ಬರ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರು ಮತ್ತಿಕೆರೆ ಸಮೀಪದ ಎಲ್ಎನ್ ಕಾಲೋನಿಯಲ್ಲಿ  ನಡೆದ ಘಟನೆಯಲ್ಲಿ ಉತ್ತರಾಖಂಡ್ ಮೂಲದ ಜಗದೀಪ್ ಸಿಂಗ್ (21)  ಸಾವನ್ನಪ್ಪಿದ ದುರ್ದೈವಿ.
ಘಟನೆ ವಿವರ
ಮತ್ತಿಕೆರೆ ಹೋಟೆಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ಜಗದೀಪ್ ಸಿಂಗ್ ಹಾಗೂ ಸುಹಾನ್ ಗುರುವಾರ ರಾತ್ರಿ ಇಬ್ಬರು ಸ್ನೇಹಿತೆಯರ ಜತೆ ಹೋಟೆಲ್ ಒಂದಕ್ಕೆ ಊಟಕ್ಕೆ ತೆರಳಿದ್ದಾರೆ. ಆ ವೇಳೆ ಅಲ್ಲೇ ಇದ್ದ ಸ್ಥಳೀಯ ಯುವಕರು ಮದ್ಯದ ಅಮಲಿನಲ್ಲಿ ಯುವತಿಯರ ಬಗ್ಗೆ ಅಶ್ಲೀಲ ಪದ ಬಳಕೆ ಮಾಡಿ ಮಾತನಾಡಿದ್ದಾರೆ. ಆಗ ಕ್ರೋಧಗೊಂಡ ಜಗದೀಪ್ ಸಿಂಗ್ ಸಭ್ಯತೆಯಿಂದ ವರ್ತಿಸುವಂತೆ ಹೇಳಿದ್ದಾರೆ.
ಆದರೆ ಇದರಿಂದ ಮತ್ತಷ್ಟು ಆಕ್ರೋಶಗೊಂಡ ಸ್ಥಳೀಯ ಯುವಕರು ಜಗದೀಶ್ ಸಿಂಗ್ ಹಾಗೂ ಸುಹಾನ್ ಮೇಲೆ ಬಿಯರ್ ಬಾಟಲಿ ಬಳಸಿ ಹಲ್ಲೆ ನಡೆಸಿದ್ದಾರೆ. ಜಗದೀಪ್ ಸಿಂಗ್ ಕತ್ತನ್ನು ಸೀಳಿದ ಯುವಕರು ಅಲ್ಲಿಂದ ಕಾಲ್ಕಿತ್ತಿದ್ದಾರೆ.
ಹಲ್ಲೆಯಿಂದ ತೀವ್ರ ರಕ್ತಸ್ರಾವವಾಗಿದ್ದ ಜಗದೀಪ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸುಹಾನ್ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಘಟನೆ ಸಂಬಂಧ ಯಶವಂತಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರಶ್ನೆಪತ್ರಿಕೆ ಸೋರಿಕೆ,'ಚಂದಾ ಚೋರಿ' ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕಾಂಗ್ರೆಸ್ ನಿರ್ಧಾರ; 'ವಂದೇ ಮಾತರಂ'ನ ಎರಡು ಪ್ಯಾರಾ ಮಾತ್ರ ಹಾಡಲು ನಿರ್ಣಯ!

illegal gold mine: ಮಧ್ಯ ಆಫ್ರಿಕಾದಲ್ಲಿ ಭಯಾನಕ ದುರಂತ, ಚಿನ್ನದ ಗಣಿಯಲ್ಲಿ ಕುಸಿತ,100 ಮಂದಿ ದುರ್ಮರಣ! Video

ಮೂಡಾ ಅಕ್ರಮಕ್ಕೆ ಬ್ರೇಕ್: ₹2000 ಕೋಟಿ ಮೌಲ್ಯದ 1,100 ಸೈಟುಗಳ ಹಂಚಿಕೆ ರದ್ದು ಮಾಡಿದ ಯತೀಂದ್ರ ಸಿದ್ದರಾಮಯ್ಯ

ರೋಚಕ ಪಂದ್ಯದಲ್ಲಿ ಭಾರತ 5-3 ಗೋಲುಗಳಿಂದ ಪಾಕಿಸ್ತಾನವನ್ನು ಸೋಲಿಸಿ ವಿಶ್ವಕಪ್‌ನಿಂದ ಹೊರದೂಡಿದೆ!

ಬಾಲಿವುಡ್ ನಟ ಗೋವಿಂದಾ ದಾಂಪತ್ಯ ಕಿತ್ತಾಟದಲ್ಲಿ ಸ್ಫೋಟಕ ತಿರುವು: ವಿಚ್ಛೇದನ ಅರ್ಜಿ ಹಿಂಪಡೆದ ಪತ್ನಿ ಸುನೀತಾ ಅಹುಜಾ!