ಸಂಗ್ರಹ ಚಿತ್ರ 
ರಾಜ್ಯ

ಸಮಯಾವಕಾಶದ ಕೊರತೆ, ಕನ್ನಡ ಸಾಹಿತ್ಯ ಸಮ್ಮೇಳನ ಮುಂದೂಡಿಕೆ!

ಸಮಯಾವಕಾಶದ ಕೊರತೆಯಿಂದಾಗಿ ಡಿಸೆಂಬರ್ ನಲ್ಲಿ ನಡೆಯಬೇಕಿದ್ದ 84ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಜನವರಿಗೆ ಮುಂದೂಡಿಕೆ ಮಾಡಲಾಗಿದೆ ಎಂದು ತಿಳಿಬಂದಿದೆ.

ಬೆಂಗಳೂರು: ಸಮಯಾವಕಾಶದ ಕೊರತೆಯಿಂದಾಗಿ ಡಿಸೆಂಬರ್ ನಲ್ಲಿ ನಡೆಯಬೇಕಿದ್ದ 84ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಜನವರಿಗೆ ಮುಂದೂಡಿಕೆ ಮಾಡಲಾಗಿದೆ ಎಂದು ತಿಳಿಬಂದಿದೆ.
ಮೂಲಗಳ ಪ್ರಕಾರ ಇದೇ ಡಿಸೆಂಬರ್  7, 8, 9ಕ್ಕೆ ನಡೆಯಬೇಕಿದ್ದ 84ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಪೂರ್ವಸಿದ್ಧತೆಗೆ ಸಮಯಾವಕಾಶ ಅಭಾವ ಕಾರಣ ನೀಡಿ 2019 ರ ಜನವರಿ 6,7,8ಕ್ಕೆ ಮುಂದೂಡಲಾಗಿದೆ.
ಕನ್ನಡ ಸಾಹಿತ್ಯ ಪರಿಷತ್​ನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಮನು ಬಳಿಗಾರ್ ಅವರು ಮಾತನಾಡಿ, 'ಧಾರವಾಡದ ಕರ್ನಾಟಕ ಕಾಲೇಜು ಆವರಣದಲ್ಲಿ ನಡೆಯಲಿರುವ ಸಮ್ಮೇಳನದ ಬಗ್ಗೆ ಈಗಾಗಲೇ 3 ಸಿದ್ಧತಾ ಸಭೆ ನಡೆಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಒಳಗೊಂಡ ಸ್ವಾಗತ ಸಮಿತಿ ಅಕ್ಟೋಬರ್ 17ರಂದು ಸಭೆ ನಡೆಸಿ, ಸಮ್ಮೇಳನವನ್ನು ಒಂದು ತಿಂಗಳು ಮುಂದೂಡಿದರೆ ಸಾಕಷ್ಟು ಸಿದ್ಧತೆ ಮಾಡಿಕೊಂಡು ಅರ್ಥಪೂರ್ಣವಾಗಿ ಆಚರಿಸಬಹುದು ಎಂದು ಸಲಹೆ ನೀಡಿದೆ. ಈ ನಿಟ್ಟಿನಲ್ಲಿ ಜನವರಿ ಮೊದಲ ವಾರ ಆಯೋಜನೆಗೆ ನಿರ್ಧರಿಸಿದ್ದೇವೆ. ಈ ವಿಚಾರವನ್ನು ಸಮ್ಮೇಳನಾಧ್ಯಕ್ಷ ಡಾ. ಚಂದ್ರಶೇಖರ ಕಂಬಾರರಿಗೂ ತಿಳಿಸಲಾಗಿದ್ದು, ಅವರೂ ಕೂಡ ಸಮ್ಮತಿಸಿದ್ದಾರೆ ಎಂದರು.
ಇನ್ನು ಸಮ್ಮೇಳನದಲ್ಲಿ 20 ಗೋಷ್ಠಿ ನಡೆಯಲಿದ್ದು, ಸಾಹಿತಿ ಡಾ.ಸಿ.ಎನ್. ರಾಮಚಂದ್ರನ್ ನೇತೃತ್ವದಲ್ಲಿ ಪ್ರೊ.ಎಲ್.ಎನ್. ಮುಕುಂದರಾಜ್, ಡಾ. ನೀಲಗಿರಿ ತಳವಾರ, ಡಾ.ಕೆ. ಶಾರದಾ, ಡಾ. ಪದ್ಮರಾಜ್ ದಂಡಾವತಿ, ಡಾ. ರಾಜೇಶ್ವರಿ ಮಹೇಶ್ವರಯ್ಯ ಒಳಗೊಂಡ ಸಮಿತಿಯು ಗೋಷ್ಠಿಯ ವಿಷಯಗಳನ್ನು ಅಂತಿಮಗೊಳಿಸಿದೆ. ಗೋಷ್ಠಿಯಲ್ಲಿ ಭಾಗವಹಿಸುವ ವಿದ್ವಾಂಸರ ಆಯ್ಕೆ ಇನ್ನೂ ನಡೆದಿಲ್ಲ ಎಂದು ಬಳಿಗಾರ್ ಮಾಹಿತಿ ನೀಡಿದರು.
28 ವರ್ಷದ ನಂತರ ಧಾರವಾಡ ಜಿಲ್ಲೆ ಸಮ್ಮೇಳನದ ಆತಿಥ್ಯ ವಹಿಸಿಕೊಂಡಿದ್ದು, ಲಕ್ಷಕ್ಕೂ ಅಧಿಕ ಜನ ಸೇರುವ ನಿರೀಕ್ಷೆಯಿದೆ. ಹೀಗಾಗಿ 12 ಕೋಟಿ ರೂ. ಅನುದಾನ ನೀಡುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದೇವೆ ಎಂದು ಮನು ಬಳಿಗಾರ್ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT