ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ಅಕ್ರಮ ಮರಳುಗಾಕೆ ನಡೆಸಿದ್ದ ಇಬ್ಬರ ಬಂಧನ

ಕೆರೆಯಿಂದ ಮರಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಇಬ್ಬರನ್ನು ಬೆಂಗಳೂರು ಪೋಲೀಸರು ಮಾಲು ಸಮೇತ ಬಂಧಿಸಿದ್ದಾರೆ.

ಬೆಂಗಳೂರು: ಕೆರೆಯಿಂದ ಮರಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಇಬ್ಬರನ್ನು ಬೆಂಗಳೂರು ಪೋಲೀಸರು ಮಾಲು ಸಮೇತ ಬಂಧಿಸಿದ್ದಾರೆ.
ಶನಿವಾರ ಬೆಳಿಗ್ಗೆ ಮುಗಳೂರು ಕೆರೆ ಸಮೀಪದಲ್ಲಿ ಮರಳು ತೆಗೆಯುತ್ತಿರುವುದನ್ನು ಗಮನಿಸಿದ ಕೆಲ ಸ್ಥಳೀಯರು ಅನಿಲ್ ಕುಮಾರ್ ಹಾಗೂ ಇತರರು ಈ ಸಂಬಂಧ ಪೋಲೀಸರಿಗೆ ಮಾಹಿತಿ ನೀಡಿದ್ದು ತಕ್ಷಣ ಸ್ಥಳಕ್ಕೆ ಆಗಮಿಸಿದ ಪೋಲೀಸರು ಇಬ್ಬರನ್ನು ಬಂಧಿಸಿದ್ದಾರೆ.
"ನಾವು ಆಪರೇಟರ್ ಗಳ ಬಗ್ಗೆ ದೂರಿತ್ತಿದ್ದೇವೆ.ಘಟನೆಯ ಸಂಬಂದ ಪ್ರಾದೇಶಿಕ ತಹಶೀಲ್ದಾರರಿಗೆ ಮಾಹಿತಿ ನೀಡಿದ್ದೇವೆ" ಅನಿಲ್ಕುಮಾರ್ ಹೇಳಿದ್ದಾರೆ.
ಕಳೆದ ಕೆಲ ದಿನಗಳಿಂದ ಕೆರೆಯಿಂದ ಮರಳು ತೆಗೆಯುತ್ತಿರುವ್ವರ ವಿರುದ್ಧ ಸ್ಥಳೀಯರು ಪ್ರತಿಭಟನೆ ನಡೆಸಿದ್ದು ಇದೀಗ ಈ ಅಕ್ರಮ ಮರಳು ಗಣಿಗಾರಿಕೆ ನಡೆಸುವವರ ವಿರುದ್ಧ  ಎಫ್ಐಆರ್ ದಾಖಲಿಸಿದ್ದಾರೆ.
ಶನಿವಾರ ಬೆಳಿಗ್ಗೆ ಅಕ್ರಮ ಮರಳು ಗಣಿಗಾರಿಕೆ ನಡೆಯುವುದು ತಿಳಿಯುವ ಮುನ್ನ ಸಹ ಸ್ಥಳೀಯರು ಅಕ್ರಮ ಮರಳು ಸಾಗಣೆ ವಿರುದ್ಧ ಚರ್ಚಿಸಲು ಸಭೆ ಸೇರಿದ್ದರು.ಆ ವೇಳೆ ಕೆರೆ ಸುತ್ತಮುತ್ತ ಟ್ರಕ್ಕುಗಳ ಚಲನೆ ಕುರಿತಂತೆ ಕಳವಳ ವ್ಯಕ್ತವಾಗಿದ್ದು ಮರಳುಗಾರಿಕೆಯಿಂದಾಗಿ ಪರಿಸರ ವ್ಯವಸ್ಥೆಯಲ್ಲಿ ಪ್ರತಿಕೂಲ ಸ್ಥಿತಿ ನಿರ್ಮಾಣವಾಗಲಿದೆ.ಅಲ್ಲದೆ ಟ್ರಕ್ ಗಳ ಚಲನೆ ಅತಿಯಾಗಿದ್ದು ಇದರಿಂದ ರಸ್ತೆಗಳು ಹಾನಿಗೊಳಗಾಗುತ್ತಿದೆ ಎಂದು ಸಭೆಯಲ್ಲಿ ಪಾಲ್ಗೊಂಡ ಸ್ಥಳೀಯ ನಿವಾಸಿಯೊಬ್ಬರು ಹೇಳಿದ್ದಾರ್ತೆ.
ಈ ಪ್ರದೇಶದಲ್ಲಿ ಅನೇಕ ಐಟಿ ಕಂಪನಿಗಳಿದ್ದು ಕೆರೆ ಸುತ್ತಲಿನ ಭೂಮಿಗೆ ಅಪಾರ ಬೆಲೆ ಇದೆ. ಇಲ್ಲಿ ಅನೇಕ ಅಕ್ರಮ ಚಟುವಟಿಕೆಗಳು, ಕಾನೂನುಬಾಹಿರ ಚಟುವಟಿಕೆಗಳು ನಡೆಯುತ್ತಿದೆ."ಈ ಚಟುವಟಿಕೆಗಳನ್ನು ನಿಲ್ಲಿಸಲು ಮತ್ತು ದೊಡ್ಡಕೆರೆ ಪ್ರದೇಶವನ್ನು  ಪುನಶ್ಚೇತನಗೊಳಿಸಲು ಅಧಿಕಾರಿಗಳು ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸಲು ಅಕ್ಟೋಬರ್ 30 ರಂದು ಪ್ರತಿಭಟನೆ ಹಮ್ಮಿಕೊಳ್ಳಲು ತೀರ್ಮಾನಿಸಿದ್ದೇವೆ"ಜಗದೀಶ್ವರ್ ಎನ್ನುವ ಸ್ಥಳೀಯರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವೇನ್ ಮುಚ್ಚೋದು ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ- ಇರಾನ್ ಗೆ ಟ್ರಂಪ್ ಶಾಕ್!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ; Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ, Turkey ಬೇಸ್ತು!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್, KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

IPL 2026: ಬಟ್ಲರ್ 14,000 ರನ್ ದಾಖಲೆ; ಮಿಂಚಿದ ಶುಭ್ಮನ್ ಗಿಲ್, ಪ್ರಸಿದ್ಧ್ ಕೃಷ್ಣ; LSG ವಿರುದ್ಧ GT ಗೆಲುವು!

US-Iran ಶಾಂತಿ ಮಾತುಕತೆ ವಿಫಲ ಬೆನ್ನಲ್ಲೇ Pakistanಗೆ ಜಾಕ್‌ಪಾಟ್‌: ಕತಾರ್, ಸೌದಿಯಿಂದ 5 ಬಿಲಿಯನ್ ಡಾಲರ್ ಆರ್ಥಿಕ ನೆರವು!

SCROLL FOR NEXT