ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ಸ್ನೇಹಿತೆಯನ್ನು ಕೆಣಕಿದ್ದಕ್ಕೆ ವಿರೋಧ, ಬಿಯರ್ ಬಾಟಲಿಯಿಂದ ಕತ್ತು ಸೀಳಿ ಯುವಕನ ಬರ್ಬರ ಹತ್ಯೆ!

ಸ್ನೇಹಿತೆಯನ್ನು ಚುಡಾಯಿಸಿದ್ದಕ್ಕೆ ವಿರೋಧಿಸಿದ ಯುವಕನೊಬ್ಬನನ್ನು ಬಿಯರ್ ಬಾಟಲಿ ಬಳಸಿ ಕತ್ತು ಸೀಳಿ ಬರ್ಬರ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರು: ಸ್ನೇಹಿತೆಯನ್ನು ಚುಡಾಯಿಸಿದ್ದಕ್ಕೆ ವಿರೋಧಿಸಿದ ಯುವಕನೊಬ್ಬನನ್ನು ಬಿಯರ್ ಬಾಟಲಿ ಬಳಸಿ ಕತ್ತು ಸೀಳಿ ಬರ್ಬರ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರು ಮತ್ತಿಕೆರೆ ಸಮೀಪದ ಎಲ್ಎನ್ ಕಾಲೋನಿಯಲ್ಲಿ  ನಡೆದ ಘಟನೆಯಲ್ಲಿ ಉತ್ತರಾಖಂಡ್ ಮೂಲದ ಜಗದೀಪ್ ಸಿಂಗ್ (21)  ಸಾವನ್ನಪ್ಪಿದ ದುರ್ದೈವಿ.
ಘಟನೆ ವಿವರ
ಮತ್ತಿಕೆರೆ ಹೋಟೆಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ಜಗದೀಪ್ ಸಿಂಗ್ ಹಾಗೂ ಸುಹಾನ್ ಗುರುವಾರ ರಾತ್ರಿ ಇಬ್ಬರು ಸ್ನೇಹಿತೆಯರ ಜತೆ ಹೋಟೆಲ್ ಒಂದಕ್ಕೆ ಊಟಕ್ಕೆ ತೆರಳಿದ್ದಾರೆ. ಆ ವೇಳೆ ಅಲ್ಲೇ ಇದ್ದ ಸ್ಥಳೀಯ ಯುವಕರು ಮದ್ಯದ ಅಮಲಿನಲ್ಲಿ ಯುವತಿಯರ ಬಗ್ಗೆ ಅಶ್ಲೀಲ ಪದ ಬಳಕೆ ಮಾಡಿ ಮಾತನಾಡಿದ್ದಾರೆ. ಆಗ ಕ್ರೋಧಗೊಂಡ ಜಗದೀಪ್ ಸಿಂಗ್ ಸಭ್ಯತೆಯಿಂದ ವರ್ತಿಸುವಂತೆ ಹೇಳಿದ್ದಾರೆ.
ಆದರೆ ಇದರಿಂದ ಮತ್ತಷ್ಟು ಆಕ್ರೋಶಗೊಂಡ ಸ್ಥಳೀಯ ಯುವಕರು ಜಗದೀಶ್ ಸಿಂಗ್ ಹಾಗೂ ಸುಹಾನ್ ಮೇಲೆ ಬಿಯರ್ ಬಾಟಲಿ ಬಳಸಿ ಹಲ್ಲೆ ನಡೆಸಿದ್ದಾರೆ. ಜಗದೀಪ್ ಸಿಂಗ್ ಕತ್ತನ್ನು ಸೀಳಿದ ಯುವಕರು ಅಲ್ಲಿಂದ ಕಾಲ್ಕಿತ್ತಿದ್ದಾರೆ.
ಹಲ್ಲೆಯಿಂದ ತೀವ್ರ ರಕ್ತಸ್ರಾವವಾಗಿದ್ದ ಜಗದೀಪ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸುಹಾನ್ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಘಟನೆ ಸಂಬಂಧ ಯಶವಂತಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕರ್ನಾಟಕ ಸಿವಿಲ್ ಸೇವಾ ಹುದ್ದೆಗಳಿಗೆ ನೇಮಕಾತಿ ವಯೋಮಿತಿ 5 ವರ್ಷ ಹೆಚ್ಚಳಕ್ಕೆ ಸಚಿವ ಸಂಪುಟ ಅಸ್ತು

ಐಷಾರಾಮಿ ರಿಯಲ್ ಎಸ್ಟೇಟ್ ಮೂಲಕ ಅಮೆರಿಕದಿಂದ 'ಹೊಸ ಗಾಜಾ' ಕಟ್ಟುವ ಭರವಸೆ!

ಖ್ಯಾತ ಗಾಯಕಿ ಎಸ್ ಜಾನಕಿಗೆ ಪುತ್ರ ಶೋಕ: ಹಠಾತ್ ಹೃದಯಾಘಾತದಿಂದ ಮುರಳಿ ಕೃಷ್ಣ ಸಾವು!

1997ರ ಮಂಗಳೂರು ಡಬಲ್ ಮರ್ಡರ್ ಪ್ರಕರಣ: 29 ವರ್ಷಗಳ ಬಳಿಕ ಕುಖ್ಯಾತ 'ದಂಡುಪಾಳ್ಯ ಗ್ಯಾಂಗ್' ಸದಸ್ಯನ ಬಂಧನ!

ಟ್ರಂಪ್ ರ 'ಶಾಂತಿ ಮಂಡಳಿ' ಸೇರಲು ಭಾರತ ನಕಾರ; ಪಾಕಿಸ್ತಾನ ಸಹಿ!

SCROLL FOR NEXT