ರಾಜ್ಯ

ಬೆಂಗಳೂರು: ಕಾರ್ -ಲಾರಿ ಡಿಕ್ಕಿ, ಒಂದೇ ಕುಟುಂಬದ ನಾಲ್ವರು ಸಾವು!

Raghavendra Adiga
ಬೆಂಗಳೂರು: ಕಾರ್ ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿ ಒಂದೇ ಕುಟುಂಬದ ನಾಲ್ವರು ದಾರುಣ ಸಾವಿಗೀಡಾದ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ಸಮೀಪ ನಡೆದಿದೆ.
ಕರ್ನಾಟಕದ ಗಡಿ ಆನೇಕಲ್ ಸಮೀಪದ ರಾಷ್ಟ್ರೀಯ ಹೆದ್ದಾರಿ 7ರಲ್ಲಿ ನಡೆದ ಘಟನೆಯಲ್ಲಿ ಮೇರಿ ಸರೋಜಾ(65), ಏಂಜೆಲ್(17), ಮೇರಿ ಅನಿತಾ(50) ಮತ್ತು ಡಲಾಸ್(20) ಎನ್ನುವವರು ಸಾವನ್ನಪ್ಪಿದ್ದಾರೆ. ಇನೂ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಘಟನೆ ವಿವರ
ತಮಿಳುನಾಡಿನ ನಾಗಮಂಗಲಂ ನಲ್ಲಿನ ಚರ್ಚ್ ಗೆ ತೆರಳಲು ತಯಾರಾಗಿದ್ದ ಕುಟುಂಬವೊಂದು ಕಾರಿನಲ್ಲಿ ತೆರಳುತ್ತಿದ್ದಾಗ ಮಾರ್ಗ ನಡುವೆ ವಿಳಾಸ ತಿಳಿಯಎಂದು ಕಾರನ್ನು ಪಕ್ಕದಲ್ಲಿ ನಿಲ್ಲಿಸಿದ್ದರು.ಈ ಸಮಯಕ್ಕೆ ಹಿಂಭಾಗದಿಂದ ಬಂದ ಟಿಪ್ಪರ್ ಲಾರಿ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ನಾಲ್ವರು ಸ್ಥಳದಲ್ಲೇ ಅಸುನೀಗಿದ್ದಾರೆ.
ಗಾಯಾಳುಗಳನ್ನು  ಕೃಷ್ಣಗಿರಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಸ್ಥಳಕ್ಕೆ ಶೂಲಗಿರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಕಲಿಸಿ ತನಿಖೆ ಕೈಗೊಂಡಿದ್ದಾರೆ.
SCROLL FOR NEXT