ಸಾಂದರ್ಭಿಕ ಚಿತ್ರ 
ರಾಜ್ಯ

ಉದ್ಯಮ ವಲಯಕ್ಕೂ ಕಾಲಿಟ್ಟ ಮೀ ಟೂ: ಜಾಹೀರಾತು ಸಂಸ್ಥೆಗಳ ಉನ್ನತಾಧಿಕಾರಿಗಳು ರಾಜೀನಾಮೆ

ಮಿ ಟೂ ಚಳವಳಿ ಹೆಚ್ಚು ಸದ್ದು ಮಾಡುತ್ತಿದೆ. ಸಿನಿಮಾ, ರಾಜಕೀಯ ಕ್ಷೇತ್ರದ ಕೆಲವು ಗಣ್ಯರ ವಿರುದ್ಧ ...

ಬೆಂಗಳೂರು: ಮಿ ಟೂ ಚಳವಳಿ ಹೆಚ್ಚು ಸದ್ದು ಮಾಡುತ್ತಿದೆ. ಸಿನಿಮಾ, ರಾಜಕೀಯ ಕ್ಷೇತ್ರದ ಕೆಲವು ಗಣ್ಯರ ವಿರುದ್ಧ ಕೇಳಿಬಂದಿದ್ದ ಆರೋಪ ಇದೀಗ ಉದ್ಯಮ ವಲಯಕ್ಕೆ ಕಾಲಿಟ್ಟಿದೆ.

ಲೈಂಗಿಕ ಕಿರುಕುಳ ಆರೋಪ ಹಿನ್ನಲೆಯಲ್ಲಿ ನಗರದ ಜಾಹೀರಾತು ಸಂಸ್ಥೆಯಾದ ಹ್ಯಾಪಿ ಮ್ಯಾಕ್ಗರ್ರಿ ಬೊವೆನ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕಾರ್ತಿಕ್ ಅಯ್ಯರ್, ವ್ಯವಸ್ಥಾಪಕ ನಿರ್ದೇಶಕ ಪ್ರವೀಣ್ ದಾಸ್, ಹಿರಿಯ ಕ್ರಿಯಾಶೀಲ ನಿರ್ದೇಶಕ ಬೋಧಿಸತ್ವ ದಾಸಗುಪ್ತ ಮತ್ತು ಐಪ್ರಾಸ್ಪೆಕ್ಟ್ ಇಂಡಿಯಾ ನ್ಯಾಶನಲ್ ಕ್ರಿಯೇಟಿವ್ ನಿರ್ದೇಶಕ ದಿನೇಶ್ ಸ್ವಾಮಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಕಳೆದ ಅಕ್ಟೋಬರ್ 10ರಂದು ಹ್ಯಾಪಿ ಕ್ರಿಯೇಟಿವ್ ನ ಸಂಗತಿಗಳನ್ನು ಪತ್ರಕರ್ತೆ ಸಂಧ್ಯಾ ಮೆನನ್ ಟ್ವೀಟ್ ಮಾಡಿದ ನಂತರ ಈ ಬೆಳವಣಿಗೆ ನಡೆದಿದೆ. ಕಚೇರಿಯ ಮಹಿಳಾ ಸಿಬ್ಬಂದಿ ಬಗ್ಗೆ ಮೇಲಾಧಿಕಾರಿಗಳು ಅನುಚಿತವಾಗಿ ನಡೆದುಕೊಳ್ಳುತ್ತಾರೆ, ಕೇವಲವಾಗಿ ಮಾತನಾಡುತ್ತಾರೆ ಮತ್ತು ಕಚೇರಿಯ ಪಾರ್ಟಿಗಳಲ್ಲಿ ಮಹಿಳೆಯರಿಗೆ ಅಸುರಕ್ಷಿತ ವಾತಾವರಣವಿದೆ ಎಂದು ಟ್ವೀಟ್ ಮಾಡಿದ್ದರು.

ಟೆಂಟ್ಸು ಕಂಪೆನಿಯ ಐಪ್ರೊಸ್ಪೆಕ್ಟ್ ನಿಂದ ಬಂದ ದಿನೇಶ್ ಸ್ವಾಮಿ ಮಹಿಳಾ ನೌಕರರ ಮೇಲೆ ಲೈಂಗಿಕತೆಗೆ ಸಂಬಂಧಪಟ್ಟ ಜೋಕ್ಸ್ ಗಳನ್ನು ಕೂಡ ಮಾಡುತ್ತಿದ್ದರು ಎಂದು ಸಂಧ್ಯಾ ಮೆನನ್ ಟ್ವೀಟ್ ನಲ್ಲಿ ಬಹಿರಂಗಪಡಿಸಿದ್ದರು,

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

2nd Test: ವಿಂಡೀಸ್ ವಿರುದ್ಧ ಕುಲದೀಪ್ ಯಾದವ್ ಭರ್ಜರಿ ಬೌಲಿಂಗ್, ವಿಶ್ವ ದಾಖಲೆ

SCROLL FOR NEXT